ಬಾಳೆಹೊನ್ನೂರುಪಟ್ಟಣ ಹಾಗೂ ಹೋಬಳಿಯಾದ್ಯಂತ ಶ್ರದ್ಧಾ, ಭಕ್ತಿಯಿಂದ ಭಾನುವಾರ ಮಹಾಶಿವರಾತ್ರಿಆಚರಣೆ ಶಿವನಾಮ ಸ್ಮರಣೆ ಯೊಂದಿಗೆ ನಡೆದಿದ್ದು, ದೇವಾಲಯಗಳಲ್ಲಿ ‘ಓಂ ನಮಃ ಶಿವಾಯ’ ಮಂತ್ರ ಘೋಷಗಳು ಮೊಳಗಿದವು.
ದೇವಾಲಯದಲ್ಲಿ ಮೊಳಗಿದ ಓಂ ನಮಃ ಶಿವಾಯಕನ್ನಡಪ್ರಭ ವಾರ್ತೆ ಬಾಳೆಹೊನ್ನೂರು
ಪಟ್ಟಣ ಹಾಗೂ ಹೋಬಳಿಯಾದ್ಯಂತ ಶ್ರದ್ಧಾ, ಭಕ್ತಿಯಿಂದ ಭಾನುವಾರ ಮಹಾಶಿವರಾತ್ರಿಆಚರಣೆ ಶಿವನಾಮ ಸ್ಮರಣೆ ಯೊಂದಿಗೆ ನಡೆದಿದ್ದು, ದೇವಾಲಯಗಳಲ್ಲಿ ‘ಓಂ ನಮಃ ಶಿವಾಯ’ ಮಂತ್ರ ಘೋಷಗಳು ಮೊಳಗಿದವು.ಶಿವರಾತ್ರಿ ಪ್ರಯುಕ್ತ ಸುತ್ತಮುತ್ತಲಿನ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಏಕದಶವಾರ ರುದ್ರಾಭಿಷೇಕ, ಅರ್ಚನೆ, ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನ ನೆರವೇರಿಸಲಾಯಿತು. ಸ್ಥಳೀಯ ಮಾರ್ಕಾಂಡೇಶ್ವರ ದೇವಸ್ಥಾನ, ರಂಭಾಪುರಿ ಪೀಠದ ವೀರಭದ್ರೇಶ್ವರ, ಸೋಮೇಶ್ವರ ದೇವಾಲಯ, ಇಟ್ಟಿಗೆ ಸೀಗೋಡು ಬಿಜಿಎಸ್ ಕ್ಯಾಂಪಸ್ನ ಈಶ್ವರ ದೇವಸ್ಥಾನ, ಗಡಿಗೇಶ್ವರ ಭವಾನಿ ಶಂಕರೇಶ್ವರ ದೇವಾಲಯ, ಮಾಗುಂಡಿ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ, ಮುದುಗುಣಿ ಶಿವಗಂಗಾ ದೇವಸ್ಥಾನ, ಬೈರೇಗುಡ್ಡದ ಕಾಲಬೈರವೇಶ್ವರ ದೇವಸ್ಥಾನ ಹಾಗೂ ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಪುರಾಣ ಪ್ರಸಿದ್ಧ ಖಾಂಡ್ಯ ತ್ರಯಂಬಕ ಮಾರ್ಕಾಂಡೇಶ್ವರ ದೇವಸ್ಥಾನಗಳಲ್ಲಿ ಶಿವನಿಗೆ ವಿಶೇಷ ರುದ್ರಾಭಿಷೇಕ ನೆರವೇರಿಸಿ ಅಲಂಕಾರ, ಪೂಜೆ, ಮಾಡಲಾಯಿತು.ಎಲ್ಲೆಡೆ ಶಿವಾಲಯಗಳ ಮುಂಭಾಗ ಅಕ್ಕಿ ಹಾಗೂ ಭತ್ತವನ್ನಿಟ್ಟು ಅದರ ಮೇಲ್ಭಾಗದಲ್ಲಿ ಕುಂಬಳಕಾಯಿ ಕಡಿದು ಎಳ್ಳೆಣ್ಣೆ, ಎಳ್ಳು ಹಾಕಿ ದೀಪ ಹಚ್ಚಿ ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿ ಹಾಗೂ ದೋಷ ನಿವಾರಣೆಗೆ ಹರಕೆ, ಪ್ರಾರ್ಥನೆ ಸಲ್ಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.ಪಟ್ಟಣದ ಮಾರ್ಕಾಂಡೇಶ್ವರ ದೇವಾಲಯದಲ್ಲಿ ಮುಂಜಾನೆ 4 ಗಂಟೆಯಿಂದಲೇ ನಿರಂತರ ಅಭಿಷೇಕ ನಡೆದು ಸಂಜೆ ಪ್ರದೋಶ ಕಾಲದಲ್ಲಿ ಪ್ರಧಾನ ಅರ್ಚಕ ಕುಂದೂರು ಪ್ರಕಾಶ್ಭಟ್, ನೇತೃತ್ವದಲ್ಲಿ ರುದ್ರಾಭಿಷೇಕವನ್ನು 11 ಜನ ಪುರೋಹಿತರ ನೇತೃತ್ವದಲ್ಲಿ ನೆರವೇರಿಸಲಾಯಿತು. ಹಬ್ಬದ ಪ್ರಯುಕ್ತ ದೇವಾಲಯಗಳಲ್ಲಿ ಭಕ್ತರ ಮಹಾಪೂರವೇ ಹರಿದಿತ್ತು. ಪಟ್ಟಣದ ಮಾರ್ಕಾಂಡೇಶ್ವರ ಹಾಗೂ ಖಾಂಡ್ಯ ಮಾರ್ಕಾಂಡೇಶ್ವರ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕಾಗಿ ಭಕ್ತರು ಸಾಲುಗಟ್ಟಿ ನಿಂತಿದ್ದ ದೃಶ್ಯಕಂಡುಬಂದಿತು. ಹಲವೆಡೆ ರಾತ್ರಿ ಶಿವರಾತ್ರಿ ಜಾಗರಣೆ ಆಚರಣೆಗೆ ಸಿದ್ಧತೆ ಭರದಿಂದ ಸಾಗಿತ್ತು. ಜಾಗರಣೆ ಅಂಗವಾಗಿ ಹಲವೆಡೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನೆರವೇರಿದವು. ೧೫ಬಿಹೆಚ್ಆರ್ ೧:
ಬಾಳೆಹೊನ್ನೂರಿನ ಮಾರ್ಕಾಂಡೇಶ್ವರ ದೇವಸ್ಥಾನದ ಮುಂಭಾಗ ಮಹಾಶಿವರಾತ್ರಿ ಅಂಗವಾಗಿ ನೂರಾರು ಭಕ್ತರು ದೋಷ ನಿವಾರಣೆಗಾಗಿ ಕುಂಬಳಕಾಯಿ ದೀಪ ಹಚ್ಚಿ ಪ್ರಾರ್ಥಿಸಿದರು.೧೫ಬಿಹೆಚ್ಆರ್ ೨: ಬಾಳೆಹೊನ್ನೂರಿನ ಮಾರ್ಕಾಂಡೇಶ್ವರ ಸ್ವಾಮಿಗೆ ಮಹಾಶಿವರಾತ್ರಿ ಅಂಗವಾಗಿ ವಿಶೇಷ ಅಲಂಕಾರ ಮಾಡಲಾಗಿತ್ತು.೧೫ಬಿಹೆಚ್ಆರ್ ೩: ಬಾಳೆಹೊನ್ನೂರು ಸಮೀಪದ ಪುರಾಣ ಪ್ರಸಿದ್ಧ ಖಾಂಡ್ಯ ತ್ರಯಂಬಕ ಮಾರ್ಕಾಂಡೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಅಂಗವಾಗಿ ಮಾರ್ಕಾಂಡೇಶ್ವರನಿಗೆ ವಿಶೇಷ ಅಲಂಕಾರ ನೆರವೇರಿಸಿ ಮಹಾಪೂಜೆ ಮಾಡಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.