ಕ್ರೀಡಾ ಶ್ರೇಷ್ಠತೆಯನ್ನು ಉತ್ತೇಜಿಸಲು ಕರ್ನಾಟಕ ಒಲಿಂಪಿಕ್ಸ್‌ನಲ್ಲಿ ಕೈಜೋಡಿಸಿದ ಮಾಹೆ

KannadaprabhaNewsNetwork |  
Published : Jan 26, 2025, 01:33 AM IST
ಮರೇನಾ | Kannada Prabha

ಸಾರಾಂಶ

ಮಾಹೆಯ ಕ್ರೀಡಾ ಮಂಡಳಿಯು ಈ ಪಂದ್ಯಾಟ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ಮಾಹೆಯ ಎಂಡ್ ಪಾಯಿಂಟ್ ಮೈದಾನದಲ್ಲಿ ಹಾಕಿ ಪಂದ್ಯಗಳನ್ನು ಹಾಗೂ ಅತ್ಯಾಧುನಿಕ ಮರೀನಾ ಕ್ರೀಡಾ ಸಂಕೀರ್ಣದಲ್ಲಿ ಟೆನ್ನಿಸ್ ಮತ್ತು ಟೇಬಲ್ ಟೆನ್ನಿಸ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಮಾಹೆಯು ತನ್ನ ಹಾಸ್ಟೆಲ್‌ಗಳಲ್ಲಿ 700 ಕ್ರೀಡಾಪಟುಗಳಿಗೆ ವಸತಿ ಸೌಕರ್ಯವನ್ನು ಒದಗಿಸಿತ್ತು, ಸ್ಪರ್ಧೆಯ ಉದ್ದಕ್ಕೂ ಅವರಿಗೆ ಆರಾಮದಾಯಕ ಮತ್ತು ಸುರಕ್ಷಿತ ವ್ಯವಸ್ಥೆಗಳನ್ನು ಒದಗಿಸಿತ್ತು.

ಕನ್ನಡಪ್ರಭ ವಾರ್ತೆ ಮಣಿಪಾಲ

ಮಂಗಳೂರು ಮತ್ತು ಉಡುಪಿಯಲ್ಲಿ ಜ.17ರಿಂದ 23ರ ವರೆಗೆ ನಡೆದ ಕರ್ನಾಟಕ ರಾಜ್ಯ ಒಲಿಂಪಿಕ್ಸ್ 2025ರ ಆಯೋಜನೆಯಲ್ಲಿ ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಸಹಯೋಗ ನೀಡಿತ್ತು. ಮಾಹೆಯ ಈ ಭಾಗವಹಿಸುವಿಕೆಯು ಕ್ರೀಡಾರಂಗದಲ್ಲಿ ಶ್ರೇಷ್ಠತೆಯನ್ನು ಬೆಳೆಸುವ ಮತ್ತು ಕ್ರೀಡಾ ಮನೋಭಾವದ ಸಂಸ್ಕೃತಿಯನ್ನು ಉತ್ತೇಜಿಸುವ ತನ್ನ ಅಚಲ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.ಮಾಹೆಯ ಕ್ರೀಡಾ ಮಂಡಳಿಯು ಈ ಪಂದ್ಯಾಟ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ಮಾಹೆಯ ಎಂಡ್ ಪಾಯಿಂಟ್ ಮೈದಾನದಲ್ಲಿ ಹಾಕಿ ಪಂದ್ಯಗಳನ್ನು ಹಾಗೂ ಅತ್ಯಾಧುನಿಕ ಮರೀನಾ ಕ್ರೀಡಾ ಸಂಕೀರ್ಣದಲ್ಲಿ ಟೆನ್ನಿಸ್ ಮತ್ತು ಟೇಬಲ್ ಟೆನ್ನಿಸ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಮಾಹೆಯು ತನ್ನ ಹಾಸ್ಟೆಲ್‌ಗಳಲ್ಲಿ 700 ಕ್ರೀಡಾಪಟುಗಳಿಗೆ ವಸತಿ ಸೌಕರ್ಯವನ್ನು ಒದಗಿಸಿತ್ತು, ಸ್ಪರ್ಧೆಯ ಉದ್ದಕ್ಕೂ ಅವರಿಗೆ ಆರಾಮದಾಯಕ ಮತ್ತು ಸುರಕ್ಷಿತ ವ್ಯವಸ್ಥೆಗಳನ್ನು ಒದಗಿಸಿತ್ತು.ಮಾಹೆಯ ಈ ಸಹಯೋಗದ ಬಗ್ಗೆ ವಿವಿಯ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್, ಕ್ರೀಡೆ ಮತ್ತು ಅಥ್ಲೆಟಿಕ್ಸ್ ಸಮಗ್ರ ಶಿಕ್ಷಣದ ಭಾಗವಾಗಿವೆ. ಮಾಹೆಯಲ್ಲಿ ಯುವ ಕ್ರೀಡಾಪಟುಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುವ, ಕ್ರೀಡೆಗಳನ್ನು ಪೋಷಿಸುವ ನಮ್ಮ ಸಮರ್ಪಣೆಗೆ ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.ಮಾಹೆ ಉಪಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ.) ಎಂ.ಡಿ ವೆಂಕಟೇಶ್, ನಾವು ಕ್ರೀಡಾ ಮನೋಭಾವವನ್ನು ಹೆಚ್ಚಿಸುವ ಮತ್ತು ಸಮುದಾಯಗಳನ್ನು ಒಟ್ಟುಗೂಡಿಸುವಲ್ಲಿ ನಂಬಿಕೆ ಇಡುತ್ತೇವೆ. ಕರ್ನಾಟಕ ರಾಜ್ಯ ಒಲಿಂಪಿಕ್ಸ್ ಅನ್ನು ಆಯೋಜಿಸುವುದು ಮತ್ತು ಬೆಂಬಲಿಸುವುದು ಒಂದು ಹೆಮ್ಮೆ ತರುತ್ತದೆ ಮತ್ತು ಈ ಕಾರ್ಯಕ್ರಮದ ಯಶಸ್ಸಿಗೆ ನಮ್ಮ ಸೌಲಭ್ಯಗಳು ಮತ್ತು ಪರಿಣತಿಯನ್ನು ಒದಗಿಸಿದ್ದಕ್ಕೆ ಹೆಮ್ಮೆಪಡುತ್ತೇವೆ. ಕ್ರೀಡೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಸಾಧನೆ ಮಾಡುವ, ಅಭಿವೃದ್ಧಿಪಡಿಸುವ ನಮ್ಮ ದೃಷ್ಟಿಕೋನಕ್ಕೆ ಇದು ಸಂಪೂರ್ಣವಾಗಿ ಹೊಂದಿಕೆಯಾಗುತ್ತದೆ ಎಂದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

2025ರಲ್ಲಿ ಬಿಯರ್‌ ಮಾರಾಟ ಭಾರೀ ಕುಸಿತ
ಜನಾಶೀರ್ವಾದದಿಂದ ದೀರ್ಘಾವಧಿ ಸಿಎಂ : ಸಿದ್ದು