ಮಾಹೆ ಪರಿಸರ ದಿನಾಚರಣೆ: ಹಸಿರು ಮೆರವಣಿಗೆ

KannadaprabhaNewsNetwork |  
Published : Jun 06, 2026, 02:30 AM IST
ಮಾಹೆಯಲ್ಲಿ ವಿಶ್ವಪರಿಸರ ದಿನಾಚರಣೆಗೆ ಗಿಡವನ್ನು ನೆಟ್ಟು ಚಾಲನೆ ನೀಡಲಾಯಿತು  | Kannada Prabha

ಸಾರಾಂಶ

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಕ್ಯಾಂಪಸ್‌ನಲ್ಲಿ ವಿಶ್ವ ಪರಿಸರ ದಿನವನ್ನು ಶುಕ್ರವಾರ ಆಚರಿಸಲಾಯಿತು. ವಿಶ್ವಸಂಸ್ಥೆಯ ‘ಹವಾಮಾನ ಸಂರಕ್ಷಣೆಗಾಗಿ ಜಾಗತಿಕ ಕರೆ’ ಎಂಬ ಆಶಯದಡಿ ನಡೆದ ಈ ಅಭಿಯಾನದಲ್ಲಿ ಮಾಹೆಯ ಉನ್ನತ ಅಧಿಕಾರಿಗಳು, ಬೋಧಕರು, ಸ್ಥಳೀಯ ಶಾಲೆ ಮತ್ತು ಕಾಲೇಜುಗಳ ಸುಮಾರು 2000ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಕ್ಯಾಂಪಸ್‌ನಲ್ಲಿ ವಿಶ್ವ ಪರಿಸರ ದಿನವನ್ನು ಶುಕ್ರವಾರ ಆಚರಿಸಲಾಯಿತು. ವಿಶ್ವಸಂಸ್ಥೆಯ ‘ಹವಾಮಾನ ಸಂರಕ್ಷಣೆಗಾಗಿ ಜಾಗತಿಕ ಕರೆ’ ಎಂಬ ಆಶಯದಡಿ ನಡೆದ ಈ ಅಭಿಯಾನದಲ್ಲಿ ಮಾಹೆಯ ಉನ್ನತ ಅಧಿಕಾರಿಗಳು, ಬೋಧಕರು, ಸ್ಥಳೀಯ ಶಾಲೆ ಮತ್ತು ಕಾಲೇಜುಗಳ ಸುಮಾರು 2000ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಗಿಡವೊಂದನ್ನು ನೆಟ್ಟು ಮಾತನಾಡಿದ ಮಾಹೆಯ ಸಹ ಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಅವರು, ‘ಇಂದಿನ ದಿನಗಳಲ್ಲಿ ವಿಶ್ವವಿದ್ಯಾಲಯಗಳ ಜವಾಬ್ದಾರಿ ಕೇವಲ ತರಗತಿ ಹಾಗೂ ಪಠ್ಯಕ್ರಮಗಳಿಗಷ್ಟೇ ಸೀಮಿತವಾಗಿಲ್ಲ. ಹವಾಮಾನ ಬದಲಾವಣೆ ಎಂಬುದು ಕೇವಲ ಚರ್ಚೆಯ ವಿಷಯವಾಗಿ ಉಳಿದಿಲ್ಲ, ಅದು ನಾವು ಎದುರಿಸುತ್ತಿರುವ ಕಹಿ ಸತ್ಯ. ಪರಿಸರ ಪ್ರಜ್ಞೆ ಎಂಬುದು ನಮ್ಮ ದೈನಂದಿನ ಆಲೋಚನೆ ಮತ್ತು ಜೀವನಶೈಲಿಯ ಭಾಗವಾಗಬೇಕು ಎಂದು ಕರೆ ನೀಡಿದರು.

ಭೂವಿಜ್ಞಾನ ಸಚಿವಾಲಯದ ರಾಜ್ಯಮಟ್ಟದ ಪರಿಸರ ಮೇಲಿನ ಪರಿಣಾಮಗಳ ಅಧ್ಯಯನ ಪ್ರಾಧಿಕಾರದ (ಎಸ್‌ಇಐಎಎ) ಸದಸ್ಯ ಲಕ್ಷ್ಮೀಕಾಂತ್ ಎಚ್. ಎಂ. ಅವರು ಮಾತನಾಡಿ, ‘ಹವಾಮಾನ ಬದಲಾವಣೆಯ ಸವಾಲನ್ನು ಎದುರಿಸಲು ಪ್ರತಿಯೊಂದು ಹಂತದಲ್ಲೂ ಸಾಮೂಹಿಕ ಹೊಣೆಗಾರಿಕೆ ಮತ್ತು ನಿರಂತರ ಪ್ರಯತ್ನದ ಅಗತ್ಯವಿದೆ. ಪರಿಸರ ಪ್ರಜ್ಞೆಯುಳ್ಳ ನಾಗರಿಕರನ್ನು ರೂಪಿಸುವಲ್ಲಿ ಮತ್ತು ಸುಸ್ಥಿರ ಪದ್ಧತಿಗಳನ್ನು ಪ್ರೋತ್ಸಾಹಿಸುವಲ್ಲಿ ಶಿಕ್ಷಣ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸಬೇಕು ಎಂದು ಆಶಿಸಿದರು.

‘ಹಸಿರು ಮೆರವಣಿಗೆ’ಯು ಮಾಹೆಯ ಮುಖ್ಯ ಕಚೇರಿಯಿಂದ ಹೊರಟ ಒಂದೂವರೆ ಕಿಮಿ ಸಾಗಿ, ಎಂಡ್ ಪಾಯಿಂಟ್ ಪ್ರವೇಶ ದ್ವಾರದ ಬಳಿ ಮುಕ್ತಾಯಗೊಂಡಿತು. ವಿವಿಯ ಕ್ಯಾಂಪಸ್‌ನಲ್ಲಿ ಸಸಿಗಳನ್ನು ನೆಡುವ ಮೂಲಕ ಹಸಿರು ಆವರಣ ಹಾಗೂ ಪರಿಸರ ಸಂರಕ್ಷಣೆಯ ಸಂದೇಶ ಸಾರುವ ‘ವನಮಹೋತ್ಸವ’ವನ್ನು ಆಚರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉತ್ಪಾದನೆಯ ಶೇ.70ಕ್ಕೂ ಅಧಿಕ ಕಾಫಿ ರಫ್ತು: ಬಸವರಾಜ್‌
ಕಾಂಗ್ರೆಸ್ ನಾಯಕರ ಹೇಳಿಕೆಗಳು ಹಾಸ್ಯಾಸ್ಪದ: ನವೀನ್ ನಾಯಕ್