ಕುಶಾಲನಗರ: ಕುಶಾಲನಗರ ಗೌಡ ಮಹಿಳಾ ಸಂಘ ಸುಮುಖ-ಸುಕೃತ ತಂಡದವರಿಂದ ಸಂಭ್ರಮದ ಮಕರ ಸಂಕ್ರಾತಿ ಹಬ್ಬದ ಆಚರಣೆ ನಡೆಯಿತು.
ಒಕ್ಕಲಿಗ ಮತ್ತು ಭೂಮಿ ಹಾಗೂ ರಾಸುಗಳ ನಡುವೆ ಬಿಡಿಸಲಾಗದ ಬಂಧವಿದೆ ಎಂದರು.
ಸಂಘದ ಸದಸ್ಯರಾದ ನಂಗಾರು ಅನಿತಾ ಮಾತನಾಡಿ, ಹಳ್ಳಿಗಳಲ್ಲಿ ಬೆಳಗ್ಗೆ ಎದ್ದ ತಕ್ಷಣ ಎತ್ತು ನೋಡು, ಹಸು ನೋಡು, ನೇಗಿಲು ನೋಡು ಎನ್ನುವ ಕಾಲವೊಂದಿತ್ತು. ಆ ಕಾಲ ಬದಲಾಗುತ್ತಿದೆ. ಕುವೆಂಪು ಅವರ ಸಾಲು ನೇಗಿಲ ಮೇಲೆ ನಿಂತಿದೆ ಎನ್ನುವುದನ್ನು ನಮ್ಮ ಪೂರ್ವಿಕರು ಅಕ್ಷರಶಃ ಅನುಭವಿಸಿ ಪಾಲಿಸುತ್ತಿದ್ದರು. ಆದರೆ ಇಂದು ಬದಲಾವಣೆ ನಮ್ಮ ತನವನ್ನು ಮರೆ ಮಾಚಿದೆ ಎಂದು ಹೇಳಿದರು. ಸದಸ್ಯರಾದ ಲತಾ ಕಾಳೇರಮ್ಮ ಮಾತನಾಡಿ, ಸರ್ವಜ್ಞ ಹೇಳುವಂತೆ ಒಕ್ಕಲಿಗ ದುಡಿದು ತಾನಿಕ್ಕುವನು ಅನ್ನವನು, ಜಗದ ಜನ ನಕ್ಕು ನಲಿಸುವುದಕ್ಕೆ ಕಾರಣ ಒಕ್ಕಲಿಗನ ಅನ್ನ ಎಂಬ ವಚನದ ಸಾಲುಗಳು ಸಾರ್ವಕಾಲಿಕ. ಕೃಷಿ ಕಾಯಕ ಮಾಡುವ ಪ್ರತಿಯೊಬ್ಬರಿಗೂ ಸಂಕ್ರಾಂತಿಯ ಶುಭಾಶಯ ಕೋರಿದರು.ಈ ಸಂದರ್ಭ ಜಾನಪದ ಕೃಷಿ ಪರಿಕರಗಳು ಹಳೆ ಕಾಲದ ವಸ್ತುಗಳನ್ನು ಇರಿಸಿ ಧಾನ್ಯ ಲಕ್ಷ್ಮಿಗೆ ಪೂಜೆ ಸಲ್ಲಿಸಿ, ದೀಪ ಬೆಳಗಿ, ಎಳ್ಳು ಬೆಲ್ಲ ಹಂಚಿಕೊಂಡು ಸಂಭ್ರಮಿಸಲಾಯಿತು.ಸಂಘದ ಸದಸ್ಯರಾದ ಸೂದನ ಅನಿತಾ, ಸೂದನ ಲಲಿತಾ ಪ್ರಾರ್ಥಿಸಿದರು. ಗೀತಾ ನಂಗಾರು ಸ್ವಾಗತಿಸಿದರು. ಲೀಲಾವತಿ ತುಂತಜೆ ವಂದಿಸಿದರು.
ಕ್ಯಾಪ್ಸನ್: ಮಕರ ಸಂಕ್ರಾಂತಿ ಹಬ್ಬ ಆಚರಣೆ ಕಾರ್ಯಕ್ರಮ ಸಂದರ್ಭ.