ಫಸಲ್ ಬಿಮಾ ಯೋಜನೆಯಲ್ಲಿ ಭಾರಿ ಅಕ್ರಮ; ತನಿಖೆಗೆ ಒತ್ತಾಯ

KannadaprabhaNewsNetwork |  
Published : May 08, 2026, 02:30 AM IST
ಹರಪನಹಳ್ಳಿ: ಫಸಲ್ ಬಿಮಾ ಯೋಜನೆಯಲ್ಲಿ ನಡೆದಿರುವ ಅಕ್ರಮವನ್ನು ತನಿಖೆ ನಡೆಸಿ ರೈತರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಹಾರಕನಾಳು ಭಾಗದ ರೈತ ಮುಖಂಡರು ವಿಜಯನಗರ ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಮಂಜುನಾಥ ಅವರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿ ತಾಲೂಕಿನ ಹಾರಕನಾಳು ಗ್ರಾಪಂ ವ್ಯಾಪ್ತಿ ಭಾರಿ ಅಕ್ರಮ ನಡೆದಿದೆ.

ಹರಪನಹಳ್ಳಿ: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿ ತಾಲೂಕಿನ ಹಾರಕನಾಳು ಗ್ರಾಪಂ ವ್ಯಾಪ್ತಿ ಭಾರಿ ಅಕ್ರಮ ನಡೆದಿದೆ. ಸಮರ್ಪಕ ತನಿಖೆ ನಡೆಸಿ ರೈತರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಹಾರಕನಾಳು ಭಾಗದ ರೈತ ಮುಖಂಡರು ವಿಜಯನಗರ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥಗೆ ಗುರುವಾರ ಹರಪನಹಳ್ಳಿಯಲ್ಲಿ ಮನವಿ ಸಲ್ಲಿಸಿದರು.ಬೆಳೆ ವಿಮೆಗೆ ಸಂಬಂಧಪಟ್ಟಂತೆ ಸ್ಥಳೀಯ ಅಧಿಕಾರಿಗಳು ನಿಷ್ಪಕ್ಷಪಾತ, ನ್ಯಾಯಯುತವಾಗಿ ಕೆಲಸ ನಿರ್ವಹಿಸಿಲ್ಲ. ಬದಲಾಗಿ ಫಸಲ್ ಬಿಮಾ ಯೋಜನೆಯಲ್ಲಿ ಅಕ್ರಮಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂದು ರೈತರು ಗಂಭೀರ ಆರೋಪ ಮಾಡಿದರು.

ಬೆಳೆ ಕಟಾವು ಪ್ರಯೋಗ ಪ್ರಕ್ರಿಯೆಯಲ್ಲಿ ಒಣ ಬೇಸಾಯ (ಬೆದ್ದಲು), ನೀರಾವರಿ ಭೂಮಿಯ ನಡುವೆ ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಲಾಗಿದೆ. ನೀರಾವರಿ ಜಮೀನಿನ ಸಿಸಿ ಕಟಿಂಗ್ ಅನ್ನು ಬೆದ್ದಲು ಭೂಮಿಗೆ ಸೇರಿಸಿ ದಾಖಲೆ ತಿರುಚಲಾಗಿದೆ. ವಿಮಾ ಕಂಪನಿಯ ನಿಯಮಾವಳಿಗಳ ಪ್ರಕಾರ ರೈತರ ಮೊಬೈಲ್‌ಗೆ ಒಟಿಪಿ ಬಂದ ನಂತರವಷ್ಟೇ ಸಿಸಿ ಕಟಿಂಗ್ ಪ್ರಕ್ರಿಯೆ ನಡೆಸಬೇಕು. ಆದರೆ, ಇಲ್ಲಿ ಒಟಿಪಿ ಬಾರದಿದ್ದರೂ ಕಟಾವು ಪ್ರಕ್ರಿಯೆ ತೋರಿಸಿ ಏಕಪಕ್ಷೀಯವಾಗಿ ಮುಕ್ತಾಯ ಗೊಳಿಸಲಾಗಿದೆ.ಇದು ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ದೂರಿದರು.

ತಂತ್ರಜ್ಞಾನ ದುರ್ಬಳಕೆ ಮಾಡಿಕೊಂಡು ಅವೈಜ್ಞಾನಿಕ ವರದಿ ಸಲ್ಲಿಸಿರುವ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು. ಹೊಸ ಸಮಿತಿ ರಚಿಸಿ, ಪುನಃ ಮರುಪರಿಶೀಲನೆ ನಡೆಸಿ ರೈತರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ರೈತರಾದ ಎಲ್.ಬಿ.ಹಾಲೇಶ ನಾಯ್ಕ, ಎಚ್.ಎಂ.ಬಸವರಾಜಯ್ಯ, ಭಾಷುಸಾಬ್, ಪುಟ್ಟನಾಯ್ಕ್, ಮಲ್ಲನಾಯ್ಕ ಹಾಲೇಶ, ಹರೀಶ್ಚಂದ್ರ, ಮಂಜನಾಥ ನಾಯ್ಕ್ ಆಗ್ರಹಿಸಿದ್ದಾರೆ.

ಹರಪನಹಳ್ಳಿ ಫಸಲ್ ಬಿಮಾ ಯೋಜನೆಯಲ್ಲಿ ನಡೆದಿರುವ ಅಕ್ರಮವನ್ನು ತನಿಖೆ ನಡೆಸಿ ರೈತರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಹಾರಕನಾಳು ಭಾಗದ ರೈತ ಮುಖಂಡರು ವಿಜಯನಗರ ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಮಂಜುನಾಥ ಅವರಿಗೆ ಮನವಿ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿ ಶೋಕಮಾತಾ ಚರ್ಚಿನ ಧರ್ಮಗುರುಗಳಾಗಿ ವಂ| ಡೆನಿಸ್ ಡೆಸಾ ಅಧಿಕಾರ ಸ್ವೀಕಾರ
ತೊಟ್ಟಂ ಸಂತ ಅನ್ನಮ್ಮ ಚರ್ಚಿನ ನೂತನ ಧರ್ಮಗುರುಗಳಾಗಿ ವಂ| ಹೆನ್ರಿ ಮಸ್ಕರೇನ್ಹಸ್ ಅಧಿಕಾರ ಸ್ವೀಕಾರ