ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ: ವಿದ್ಯಾ ದಭಾಡಿ

KannadaprabhaNewsNetwork |  
Published : Apr 10, 2025, 01:18 AM IST
ರಬಕವಿ ಬನಹಟ್ಟಿ ನಗರಸಭೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ನಗರಾಧ್ಯಕ್ಷೆ ವಿದ್ಯಾ ದಭಾಡಿ, ಶಾಸಕ ಸಿದ್ದು ಸವದಿ ಭೂಮಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಸರ್ಕಾರದ ಕೆಲಸ ದೇವರ ಕಾರ್ಯವಾಗಿದ್ದು, ಸಾರ್ವಜನಿಕ ಕಾಮಗಾರಿಗಳನ್ನು ಕೈಗೊಳ್ಳುವ ಸಂದರ್ಭದಲ್ಲಿ ಪ್ರಾಮಾಣಿಕವಾಗಿ ಕಾರ್ಯ ಮಾಡುವುದರ ಜೊತೆಗೆ ಗುತ್ತಿಗೆದಾರರು ಮತ್ತು ಅಧಿಕಾರಿಗಳು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು ನಗರಾಧ್ಯಕ್ಷೆ ವಿದ್ಯಾ ದಭಾಡಿ ಹೇಳಿದರು.

ಕನ್ನಡಪ್ರಭ ವಾರ್ತ ರಬಕವಿ-ಬನಹಟ್ಟಿ

ಸರ್ಕಾರದ ಕೆಲಸ ದೇವರ ಕಾರ್ಯವಾಗಿದ್ದು, ಸಾರ್ವಜನಿಕ ಕಾಮಗಾರಿಗಳನ್ನು ಕೈಗೊಳ್ಳುವ ಸಂದರ್ಭದಲ್ಲಿ ಪ್ರಾಮಾಣಿಕವಾಗಿ ಕಾರ್ಯ ಮಾಡುವುದರ ಜೊತೆಗೆ ಗುತ್ತಿಗೆದಾರರು ಮತ್ತು ಅಧಿಕಾರಿಗಳು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು ನಗರಾಧ್ಯಕ್ಷೆ ವಿದ್ಯಾ ದಭಾಡಿ ಹೇಳಿದರು.

ಶಾಸಕರೊಡನೆ ಸೋಮವಾರ ರಬಕವಿ-ಬನಹಟ್ಟಿ ನಗರಸಭೆಯ ವ್ಯಾಪ್ತಿಯ ವಾರ್ಡ್ ನಂ.೧ ಸೇರಿ ಹಲವಾರು ವಾರ್ಡ್‌ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಮುಂದಿನ ದಿನಗಳಲ್ಲಿ ರಬಕವಿ, ಬನಹಟ್ಟಿ ನಗರಸಭೆ, ತೇರದಾಳ ಮತ್ತು ಮಹಾಲಿಂಗಪುರ ಪುರಸಭೆಗಳಲ್ಲಿ ಅಂದಾಜು ₹೩ ಕೋಟಿ ವೆಚ್ಚದಲ್ಲಿ ೨೨ ಕಾಮಗಾರಿ ಕೈಗೊಳ್ಳಲಾಗುವುದು. ಅವುಗಳಲ್ಲಿ ಸದ್ಯ ಎಂಟು ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು. ಅಭಿವೃದ್ಧಿ ಕಾಮಗಾರಿಗಳಲ್ಲಿ ಸಾರ್ವಜನಿಕರ ಸಹಕಾರ ಕೂಡ ಮುಖ್ಯವಾಗಿದೆ ಎಂದು ಶಾಸಕ ಸಿದ್ದು ಸವದಿ ಹೇಳಿದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಶ್ರೀಶೈಲ ಬೀಳಗಿ, ಅರುಣ ಬುದ್ನಿ, ಯಲ್ಲಪ್ಪ ಕಟಗಿ, ಅಭಯ ಎಂಡೊಳ್ಳಿ, ದುರ್ಗವ್ವ ಹರಿಜನ, ಶಿವಾನಂದ ದೇಸಾಯಿ, ದೀಪಾ ಕೊಣ್ಣೂರ, ಪೂರ್ಣಿಮಾ ಮುಳೆಗಾವಿ, ಪಾಂಡು ಯರಕನ್ನವರ, ಶಿವು ಬುದ್ನಿ, ಮುರಾದ ಮೋಮಿನ್ ಸೇರಿದಂತೆ ಅನೇಕರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!