ಸರ್ಕಾರದ ಶಿಕ್ಷಣ ಸೌಲಭ್ಯ ಸದ್ಭಳಕೆ ಮಾಡಿಕೊಳ್ಳಿ

KannadaprabhaNewsNetwork |  
Published : Dec 09, 2024, 12:47 AM IST
ಪೋಟೋ: 06ಎಸ್‌ಎಂಜಿಕೆಪಿ06ಶಿವಮೊಗ್ಗದ ದುರ್ಗಿಗುಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಅಡಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳಿಗೆ ಶುಕ್ರವಾರ ಸಂಸದ ಬಿ.ವೈ.ರಾಘವೇಂದ್ರ ಉಚಿತ ಬ್ಯಾಗ್ ವಿತರಿಸಿದರು. | Kannada Prabha

ಸಾರಾಂಶ

ಶಿವಮೊಗ್ಗದ ದುರ್ಗಿಗುಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಅಡಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳಿಗೆ ಶುಕ್ರವಾರ ಸಂಸದ ಬಿ.ವೈ.ರಾಘವೇಂದ್ರ ಉಚಿತ ಬ್ಯಾಗ್ ವಿತರಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಮಕ್ಕಳ ಭವಿಷ್ಯ ಬೆಳಗಿಸುವ ನಿಟ್ಟಿನಲ್ಲಿ ಸರ್ಕಾರ ಶಿಕ್ಷಣ ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಕರು, ಶಿಕ್ಷಣ ಮತ್ತು ಇತರೆ ಸೌಲಭ್ಯಗಳಿದ್ದು ವಿದ್ಯಾರ್ಥಿಗಳು ಇದರ ಸದ್ಭಳಕೆ ಮಾಡಿಕೊಂಡು ಮುಂದೆ ಬರಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ದುರ್ಗಿಗುಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಅಡಿಯಲ್ಲಿ ಸಂಸದರ ನಿಧಿಯಿಂದ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳಿಗೆ ಉಚಿತ ಬ್ಯಾಗ್ ವಿತರಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಅಡಿ ಸಂಸದರ ನಿಧಿಯಲ್ಲಿ ಲೋಕಸಭಾ ಕ್ಷೇತ್ರದ 1 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ ಮಾಡಬಹುದು ಎಂದು ತಿಳಿದ ತಕ್ಷಣ ಕಾರ್ಯೋನ್ಮುಖನಾಗಿದ್ದೇನೆ. ತಮ್ಮ ಕ್ಷೇತ್ರದಲ್ಲಿ 1ರಿಂದ 7ನೇ ತರಗತಿವರೆಗಿನ ಒಟ್ಟು-2013 ಶಾಲೆಗಳ 94,056 ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ನೀಡಲಾಗುತ್ತಿದೆ ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಕರು ಇದ್ದು, ಕಂಪ್ಯೂಟರ್ ಶಿಕ್ಷಣ ಸಹ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆಗೆ ಕಡಿವಾಣ ಹಾಕಬೇಕು. ಕಂಪ್ಯೂಟರ್ , ಡಿಜಿಟಲ್ ಸಾಕ್ಷರರಾಗಬೇಕು. ಯುನೈಟೆಡ್ ಕಿಂಗ್‌ಡಮ್ 18 ವರ್ಷ ತುಂಬದ ಮಕ್ಕಳು ಮೊಬೈಲ್ ಬಳಸಬಾರದೆಂದು ನಿರ್ಧಾರ ಕೈಗೊಂಡಿದೆ. ನಮ್ಮಲ್ಲಿಯೂ ಮಕ್ಕಳು ಶಾಲೆಗೆ ಮೊಬೈಲ್ ತರುವಂತಿಲ್ಲ. ಓದಿನ ಕಡೆ, ಕಂಪ್ಯೂಟರ್ ಸಾಕ್ಷರತೆ ಕಡೆ ಹೆಚ್ಚಿನ ಗಮನ ಹರಿಸಬೇಕು. ಇದು ವಿದ್ಯಾರ್ಥಿಗಳ ಮುಂದಿನ ಔದ್ಯೋಗಿಕ ಜೀವನಕ್ಕೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.ಜಿಲ್ಲೆಯಲ್ಲಿ ಕಳೆದ 12 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ತರ ಬೆಳವಣಿಗೆ ಆಗಿದೆ. ಕೃಷಿ ಮತ್ತು ತೋಟಗಾರಿಕೆ ಕಾಲೇಜು, ಸರ್ಕಾರಿ ಮೆಡಿಕಲ್ ಕಾಲೇಜು, ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ, ಇದೀಗ ಆಯುರ್ವೇದ ಕಾಲೇಜು ಹೀಗೆ ಸಾಕಷ್ಟು ಉನ್ನತ ಶಿಕ್ಷಣ ಸಂಸ್ಥೆಗಳು ಉತ್ತಮ ಶಿಕ್ಷಣ ನೀಡುತ್ತಿವೆ. ದಕ್ಷಿಣ ಭಾರತದಲ್ಲೇ ಮೊದಲನೆಯದಾದ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಈಗ ತಮ್ಮಡಿಹಳ್ಳಿಯಲ್ಲಿ 25 ಎಕರೆ ಜಾಗ ಮಂಜೂರಾಗಿದ್ದು, ಶಾಶ್ವತ ಕಟ್ಟಡ ನಿರ್ಮಾಣಕ್ಕೆ ₹25 ಕೋಟಿ ಮಂಜೂರಾಗಿದೆ ಎಂದು ತಿಳಿಸಿದರು.

ಇಲ್ಲಿ ಎಸ್‌ಎಸ್‌ಎಲ್‌ಸಿ ಪಿಯುಸಿ, ಡಿಪ್ಲೊಮಾ ಮತ್ತು ಪದವಿ ನಂತರ ಉತ್ತಮ ಕೋರ್ಸ್‌ಳಿದ್ದು, ಈ ಕೋರ್ಸ್ ಮುಗಿದ ನಂತರ ಉತ್ತಮ ಉದ್ಯೋಗಾವಕಾಶಗಳು ಸಿಗಲಿದೆ. ಆದ್ದರಿಂದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು ಎಂದು ಹೇಳಿದರು.

ಶಾಲೆಯ 867 ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರುಣ್, ಮಾಜಿ ಸೂಡಾ ಅಧ್ಯಕ್ಷರಾದ ನಾಗರಾಜ್, ಜ್ಞಾನೇಶ್ವರ್, ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮೋಹನೇಶ್, ದುರ್ಗಿಗುಡಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಭಾರತಿ, ದೈಹಿಕ ಶಿಕ್ಷಣ ನಿರ್ದೇಶಕ ನಿರಂಜನ, ಇತರೆ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ