ಸರ್ಕಾರಿ ಸೌಲಭ್ಯ ಸದುಪಯೋಗವಾಗಲಿ: ಶಾಂತಾರಾಮ ಸಿದ್ದಿ

KannadaprabhaNewsNetwork |  
Published : Jul 22, 2025, 12:15 AM IST
ಫೋಟೋ ಜು.೨೧ ವೈ.ಎಲ್.ಪಿ. ೦೪ | Kannada Prabha

ಸಾರಾಂಶ

ಸಮಸ್ಯೆಗಳ ಬಗ್ಗೆ ಗಮನಕ್ಕೆ ತರಲು ಕರೆ ಮಾಡಿದರೆ ಅಧಿಕಾರಿಗಳು ಕರೆ ಸ್ವೀಕರಿಸುತ್ತಿಲ್ಲವೆಂದು ಮನ್ವೆಲ್ ಸಿದ್ದಿ ದೂರಿದರು.

ಯಲ್ಲಾಪುರ: ಪರಿಶಿಷ್ಟ ಪಂಗಡದವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳು ಹಾಗೂ ಸಮಸ್ಯೆಗಳ ಕುರಿತು ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಅಧ್ಯಕ್ಷತೆಯಲ್ಲಿ ಪಟ್ಟಣದ ತಾಪಂ ಸಭಾಭವನದಲ್ಲಿ ಸಭೆ ನಡೆಯಿತು.

ಸಮಸ್ಯೆಗಳ ಬಗ್ಗೆ ಗಮನಕ್ಕೆ ತರಲು ಕರೆ ಮಾಡಿದರೆ ಅಧಿಕಾರಿಗಳು ಕರೆ ಸ್ವೀಕರಿಸುತ್ತಿಲ್ಲವೆಂದು ಮನ್ವೆಲ್ ಸಿದ್ದಿ ದೂರಿದರು. ನಿಮಗೆ ೩೨ ಬಾರಿ ಕರೆ ಮಾಡಿದರೂ ಸ್ವೀಕರಿಸಿಲ್ಲ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಉಮೇಶ ಅವರನ್ನು ತರಾಟೆಗೆ ತೆಗೆದುಕೊಂಡರು.

ಕೊರೋನ ನಂತರ ಕೆಳಾಸೆಗೆ ಬಸ್ ಓಡಾಟ ನಿಂತಿದೆ. ಪ್ರತಿನಿತ್ಯ ಶಾಲೆಗೆ ಬರುವ ವಿದ್ಯಾರ್ಥಿಗಳು ೬ ಕಿ.ಮೀ. ನಡೆದು ಬರಬೇಕು. ರಸ್ತೆಯೂ ಹದಗೆಟ್ಟಿದ್ದು, ದುರಸ್ತಿಗೆ ಕ್ರಮ ಆಗಿಲ್ಲ ಎಂದು ಕೆಳಾಸೆ ಭಾಗದ ಸಿದ್ದಿ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿದರು.

ಎಸ್ಟಿ ಸಮುದಾಯದವರಿಗಾಗಿ ಸರ್ಕಾರದಿಂದ ನೀಡುವ ಸಮುದಾಯ ಭವನ ಕೇವಲ ಹೆಸರಿಗೆ ಮಾತ್ರ ಮಂಜೂರಿಯಾಗುತ್ತಿದೆ. ಸಮುದಾಯದವರ ಬಳಕೆಗೆ ಸಿಗುತ್ತಿಲ್ಲ ಎಂದು ಕಿರವತ್ತಿಯ ಕಲ್ಲಪ್ಪ ಹೋಳಿ ದೂರಿದರು.

ಸಭೆಯಲ್ಲಿ ಹೆಚ್ಚಿನವರು ತಮ್ಮ ವೈಯಕ್ತಿಕ ಸಮಸ್ಯೆಗಳ ಕುರಿತಾಗಿಯೇ ಪ್ರಸ್ತಾಪಿಸಿದರೆ ಹೊರತು, ಸಾಮೂಹಿಕ ವಿಚಾರದ ಕುರಿತು ವಿಶೇಷ ಗಮನ ಸೆಲೆಯಲಿಲ್ಲ. ಅರಣ್ಯ ಅತಿಕ್ರಮಣ, ವಸತಿ ಯೋಜನೆಯ ಮನೆ ಮಂಜೂರಾತಿ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.

ಈ ಸಂದರ್ಭದಲ್ಲಿ ತಾಪಂ ಇಒ ರಾಜೇಶ ಧನವಾಡಕರ್, ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲು ಗಾಲಿ ಕಾರ್ಖಾನೆ ಉದ್ಯೋಗಿಗೆಅಂಬೇಡ್ಕರ್ ರಾಷ್ಟ್ರೀಯ ಫೆಲೋಶಿಪ್
ಡಿ.23ಕ್ಕೆ ರೈತರ ದಿನಾಚರಣೆ, ರಾಜ್ಯಮಟ್ಟದ ಸಮಾವೇಶ