ನಾಳೆ ಅಯ್ಯಪ್ಪ ದೇವಾಲಯದಲ್ಲಿ ಮಕರ ಸಂಕ್ರಾಂತಿ ಮಹೋತ್ಸವ

KannadaprabhaNewsNetwork |  
Published : Jan 14, 2024, 01:31 AM IST
ಸುದ್ದಿಗೋಷ್ಠಿ | Kannada Prabha

ಸಾರಾಂಶ

ಮಡಿಕೇರಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 34ನೇ ಮಕರ ಸಂಕ್ರಾಂತಿ ಮಹೋತ್ಸವ ನಡೆಯಲಿದೆ. ಅಂದು ಪಂಚಾಮೃತ ಅಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ, ಭಸ್ಮಾಭಿಷೇಕ, ಎಳನೀರು ಪುಷ್ಪಾರ್ಚನೆ ನಡೆಯಲಿದೆ.

ಮಡಿಕೇರಿ: ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 34ನೇ ಮಕರ ಸಂಕ್ರಾಂತಿ ಮಹೋತ್ಸವ ಜ. 15 ರಂದು ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಸುಧೀರ್ ತಿಳಿಸಿದ್ದಾರೆ.ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕರ ಸಂಕ್ರಾಂತಿ ಪ್ರಯುಕ್ತ ಜ.14 ರಂದು ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ, ಪಂಚಾಮೃತ ಅಭಿಷೇಕ, ತುಪ್ಪಾಭಿಷೇಕ ಸೇರಿದಂತೆ ವಿವಿಧ ಸೇವೆಗಳು ನಡೆಯಲಿದೆ ಎಂದು ತಿಳಿಸಿದರು.ಮಕರ ಸಂಕ್ರಾಂತಿ ಮಹೋತ್ಸವದ ದಿನವಾದ 15 ರಂದು ಬೆ.6.30 ಕ್ಕೆ ನಿರ್ಮಾಲ್ಯ ವಿಸರ್ಜನೆ, ಉಷಾ ಪೂಜೆ, 7 ಕ್ಕೆ ಶ್ರೀ ಮುತ್ತಪ್ಪ ಮತ್ತು ಶ್ರೀ ಸುಬ್ರಹ್ಮಣ್ಯ ದೇವರ ಪೂಜೆ, 7.30 ರಿಂದ ಪಂಚಾಮೃತ ಅಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ, ಭಸ್ಮಾಭಿಷೇಕ, ಎಳನೀರು ಪುಷ್ಪಾರ್ಚನೆ, 8.30ಕ್ಕೆ ಶ್ರೀ ಕುಟ್ಟಿಚಾತನ್ ದೇವರ ವೆಳ್ಳಾಟಂ, 9 ಕ್ಕೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, ಬೆ.10ಕ್ಕೆ ಶ್ರೀ ಗುಳಿಗ ದೇವರ ವೆಳ್ಳಾಟಂ, 10.30 ಕ್ಕೆ ಶ್ರೀ ಅಯ್ಯಪ್ಪನ ಅಲಂಕಾರ ಪೂಜೆ, ಬೆ. 11 ಕ್ಕೆ ಶ್ರೀ ಅಯ್ಯಪ್ಪ ದೇವರ ಉತ್ಸವ ಮೂರ್ತಿಯ ಕ್ಷೇತ್ರ ಪ್ರದಕ್ಷಿಣೆ, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ಮತ್ತು ಪ್ರಸಾದ ವಿತರಣೆ, ಸಂಜೆ 6ಕ್ಕೆ ಭಜನೆ, 7ಕ್ಕೆ ಅಲಂಕಾರ ಪೂಜೆ, ಪಡಿ ಪೂಜೆ, 8 ಗಂಟೆಗೆ ದೀಪಾರಾಧನೆ ಮತ್ತು ಪ್ರಸಾದ ವಿತರಣೆ ನಡೆಯಲಿದೆ ಎಂದರು.ಅನ್ನಸಂತರ್ಪಣೆಗೆ ಅಕ್ಕಿ, ತರಕಾರಿ ಇತ್ಯಾದಿ ಸಾಮಾಗ್ರಿಗಳನ್ನು ಮುಂಚಿತವಾಗಿ ನೀಡುವಂತೆ ಹಾಗೂ ಸಂಕಲ್ಪ ಸೇವೆ ಮಾಡುವ ಭಕ್ತಾದಿಗಳು 14 ರಂದು ಬೆ.7 ಗಂಟೆಗೆ ಉಪಸ್ಥಿತರಿರುವಂತೆ ಮನವಿ ಮಾಡಿದ ಅವರು ದೇವಸ್ಥಾನದಲ್ಲಿ ತುಲಾ ಭಾರ ಸೇವೆಗೂ ಅವಕಾಶವಿರುವುದಾಗಿ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಅಯ್ಯಪ್ಪ ದೇವಸ್ಥಾನ ಸಮಿತಿ ಸ್ಥಾಪಕರಾದ ಡಾ. ಎಂ.ಜಿ. ಪಾಟ್ಕರ್, ಸಮಿತಿ ಅಧ್ಯಕ್ಷರಾದ ವಿನೋದ್ ವಿ.ಎಸ್., ಮಹಿಳಾ ಘಟಕದ ಖಜಾಂಚಿ ರಾಣಿ ಮುತ್ತಮ್ಮ, ಪ್ರಮುಖರಾದ ಉಣ್ಣಿ ಕೃಷ್ಣನ್ ಹಾಗೂ ಬಿ.ಎಂ.ಪೂವಪ್ಪ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೃಷಿಗೆ 50 ಸಾವಿರ ಕೋಟಿ ಮೀಸಲಿಡಲು ಪ್ರತಿಭಟನೆ
ಪೌರ ಕಾರ್ಮಿಕರನ್ನು ಭರ್ತಿ ಮಾಡಲು ಸೂಚನೆ