ನಿಗದಿಪಡಿಸಿದ ಅವಧಿಯೊಳಗೆ ಇ-ಖಾತಾ ಮಾಡಿಸಿಕೊಳ್ಳಿ

KannadaprabhaNewsNetwork |  
Published : Mar 01, 2025, 01:04 AM IST
ಗಣೇಶ | Kannada Prabha

ಸಾರಾಂಶ

ಪುರಸಭೆ ವ್ಯಾಪ್ತಿಯ ವಸತಿ, ವಾಣಿಜ್ಯ ಕಟ್ಟಡಗಳು ಹಾಗೂ ಖಾಲಿ ನಿವೇಶನಗಳ ಆಸ್ತಿಗೆ ಪುರಸಭೆ ಇ-ಖಾತಾ ಅಭಿಯಾನ ಆರಂಭಿಸಿದ್ದು, ಪಟ್ಟಣ ವ್ಯಾಪ್ತಿಯ ಆಸ್ತಿ ಮಾಲೀಕರು ನಿಗದಿಪಡಿಸಿದ ಅವಧಿಯೊಳಗೆ ಇ-ಖಾತಾ ಮಾಡಿಸಿಕೊಳ್ಳಬೇಕು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆಪುರಸಭೆ ವ್ಯಾಪ್ತಿಯ ವಸತಿ, ವಾಣಿಜ್ಯ ಕಟ್ಟಡಗಳು ಹಾಗೂ ಖಾಲಿ ನಿವೇಶನಗಳ ಆಸ್ತಿಗೆ ಪುರಸಭೆ ಇ-ಖಾತಾ ಅಭಿಯಾನ ಆರಂಭಿಸಿದ್ದು, ಪಟ್ಟಣ ವ್ಯಾಪ್ತಿಯ ಆಸ್ತಿ ಮಾಲೀಕರು ನಿಗದಿಪಡಿಸಿದ ಅವಧಿಯೊಳಗೆ ಇ-ಖಾತಾ ಮಾಡಿಸಿಕೊಳ್ಳಬೇಕು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮನವಿ ಮಾಡಿದರು.

ಪುರಸಭೆಯ ಬಜೆಟ್‌ ಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 2025 ಫೆ.11ರಂತೆ ಸ್ಥಳೀಯ ಸಂಸ್ಥೆಗಳಲ್ಲಿ, ಈಗಾಗಲೇ ಆಸ್ತಿ ರಿಜಿಸ್ಟರ್‌ನಲ್ಲಿ ದಾಖಲಿಸಿರುವ ಆಸ್ತಿಗಳಿಗೆ ನಮೂನೆ -3 (ರಿಜಿಸ್ಟರ್ ಎ ) ನಮೂನೆ 3‌ (ರಿಜಿಸ್ಟರ್‌ ಬಿ ) ಗಳನ್ನು ಸೃಜಿಸಿ ನೀಡಲು ಸರ್ಕಾರ ಆದೇಶಿಸಿದೆ ಎಂದರು. ಪುರಸಭೆ ಕಚೇರಿಯಲ್ಲಿ ಇ-ಖಾತಾ ಅಭಿಯಾನಕ್ಕೆ ಪ್ರತ್ಯೇಕ ಕೊಠಡಿ ಆರಂಭಿಸಲಾಗಿದ್ದು, ಸ್ವೀಕೃತಿ ಮತ್ತು ರವಾನೆ ಶಾಖೆಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಪುರಸಭೆ ಕಚೇರಿಗೆ ಸಲ್ಲಿಸಿ ಎಂದರು.

ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕ ಸಾಬೀತು ಪಡಿಸುವ ನೋಂದಾಯಿತ ಮಾರಾಟ ಪತ್ರಗಳು/ ದಾನ ಪತ್ರ/ವಿಭಾಗ ಪತ್ರಗಳು/ಸರ್ಕಾರ ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕು ಪತ್ರ/ಮಂಜೂರಾತಿ ಪತ್ರಗಳು/ಕಂದಾಯ ಇಲಾಖೆಯಿಂದ 94 ಸಿಸಿ ಅಡಿ ನೀಡಲಾದ ಹಕ್ಕುಪತ್ರ ಇರಬೇಕು ಎಂದರು. ಪಟ್ಟಣದಲ್ಲಿ ೮೫೭ ಬಿ ಖಾತಾ ಆಗಬೇಕಿದೆ. ಬರುವ ಆಗಸ್ಟ್‌ ತಿಂಗಳೊಳಗೆ ಎಲ್ಲಾ ಖಾತಾ ಆಗಬೇಕು ಎಂದು ಬಜೆಟ್‌ ಸಭೆಗೂ ಮುನ್ನ ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು. ಎ ಮತ್ತು ಬಿ ಖಾತಾ ಮಾಡಿಸಿಕೊಳ್ಳಬೇಕಾದ ಆಸ್ತಿ ಮಾಲೀಕರು ತುರ್ತಾಗಿ ದಾಖಲಾತಿ ನೀಡಿ ಖಾತಾ ಮಾಡಿಸಿಕೊಳ್ಳಿ ಎಂದರಲ್ಲದೆ,ಇ ಖಾತಾ ಮಾಡುವುದರಿಂದ ಪುರಸಭೆಗೂ ಆದಾಯ ಬರಲಿದೆ ಎಂದರು. ಪುರಸಭೆ ಅಧ್ಯಕ್ಷ ಮಧು, ಉಪಾಧ್ಯಕ್ಷ ಅಣ್ಣಯ್ಯಸ್ವಾಮಿ, ಪುರಸಭೆ ಮುಖ್ಯಾಧಿಕಾರಿ ಕೆ.ಪಿ.ವಸಂತಕುಮಾರಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸದೃಢ ಆರೋಗ್ಯಕ್ಕೆ ಹಲ್ಲು ಸದೃಢವಾಗಿರಲಿ
ಬೆಳಗಾವಿ ಜಿಲ್ಲೆ ವಿಭಜನೆ ಇರಾದೆ ಸಿಎಂಗಿದೆ