ಬೆಳ್ತಂಗಡಿ: ನಿಮ್ಮ ಎಲ್ಲಾ ಕಷ್ಟಗಳನ್ನು ಶಿವನಿಗೆ ಅರ್ಪಿಸಿ, ಸುವಿಚಾರಗಳನ್ನು ಮಾತ್ರ ಕೊಂಡು ಹೋಗಿ. ವಿಷಕಂಠನಾದ ಶಿವನಿಗೆ ಮಾತ್ರ ಹಾಲಾಹಲ ಸ್ವೀಕರಿಸುವ ಸಾಮರ್ಥ್ಯವಿದೆ. ನನಗೆ ಎಂದು ವೈಯಕ್ತಿಕವಾಗಿ ಸುಖಕ್ಕಾಗಿ ಪ್ರಾರ್ಥಿಸುವ ಬದಲು ನಮಗೆ, ಇಡಿ ಸಮಾಜಕ್ಕೆ ಕಲ್ಯಾಣವಾಗಲಿ ಎಂಬ ಪ್ರಾರ್ಥನೆ ನಿಮ್ಮದಾಗಲಿ ಎಂದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಶ್ರೀನಿವಾಸ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು. ಅಹೋರಾತ್ರಿ ಶಿವಪಂಚಾಕ್ಷರಿ ಪಠಣ ನಡೆಯಿತು. ಭಕ್ತರು ದೇವರದರ್ಶನ ಮಾಡಿ ವಿಶೇಷವಾಗಿ ಎಳನೀರಿನ ಅಭಿಷೇಕ ಮತ್ತು ಶತರುದ್ರಾಭಿಷೇಕ ಸೇವೆ ಸಲ್ಲಿಸಿ ಧನ್ಯತೆ ಹೊಂದಿದರು.
ದೇವಳ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಉಪಸ್ಥಿತರಿದ್ದು ಸಮಾರಂಭದ ಯಶಸ್ಸಿಗೆ ಸಹಕರಿಸಿದರು.ಭಕ್ತರಿಂದ ಅನ್ನದಾಸೋಹ:ಬೆಂಗಳೂರಿನ ಭಕ್ತರು 1, 75, 000 ಮಂದಿಗೆ ಉಚಿತವಾಗಿ ಅನ್ನದಾಸೋಹ ಮಾಡಿ ಧನ್ಯತೆಯನ್ನು ಹೊಂದಿದರು. ಅನ್ನಪೂರ್ಣ ಭೋಜನಾಲಯದ ಹಿಂಬದಿಯ ಮೈದಾನ ಮತ್ತು ಹೈಸ್ಕೂಲು ಕ್ರೀಡಾಂಗಣದಲ್ಲಿ ಅನ್ನದಾಸೋಹಕ್ಕೆ ವ್ಯವಸ್ಥೆ ಮಾಡಲಾಯಿತು.ಬೆಂಗಳೂರಿನ ಶ್ರೀನಿವಾಸ ರೆಡ್ಡಿ ಮತ್ತು ಬಳಗ (80 ಸ್ವಯಂಸೇವಕರು) ಯಲಹಂಕದ ತಿಮ್ಮಾ ರೆಡ್ಡಿ, ಮತ್ತು ಬಳಗ (50 ಸ್ವಯಂಸೇವಕರು) ಆನೇಕಲ್ ಮುನಿರೆಡ್ಡಿ ಮತ್ತು ಬಳಗ (50 ಸ್ವಯಂಸೇವಕರು), ಹೊಸೂರು ರಾಜ ರೆಡ್ಡಿ ಮತ್ತು ಬಳಗ (50 ಸ್ವಯಂಸೇವಕರು), ಆನೇಕಲ್ ಗೋಪಾಲ ರೆಡ್ಡಿ ಮತ್ತು ಬಳಗ (50 ಸ್ವಯಂಸೇವಕರು), ಮಾಲೂರು ರಾಮಕೃಷ್ಣ ಮತ್ತು ಬಳಗ (30 ಸ್ವಯಂಸೇವಕರು), ಸರ್ಜಾಪುರ ಬಸವರಾಜ ಮತ್ತು ಬಳಗ (50 ಸ್ವಯಂಸೇವಕರು), ನಾಗರಬಾವಿ ಪುಷ್ಪಮಂಜು ಬಳಗ (50 ಸ್ವಯಂಸೇವಕರು), ಶ್ರೀ ಮಂಜುನಾಥ ಸ್ವಾಮಿ ಪಾದಯಾತ್ರೆ ಸೇವಾ ಸಮಿತಿ, ಬೀರೂರು (25 ಸ್ವಯಂಸೇವಕರು), ಶ್ರೀ ಕ್ಷೇತ್ರ ಧರ್ಮಸ್ಥಳ ಅನ್ನಸಂತರ್ಪಣಾ ಸಮಿತಿ, ನಾಗರಬಾವಿ ಬೆಂಗಳೂರು (100 ಸ್ವಯಂಸೇವಕರು), ಕೃಷ್ಣ ರೆಡ್ಡಿ, ಆನೇಕಲ್, ಬೆಂಗಳೂರು (100 ಸ್ವಯಂಸೇವಕರು), ಶ್ರೀ ಮಂಜುನಾಥ ಸ್ವಾಮಿ ಪಾದಯಾತ್ರೆ ಸೇವಾ ಸಮಿತಿ, ಮಲ್ಲೇಶ್ವರಂ, ಬೆಂಗಳೂರು (50 ಸ್ವಯಂಸೇವಕರು), ಒಟ್ಟು 12 ತಂಡಗಳಲ್ಲಿ 635 ಸ್ವಯಂಸೇವಕರು 1, 75, 000 ಮಂದಿಗೆ ಅನ್ನದಾಸೋಹ ಸೇವೆ ಅರ್ಪಿಸಿದರು.