ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಪತ್ರಕರ್ತರ ಭವನದಲ್ಲಿ ಕೆ.ಸಿ.ವೀರೇಂದ್ರಪಪ್ಪಿರವರ ಅಭಿಮಾನಿಗಳ ಬಳಗದಿಂದ ಬುಧವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಟು ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಹಾಕಿಕೊಂಡಿರುವ ಶಾಸಕ ಕೆ.ಸಿ ವೀರೇಂದ್ರಪಪ್ಪಿ ರವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದರೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಶರವೇಗದಲ್ಲಿ ಅಭಿವೃದ್ಧಿಯಾಗಲಿದೆ. ಹಾಗಾಗಿ ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಚಿತ್ರದುರ್ಗ ಶಾಸಕರಿಗೆ ಆದ್ಯತೆ ನೀಡುವಂತೆ ಆಗ್ರಹಿಸಿದರು.
ಕೆಪಿಸಿಸಿ ಕಾರ್ಯದರ್ಶಿ ಚಂದ್ರಶೇಖರ್ ಮಾತನಾಡಿ, ಚಿತ್ರದುರ್ಗಕ್ಕೆ ಮೆಡಿಕಲ್ ಕಾಲೇಜು ಹಾಗೂ ಭದ್ರಾಮೇಲ್ದಂಡೆ ಯೋಜನೆಗಾಗಿ ಸಾಕಷ್ಟು ಹೋರಾಟ ಮಾಡಿರುವ ಶಾಸಕ ಕೆ.ಸಿ.ವೀರೇಂದ್ರಪಪ್ಪಿರವರಿಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಲೇಬೇಕು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡಲು ಹೊರಟಿರುವ ಇವರಿಗೆ ಸಚಿವ ಸ್ಥಾನ ನೀಡಿದರೆ ಕ್ಷೇತ್ರದ ಜನರಿಗೆ ಸಾಮಾಜಿಕ ನ್ಯಾಯ ಒದಗಿಸಿದಂತಾಗುತ್ತದೆ ಎಂದು ಮನವಿ ಮಾಡಿದರು.ಯುವಕರ ಕಣ್ಮಣಿ ಶಾಸಕ ಕೆ.ಸಿ.ವೀರೇಂದ್ರಪಪ್ಪಿಗೆ ಸಚಿವ ಸ್ಥಾನ ನೀಡಬೇಕು. ಚಿತ್ರದುರ್ಗದಲ್ಲಿ ರಸ್ತೆ ಅಗಲೀಕರಣದ ಕನಸು ಹೊತ್ತಿರುವ ವೀರೇಂದ್ರ ಅವರಿಗೆ ಸಚಿವ ಸ್ಥಾನ ಕೊಡಬೇಕೆಂಬುದು ನಮ್ಮ ಆಗ್ರಹ ಎಂದು ಭೀಮಸಮುದ್ರದ ಉದ್ಯಮಿ ಸಿರಾಜ್ ಕಾಂಗ್ರೆಸ್ ನಾಯಕರುಗಳಲ್ಲಿ ವಿನಂತಿಸಿದರು.