ಕನ್ನಡಪ್ರಭ ವಾರ್ತೆ ಯಲಬುರ್ಗಾ
ತಾಲೂಕಿನ ಲಿಂಗನಬಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸೋಮವಾರ ರಾತ್ರಿ ನಿಡಶೇಶಿ ಕರಿಬಸವಮಠ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಆಯೋಜಿಸಿದ್ದ ಸದ್ಭಾವನಾ ಯಾತ್ರೆ ಧಾರ್ಮಿಕ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು.ಈಗಾಗಲೇ ನಾನು ೧೦ ಗ್ರಾಮಗಳಲ್ಲಿ ಪ್ರವಚನ ಹಮ್ಮಿಕೊಂಡಿದ್ದು, ಇದು ೧೧ನೇ ಗ್ರಾಮವಾಗಿದೆ. ಯುವಕರು ದುಶ್ಚಟಗಳ ದಾಸರಾಗಿ ಈ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ. ನೀವೆಲ್ಲ ದೇಶದ ಬಹುದೊಡ್ಡ ಆಸ್ತಿ ಎಂದರು.
ಮನುಷ್ಯನಾಗಿ ಹುಟ್ಟಿದ ಮೇಲೆ ಸಮಾಜಕ್ಕಾಗಿ ಏನನ್ನಾದರೂ ಒಳಿತನ್ನು ಮಾಡುವ ಗುಣ ಬೆಳೆಸಿಕೊಳ್ಳಬೇಕು. ಆದರೆ ಕೆಟ್ಟದನ್ನು ಎಂದೂ ಮಾಡಬಾರದು, ಬಯಸುಬಾರದು. ಅದು ನಮ್ಮನ್ನು ಸದಾ ಕಾಪಾಡುತ್ತದೆ. ದೇವರು ಸಿರಿಸಂಪತ್ತನ್ನು ಕೊಟ್ಟಾಗ ಕರೆದು ದಾನ, ಧರ್ಮ ಮಾಡುವ ಮನೋಭಾವನೆಯನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು, ಹೆತ್ತವರು, ಗುರು ಹಿರಿಯರನ್ನು ಗೌರವದಿಂದ ಕಾಣುವುದು ಇತರರಿಗೆ ಮಾದರಿಯಾಗಿರಬೇಕು ಅಂದಾಗ ಜೀವನ ಪಾವನವಾಗುತ್ತದೆ ಎಂದರು.ಈ ಸಂದರ್ಭ ಧಾರವಾಡ ದುಮ್ಮಮಠದ ಸರ್ಪಭೂಷಣ, ಲಿಂಗನಬಂಡಿಯ ಉಳಿವೇಂದ್ರಸ್ವಾಮಿ ಮೌನೇಶ್ವರಮಠಮ ಶಂಭುಲಿಂಗಯ್ಯ ಹಿರೇಮಠ, ವಿಠಲ್ ಚಳಗೇರಿ, ರಾಮಣ್ಣ ಕಂದಕೂರು, ಗ್ರಾಮದ ಗುರು-ಹಿರಿಯರು, ಯುವಕರು, ಇತರರು ಇದ್ದರು.
ಶ್ರೀಗಳ ಕಾರ್ಯಕ್ಕೆ ಮೆಚ್ಚುಗೆ: