ಕನ್ನಡಪ್ರಭ ವಾರ್ತೆ ಹಲಗೂರು
ಹಾಡ್ಲಿ ಸರ್ಕಲ್ ಸಮೀಪದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ತೆಂಗಿನ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಂದು ಜೀವಿಗೂ ಆಮ್ಲಜನಕದ ಅವಶ್ಯಕತೆ ಹೆಚ್ಚಾಗಿದೆ. ಆಮ್ಲಜನಕದ ಕೊರತೆಯಿಂದ ಕೋರೋನಾ ವೇಳೆ ಸಾವಿರಾರು ಜನರ ಜೀವಗಳು ಬಲಿಯಾಗಿದೆ. ಆದ್ದರಿಂದ ಪರಿಸರದಲ್ಲಿ ಆಮ್ಲಜನಕದ ಸಮತೋಲನ ಬರಬೇಕು. ಹೀಗಾಗಿ ಹೆಚ್ಚು ಹೆಚ್ಚು ಮರ, ಗಿಡಗಳನ್ನು ನೆಡಬೇಕು ಎಂದು ಕರೆ ನೀಡಿದರು.ಮೊದಲೆಲ್ಲ ಮಳೆ, ಬಿಸಿಲು ಯಾವಾಗ ಬರುತ್ತದೆ ಎಂಬುದು ತಿಳಿದಿತ್ತು. ಆದರೆ, ಈಗ ಎಲ್ಲಾ ವ್ಯತ್ಯಾಸವಾಗಿ ಪರಿಸರದಲ್ಲಿ ಅಸಮತೋಲನ ಉಂಟಾಗಿದೆ. ಹೆಚ್ಚು ಗಿಡಮರಗಳನ್ನು ಬೆಳೆಸಿ ವಾತಾವರಣದಲ್ಲಿ ಸಮತೋಲನ ಕಾಪಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶರು, ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ನಾಜಿಯಾ ಕೌಸರ್ ಮಾತನಾಡಿ, ಪರಿಸರದ ಬಗ್ಗೆ ನಾವು ಹೆಚ್ಚು ಗಮನ ಹರಿಸಬೇಕು. ವಾತಾವರಣದಲ್ಲಿ ಸಮತೋಲನ ಕಾಪಾಡಲು ಗಿಡಮರಗಳನ್ನು ಹೆಚ್ಚು ಬೆಳೆಸುವಂತೆ ಮನದಟ್ಟು ಮಾಡುವುದು ಅಗತ್ಯ ಎಂದರು.
ಕಾಲೇಜು ವತಿಯಿಂದ ಎಲ್ಲರನ್ನೂ ಸನ್ಮಾನಿಸಿ ಅಭಿನಂದಿಸಲಾಯಿತು. ಪ್ರಭಾರ ಪ್ರಾಂಶುಪಾಲರಾದ ಶಹೀಬ್ ಖಾನ್, ಟಿ.ವಿ.ಶಿವಕುಮಾರ್, ಜಿ.ಆನಂದ, ಕಾಂತಾಮಣಿ ಎಚ್.ಎಸ್. ಆಶಾ ಜಿ.ಎಂ., ಆಶಾ ಎಂ. ಪಲ್ಲವಿ ಹಾಗೂ ಸಿಡಿಸಿ ಉಪಾಧ್ಯಕ್ಷರು ಲಿಂಗರಾಜು ಸೇರಿದಂತೆ ಇತರರು ಇದ್ದರು.