ಸಂಘದ ಸೌಲಭ್ಯ ಸದ್ಬಳಸಿಕೊಳ್ಳಿ: ಅಧ್ಯಕ್ಷ ಮುನಿಕೃಷ್ಣಪ್ಪ ಸಲಹೆ

KannadaprabhaNewsNetwork |  
Published : Jan 17, 2026, 03:00 AM IST
01 | Kannada Prabha

ಸಾರಾಂಶ

ದೇವನಹಳ್ಳಿ: ಸಹಕಾರ ಸಂಘಗಳಲ್ಲಿ ದೊರೆಯುವ ಸೌಲಭ್ಯಗಳನ್ನು ಸದ್ಬಳಸಿಕೊಂಡು ಆರ್ಥಿಕವಾಗಿ ಪ್ರಗತಿ ಹೊಂದಬೇಕು ಎಂದು ಶ್ರೀ ವಾಲ್ಮೀಕಿ ಸಹಕಾರ ಸಂಘದ ಅಧ್ಯಕ್ಷ ಮುನಿಕೃಷ್ಣಪ್ಪ ತಿಳಿಸಿದರು.

ದೇವನಹಳ್ಳಿ: ಸಹಕಾರ ಸಂಘಗಳಲ್ಲಿ ದೊರೆಯುವ ಸೌಲಭ್ಯಗಳನ್ನು ಸದ್ಬಳಸಿಕೊಂಡು ಆರ್ಥಿಕವಾಗಿ ಪ್ರಗತಿ ಹೊಂದಬೇಕು ಎಂದು ಶ್ರೀ ವಾಲ್ಮೀಕಿ ಸಹಕಾರ ಸಂಘದ ಅಧ್ಯಕ್ಷ ಮುನಿಕೃಷ್ಣಪ್ಪ ತಿಳಿಸಿದರು.

ಪಟ್ಟಣದ ವಾಲ್ಮೀಕಿ ಸಹಕಾರ ಸಂಘದ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ವಾಲ್ಮೀಕಿ ಸಮುದಾಯದವನ್ನು ಆರ್ಥಿಕವಾಗಿ ಸದೃಢಗೊಳಿಸಲು ಸಂಘ ಸ್ಥಾಪಿಸಲಾಗಿದೆ. ಸಂಘದಲ್ಲಿ ಅನೇಕ ಸಾಲ ಸೌಲಭ್ಯಗಳು ಹಾಗೂ ವಿವಿಧ ತರಬೇತಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಸದಸ್ಯರು ಸದ್ಬಳಸಿಕೊಳ್ಳಬೇಕು ಹಾಗೂ ಸಂಘದಲ್ಲೇ ವ್ಯವಹರಿಸಿ ಸಂಘದ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.

ಶ್ರೀ ವಾಲ್ಮೀಕಿ ಸಹಕಾರ ಸಂಘದ ಉಪಾಧ್ಯಕ್ಷ ಜಿ.ರಾಧಾಕೃಷ್ಣ ಮಾತನಾಡಿ, ಜ.೧೬ರಿಂದ ಸಂಘ ಅಧಿಕೃತವಾಗಿ ಪ್ರಾರಂಭವಾಗಲಿದೆ. ಖಾಸಗಿ ಬ್ಯಾಂಕ್‌ನಲ್ಲಿ ದೊರೆಯುವ ಎಲ್ಲಾ ಸೌಲಭ್ಯಗಳು ನಮ್ಮ ಸಹಕಾರ ಸಂಘದಲ್ಲಿ ದೊರೆಯುತ್ತಿದ್ದು ಸದಸ್ಯರು ಖಾಸಗಿ ಬ್ಯಾಂಕ್‌ಗಳಲ್ಲಿ ವ್ಯವಹರಿಸುವ ಬದಲು ಸಹಕಾರ ಸಂಘದಲ್ಲಿ ವ್ಯವಹರಿಸಿದರೆ ಸಂಘದ ಅಭಿವೃದ್ಧಿಯ ಜೊತೆಗೆ ಅನೇಕರಿಗೆ ಸಾಲ ಸೌಲಭ್ಯ ನೀಡಬಹುದು. ಮಹಿಳಾ ಸ್ತ್ರೀ ಶಕ್ತಿ ಸಂಘಗಳಿಗೆ ಸಾಲ ಸೌಲಭ್ಯ ಹಾಗೂ ಹೊಲಿಗೆ ಯಂತ್ರ ತರಬೇತಿ, ಸಂಘದ ಸದಸ್ಯರ ಮಕ್ಕಳಿಗೆ ಕಂಪ್ಯೂಟರ್ ತರಬೇತಿ ನೀಡಲಾಗುವುದು ಎಂದರು.

ಈ ವೇಳೆ ಶ್ರೀ ವಾಲ್ಮೀಕಿ ಸಹಕಾರ ಸಂಘದ ನಿರ್ದೇಶಕರಾದ ಮಹೇಶ್, ಲೋಕೇಶ್, ಶ್ರೀನಿವಾಸ್, ತಿಮ್ಮರಾಜು, ವೀರಬದ್ರಪ್ಪ, ನವೀನ್ ಕೋರಮಂಗಲ, ಬೊಮ್ಮನಹಳ್ಳಿ ನಾರಾಯಣಸ್ವಾಮಿ, ಚಿಕ್ಕ ತತ್ತಮಂಗಲ ಮಾಸಪ್ಪ, ಮಂಜುನಾಥ್, ನವೀನ್ ರಾಯಸಂದ್ರ, ವರಲಕ್ಷ್ಮಿ ಮುನಿಕೃಷ್ಣಪ್ಪ, ರೇಣುಕಮ್ಮ, ಗೌತಮಿ, ನೀಲಮ್ಮ, ಮಂಜುನಾಥ್, ಶಶಿಕಲಾ, ಜ್ಯೋತಿ, ಮನೋಜ್, ವಿಜಯ್‌ ಇತರರಿದ್ದರು.

೧೩ ದೇವನಹಳ್ಳಿ ಚಿತ್ರಸುದ್ದಿ: ೦೧

ಶ್ರೀ ವಾಲ್ಮೀಕಿ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಾ ಜಿಪಂ ಎಲೆಕ್ಷನ್‌ಗೆ ಮೈಸೂರು ಇಂಕ್‌ ಬಳಕೆ
ಮಾಜಿ ಸಚಿವ ರಾಜಣ್ಣಗೆ ಸಿಹಿ ಸುದ್ದಿ : ಮುಖ್ಯಮಂತ್ರಿ ಸಿದ್ಧರಾಮಯ್ಯ