ಕನ್ನಡಪ್ರಭ ವಾರ್ತೆ ಕುರುಗೋಡು
ಪಟ್ಟಣದ ಶ್ರೀ ದೊಡ್ಡ ಬಸವೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಂಗಳವಾರ ನಡೆದ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಮಾರ್ಚ್ 25ರಂದು ರಥೋತ್ಸವ ದಿನದಂದೇ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಹೆಚ್ಚುವರಿ ಬಸ್ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು ಎಂದು ಸಾರಿಗೆ ಇಲಾಖೆಗೆ ಸೂಚಿಸಿದರು.ರಥ ಸಾಗುವ ಮಾರ್ಗದಲ್ಲಿ ವಿದ್ಯುತ್ ಲೈನ್ ಸರಿದೂಗಿಸುವ ಬಗ್ಗೆ ಸಂಬಂಧಿಸಿದವರು ಮುಂಜಾಗ್ರತೆ ವಹಿಸಬೇಕು. ರಾತ್ರಿ ಸಮಯದಲ್ಲಿ ವಿದ್ಯುತ್ ಕಡಿತವಾಗದಂತೆ ಜಾಗೃತಿ ವಹಿಸಬೇಕು. ಆರೋಗ್ಯ ಸೇವೆ ಕಲ್ಪಿಸಲು ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಿಗೆ ಸೂಚಿಸಿದರು. ರಥ ಸಾಗುವ ಎರಡೂ ಬದಿಯಲ್ಲಿ ಯಾವುದೇ ಕಾರಣಕ್ಕೂ ಅಂಗಡಿಗಳನ್ನು ಹಾಕಬಾರದು. ಫ್ಲೆಕ್ಸ್ ಮತ್ತು ಬಂಟಿಂಗ್ಸ್ ಕಟ್ಟದಂತೆ ಎಚ್ಚರ ವಹಿಸಬೇಕು ಎಂದು ಪುರಸಭೆ ಅಧಿಕಾರಿಗಳಿಗೆ ಸೂಚಿಸಿದರು.
ತಾಪಮಾನ ಹೆಚ್ಚಿರುವುದರಿಂದ ದೇವಸ್ಥಾನದ ಆಡಳಿತ ಮಂಡಳಿಯವರು ದಾಸೋಹಕ್ಕೆ ಬರುವ ಭಕ್ತಾದಿಗಳಿಗೆ ನೆರಳಿನ ವ್ಯವಸ್ಥೆ ಕೈಗೊಳ್ಳಿ ಎಂದು ಹೇಳಿದರು.
ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿ ಹನುಮಂತಪ್ಪ ಮಾತನಾಡಿ, ಈ ವರ್ಷವೂ ತೇರಿನ ಸೂಕ್ತ ಪರಿಶೀಲನೆ ನಡೆಸಿ ಜನರಿಗೆ ದೇವರ ದರ್ಶನ ಪಡೆದುಕೊಳ್ಳಲು ಮುಕ್ತ ಅವಕಾಶ, ಶುದ್ಧ ಕುಡಿಯುವ ನೀರು, ದಾಸೋಹ ವ್ಯವಸ್ಥೆ, 5 ಶೌಚಾಲಯವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.
ರಥೋತ್ಸವ ಸಾಗುವ ದಾರಿಯಲ್ಲಿ ಹೂ, ಹಣ್ಣು, ಕಾಯಿ ವ್ಯಾಪಾರಸ್ಥರು ತೆಗ್ಗು ಗುಂಡಿಗಳನ್ನು ತೋಡಿಕೊಂಡಿರುತ್ತಾರೆ. ಇದರಿಂದ ಸೊನ್ನೆ ಹಾಕೋರಿಗೆ ಸಮಸ್ಯೆ ಆಗುತ್ತದೆ. ಆದ್ದರಿಂದ ಅದರ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ಸೊನ್ನೆ ಹಾಕುವವರು ಕೋರಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಹೇಮಂತ್ ಕುಮಾರ್, ಎಸ್ಪಿ ರಂಜಿತ್ ಕುಮಾರ್ ಬಂಡಾರು ಇದ್ದರು. ತಹಸೀಲ್ದಾರ್ ಎಂ. ರೇಣುಕಾ, ಡಿವೈಎಸ್ಪಿ ಪ್ರಸಾದ್ ಗೋಖಲೆ, ಸಿಪಿಐ ವಿಶ್ವನಾಥ ಹಿರೇಗೌಡ, ಎಸ್ಐ ಸುಪ್ರೀತ್ ವಿರೂಪಕ್ಷಪ್ಪ, ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿ ಹನುಮಂತಪ್ಪ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಹಾಗೂ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು.