- ಶಿಶುವಿಹಾರ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ - - - ಕನ್ನಡಪ್ರಭ ವಾರ್ತೆ ಹರಿಹರ
ನಗರದ ಸಂತ ಅಲೋಶಿಯಸ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ 2024- 2025ನೇ ಸಾಲಿನ ಶಿಶುವಿಹಾರ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಮುದ್ದು ಮಾಡುವ ನೆಪದಲ್ಲಿ ದುರ್ಭಾವನೆಯಿಂದ ಮಕ್ಕಳ ಖಾಸಗಿ ಭಾಗಗಳಿಗೆ ಸ್ಪರ್ಶಿಸುವುದನ್ನು ತಪ್ಪಿಸಬೇಕಿದೆ ಎಂದರು.
ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿತರು ಬಹುತೇಕ ಸಂಬಂಧಿಗಳು ಅಥವಾ ಪರಿಚಯಸ್ಥರೇ ಆಗಿರುತ್ತಾರೆ. ದುರ್ಭಾವನೆಯ ಸ್ಪರ್ಶವಾದಾಗ ಅದನ್ನು ಪ್ರತಿರೋಧಿಸುವುದನ್ನು ಮಕ್ಕಳಿಗೆ ಕಲಿಸುವ ಅಗತ್ಯವಿದೆ ಎಂದು ಹೇಳಿದರು.ಮುಖ್ಯ ಅತಿಥಿಯಾಗಿದ್ದ ದಾವಣಗೆರೆ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯ ಇನಾಯತ್ ಉಲ್ಲಾ ಟಿ. ಮಾತನಾಡಿ, ಗುಣಮಟ್ಟದ ಪ್ರಾಥಮಿಕ ಶಿಕ್ಷಣ ದೊರೆತರೆ ಮಕ್ಕಳು ಶೈಕ್ಷಣಿಕವಾಗಿ ಪ್ರಬಲರಾಗಿ ಬೆಳೆಯುತ್ತಾರೆ. ಮನೆಯಲ್ಲಿ ಪೋಷಕರು ಕೂಡ ಮಕ್ಕಳು ಶಾಲೆಯಲ್ಲಿ ಕಲಿತು ಬಂದದ್ದನ್ನು ಪುನರ್ಮನನ ಮಾಡಿಸಬೇಕು ಎಂದು ತಿಳಿಸಿದರು.
ಅನಂತರ ಶಾಲಾ ವಿದ್ಯಾರ್ಥಿಗಳು ಪ್ರದರ್ಶಿಸಿದ ಸಾಂಸ್ಕೃತಿಕ ಚಟುವಟಿಕೆಗಳು ಜನಮನ ಸೆಳೆದವು. ಸಾಧಕ ವಿದ್ಯಾರ್ಥಿಗಳಿಗೆ ಸತ್ಕರಿಸಲಾಯಿತು. ಪ್ರಾಂಶುಪಾಲರಾದ ಸಿಸ್ಟರ್ ಶಾಂತಿ ಡೇವಿಡ್, ಪುಷ್ಪಲತಾ ಅರಸು ಹಾಗೂ ಉಪ ಪ್ರಾಂಶುಪಾಲ ಫಾ.ವಿನೋದ್ ಎ.ಜೆ., ಸಂಸ್ಥೆ ಆಡಳಿತಾಧಿಕಾರಿ ಫಾದರ್ ಜಾನ್ ಬ್ಯಾಪ್ಟಿಸ್ಟ್, ಶಿಕ್ಷಕರಾದ ಅಬ್ದುಲ್ ರೆಹಮಾನ್, ಮೌಸಿನ್ ಉಲ್ಲಾ, ಮಂಜುನಾಥ್ ಎಲ್.ಎಸ್. ಉಪಸ್ಥಿತರಿದ್ದರು.
- - - (** ಈ ಪೋಟೋ-ಕ್ಯಾಪ್ಷನ್ ಪ್ಯಾನೆಲ್ಗೆ ಬಳಸಿ)-22ಎಚ್ಆರ್ಆರ್02:
ಹರಿಹರದ ಸಂತ ಅಲೋಶಿಯಸ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶನಿವಾರ 2024- 2025ನೇ ಸಾಲಿನ ಶಿಶುವಿಹಾರ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ ನಡೆಯಿತು. ಎಎಸ್ಪಿ ವಿಜಯ್ ಸಂತೋಷ್ ಕುಮಾರ್, ದಾವಣಗೆರೆ ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಇನಾಯತ್ ಉಲ್ಲಾ ಟಿ., ಫಾ.ಎರಿಕ್ ಮಥಾಯಸ್ ಇದ್ದರು.