ಕನ್ನಡಪ್ರಭ ವಾರ್ತೆ ಹನೂರು
ಜಮೀನಿನ ಸುತ್ತಲೂ ಕಲ್ಲು ಕಂಬ ಹಾಗೂ ಮೆಸ್ ಹಾಕಿದ್ದು ಎರಡು ಕಡೆ ಕಲ್ಲು ಕಂಬಗಳು ಹಾಗೂ ಮೆಸ್ ಸಹ ಸಂಪೂರ್ಣ ತುಳಿದಿದ್ದು ಇದರಿಂದ ರೈತನಿಗೆ ಸಂಪೂರ್ಣ ನಷ್ಟವುಂಟಾಗಿದೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು ಕ್ರಮ ಕೈಗೊಳ್ಳಬೇಕು ಜೊತೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಸುರೇಶ್ ಆಗ್ರಹಿಸಿದ್ದಾರೆ.
ರೈಲು ಕಂಬಿ ದುರಸ್ತಿಗೆ ಆಗ್ರಹ: ಅಜ್ಜೀಪುರ ಹೊರವಲಯದಲ್ಲಿ ಆನೆ ಕಂದಕ ಮಾಡಿದ್ದು, ಮಧ್ಯ ಭಾಗದಲ್ಲಿರುವ ರಸ್ತೆಗೆ ಅಡ್ಡಲಾಗಿ ರೈಲ್ವೆ ಕಂಬಿಯನ್ನು ಅಳವಡಿಸಲಾಗಿದೆ. ಒಂದು ಭಾಗವನ್ನು ಆನೆ ಮುರಿದು ತಿಂಗಳು ಕಳೆದಿದ್ದರೂ ಇತ್ತ ಯಾರೂ ಗಮನಹರಿಸಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ.ಕಾಡಾನೆ ದಾಳಿಯಿಂದ ಆಗಿರುವ ನಷ್ಟಕ್ಕೆ ಅರ್ಜಿ ಪಡೆದುಕೊಂಡು ಪರಿಹಾರ ಕೊಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ರೈಲ್ವೆ ಕಂಬಿ ಮುರಿದಿರುವುದು ನನ್ನ ಗಮನಕ್ಕೆ ಇದೀಗ ಬಂದಿದ್ದು ಅದನ್ನು ಸಹ ದುರಸ್ತಿಗೊಳಿಸಲು ತುರ್ತಾಗಿ ಕ್ರಮ ಕೈಗೊಳ್ಳುತ್ತೇವೆ.-ಪ್ರವೀಣ್, ಆರ್ಎಫ್ ಒ, ಹನೂರು ಬಫರ್ ವಲಯ.