ಮಕ್ಕಳಲ್ಲಿ ನಾಡು, ನುಡಿ ಕುರಿತು ಆಸಕ್ತಿ ಮೂಡಿಸಿ

KannadaprabhaNewsNetwork |  
Published : Jan 12, 2025, 01:16 AM IST
೧೧ಕೆಎಲ್‌ಆರ್-೧೧ಮುಳಬಾಗಿಲು ತಾಲೂಕಿನ ಅಲಂಗೂರು ಕ್ರಾಸ್‌ನ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಕನ್ನಡ ಸಂಘದ ತಾಲೂಕು ಅಧ್ಯಕ್ಷ ಈ.ಶ್ರೀನಿವಾಸ ಗೌಡ ಮಾತನಾಡಿದರು. | Kannada Prabha

ಸಾರಾಂಶ

ಕನ್ನಡ ಸಾಹಿತ್ಯ ಮತ್ತು ನಾಡು ನುಡಿ ಕುರಿತು ಮಕ್ಕಳಲ್ಲಿ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ರೂಪುರೇಷೆ ಮಾಡಲಾಗುತ್ತಿದೆ. ಇದಕ್ಕೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಹಕಾರ ನೀಡಬೇಕು. ಕನ್ನಡ ಸಾಹಿತ್ಯ ಮತ್ತು ನಾಡು ನುಡಿ ಕುರಿತು ಮಕ್ಕಳಲ್ಲಿ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಮುಳಬಾಗಿಲು ತಾಲೂಕಿನಲ್ಲಿ ಪ್ರತಿಯೊಂದು ಶಾಲೆಯಲ್ಲಿಯೂ ಸಹ ಶಾಲೆಗೊಂದು ಕನ್ನಡ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಕನ್ನಡ ಸಂಘದ ತಾಲೂಕು ಅಧ್ಯಕ್ಷ ಈ.ಶ್ರೀನಿವಾಸ ಗೌಡ ಹೇಳಿದರು.ತಾಲೂಕಿನ ಅಲಂಗೂರು ಕ್ರಾಸ್‌ನ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಂಘದಿಂದ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.ಭಾಷೆ ಬಗ್ಗೆ ಅಸಕ್ತಿ ಬೆಳೆಸಿ

ಕನ್ನಡ ಸಾಹಿತ್ಯ ಮತ್ತು ನಾಡು ನುಡಿ ಕುರಿತು ಮಕ್ಕಳಲ್ಲಿ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ರೂಪುರೇಷೆ ಮಾಡಲಾಗುತ್ತಿದೆ. ಇದಕ್ಕೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಹಕಾರ ನೀಡಬೇಕೆಂದು ಕೋರಿದರು.ನಿವೃತ್ತ ಮುಖ್ಯ ಶಿಕ್ಷಕ ಎಂ.ವಿ.ಜನಾರ್ದನ್ ಮಾತನಾಡಿ, ಸ್ವಾಮಿ ವಿವೇಕಾನಂದ ಅವರಿಗೆ ಹಾಗೂ ಕನ್ನಡ ನಾಡಿಗೆ ಅವಿನಾಭಾವ ಸಂಬಂಧವಿದೆ. ವಿವೇಕಾನಂದರು ಅಂತರಾಷ್ಟ್ರೀಯ ಚಿಕಾಗೋ ಸಮ್ಮೇಳನಕ್ಕೆ ಹೋಗುವ ಸಂದರ್ಭದಲ್ಲಿ ವಿಮಾನಯಾನಕ್ಕೆ ಖರ್ಚು ವೆಚ್ಚಗಳನ್ನು ಬರೆಸಿದ್ದು ನಮ್ಮ ಮೈಸೂರು ಸಂಸ್ಥಾನದ ರಾಜರು ಎಂಬ ಹೆಗ್ಗಳಿಕೆ ನಮ್ಮ ನಾಡಿಗೆ ದೊರೆತಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದು ಸಂತಸ ವ್ಯಕ್ತಪಡಿಸಿದರು.ವಿಜೇತರಿಗೆ ಬಹುಮಾನ ವಿತರಣೆ

ಕನ್ನಡ ಭಾಷಾ ಶಿಕ್ಷಕ ದಾದುಸಾಬಿ ಅವರು ಸ್ವಾಮಿ ವಿವೇಕಾನಂದರ ಬಾಲ್ಯ, ಶಿಕ್ಷಣ, ದೇಶ ಹಾಗೂ ಹೊರದೇಶಗಳ ಸಂಚಾರದ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡಿದರು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಕನ್ನಡ ಬೆಳಗು ವೇದಿಕೆ ಅಧ್ಯಕ್ಷ ಅತ್ತಿಕುಂಟೆ ಎಸ್.ಸುಬ್ರಮಣಿ ಹಾಗೂ ವಕೀಲೆ ಎನ್.ದೀಕ್ಷಾ ಅವರು ಬಹುಮಾನವನ್ನು ವಿತರಣೆ ಮಾಡಿದರು.

ಪ್ರೌಢ ಶಾಲೆ ಮುಖ್ಯ ಶಿಕ್ಷಕ ಎಂ.ಶಂಕರ್, ಕನ್ನಡ ಸಂಘದ ಪದಾಧಿಕಾರಿಗಳಾದ ಶ್ರೀನಿವಾಸ ಮೂರ್ತಿ, ಎಂ.ಶಿವಣ್ಣ, ನಂದಕಿಶೋರ್, ಸಿದ್ದಲಿಂಗಯ್ಯ, ಶಕ್ತಿಪ್ರಸಾದ್, ಶಾಲೆಯ ಶಿಕ್ಷಕರಾದ ಸುರೇಶ್, ಆರ್.ಉಷಾ, ದಾದುಸಾಬಿ, ಎಂ.ನಾಗರಾಜು, ಎಂ.ಕವಿತಾ, ಸುಮಿತ್ರ, ಕೃಷ್ಣವೇಣಿ, ಸಿಬ್ಬಂದಿ ಸುಷ್ಮಾ, ವೆಂಕಟಲಕ್ಷ್ಮಮ್ಮ, ಗ್ರಾಮಭಾರತಿ ಟ್ರಸ್ಟ್ ಅಧ್ಯಕ್ಷ ಕೃಷ್ಣಮೂರ್ತಿ ಇದ್ದರು.

.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ