ಒನಕೆ ಓಬವ್ವ ಜಯಂತಿಯಲ್ಲಿ ಹೆಚ್ಚು ಜನ ಭಾಗವಹಿಸಿ ಯಶಸ್ವಿಗೊಳಿಸಿ

KannadaprabhaNewsNetwork |  
Published : Oct 21, 2024, 12:37 AM IST
ಚಿತ್ರದುರ್ಗ ಎರಡನೇ ಪುಟದ ಬಾಟಂ  | Kannada Prabha

ಸಾರಾಂಶ

ಒನಕೆಯ ಮೂಲಕ ಶತ್ರುಗಳನ್ನು ಸದೆಬಡಿದು ಐತಿಹಾಸಿಕ ಚಿತ್ರದುರ್ಗದ ಕೋಟೆಯನ್ನು ಸಂರಕ್ಷಿಸಿ ನಾಡಿನಾದ್ಯಂತ ಪರಿಚಿತರಾಗಿರುವ ಒನಕೆ ಓಬವ್ವ ಜಯಂತಿಯನ್ನು ಸರ್ಕಾರದ ಜೊತೆ ನಾವು ಕೈಜೋಡಿಸಿ ಆಚರಿಸಬೇಕಾಗಿದೆ. ಛಲವಾದಿ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಯಂತಿಯನ್ನು ಯಶಸ್ವಿಗೊಳಿಸಬೇಕು ಎಂದು ನಗರಸಭೆ ಮಾಜಿ ಅಧ್ಯಕ್ಷ ಎಚ್.ಸಿ.ನಿರಂಜನಮೂರ್ತಿ ಸಲಹೆ ನೀಡಿದ್ದಾರೆ.

ಕನ್ನಡಪ್ರಭವಾರ್ತೆ ಚಿತ್ರದುರ್ಗ

ಒನಕೆಯ ಮೂಲಕ ಶತ್ರುಗಳನ್ನು ಸದೆಬಡಿದು ಐತಿಹಾಸಿಕ ಚಿತ್ರದುರ್ಗದ ಕೋಟೆಯನ್ನು ಸಂರಕ್ಷಿಸಿ ನಾಡಿನಾದ್ಯಂತ ಪರಿಚಿತರಾಗಿರುವ ಒನಕೆ ಓಬವ್ವ ಜಯಂತಿಯನ್ನು ಸರ್ಕಾರದ ಜೊತೆ ನಾವು ಕೈಜೋಡಿಸಿ ಆಚರಿಸಬೇಕಾಗಿದೆ. ಛಲವಾದಿ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಯಂತಿಯನ್ನು ಯಶಸ್ವಿಗೊಳಿಸಬೇಕು ಎಂದು ನಗರಸಭೆ ಮಾಜಿ ಅಧ್ಯಕ್ಷ ಎಚ್.ಸಿ.ನಿರಂಜನಮೂರ್ತಿ ಸಲಹೆ ನೀಡಿದ್ದಾರೆ.

ನವೆಂಬರ್ ತಿಂಗಳಲ್ಲಿ ನಡೆಯುವ ಒನಕೆ ಓಬವ್ವ ಜಯಂತಿಯನ್ನು ಅದ್ದೂರಿಯಾಗಿ ಆಚರಿಸುವ ಸಂಬಂಧ ಭಾನುವಾರ ಪ್ರವಾಸಿ ಮಂದಿರದಲ್ಲಿ ಛಲವಾದಿ ಜನಾಂಗದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಯಂತಿಗೆ ಸಂಬಂಧಿಸಿದಂತೆ ನ.3ರಂದು ಮತ್ತೊಮ್ಮೆ ನಡೆಯುವ ಪೂವಭಾವಿ ಸಭೆಗೆ ಛಲವಾದಿ ಸಮುದಾಯದವರು ಆಗಮಿಸಿ ಸೂಕ್ತ ಸಲಹೆಗಳನ್ನು ನೀಡುವಂತೆ ಮನವಿ ಮಾಡಿದರು.

ಡಾ.ಪಿ.ವಿ.ಶ್ರೀಧರಮೂರ್ತಿ ಮಾತನಾಡಿ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸೋಣ. ಜನಾಂಗದ ಎಲ್ಲರ ಸಹಕಾರ ಅತಿ ಮುಖ್ಯ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್ ಮಾತನಾಡಿ, ಛಲವಾದಿ ಸಮುದಾಯದವರಲ್ಲಿ ಜಾಗೃತಿ ಮೂಡಿಸಬೇಕಾಗಿ ರುವುದರಿಂದ ಒನಕೆ ಓಬವ್ವಳ ಜಯಂತಿ ಮೂಲಕವಾದರೂ ಎಲ್ಲರೂ ಒಂದೆಡೆ ಸೇರೋಣ ಎಂದರು.

ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಜನಾಂಗದ ಇತರೆ ಮಕ್ಕಳನ್ನು ಉತ್ತೇಜಿಸಿದಂತಾಗುತ್ತದೆ ಎಂದು ತಿಳಿಸಿದರು.

ಶಾರದಾ ಬ್ರಾಸ್‌ಬ್ಯಾಂಡ್‌ನ ಗುರುಮೂರ್ತಿ ಮಾತನಾಡಿ ಜನಾಂಗದ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಜಯಂತಿಯಲ್ಲಿ ಪ್ರೋತ್ಸಾಹಿಸಿದರೆ ಅದಕ್ಕೆ ಬೇಕಾದ ಎಲ್ಲಾ ರೀತಿಯ ನೆರವು ನೀಡುತ್ತೇನೆ. ಹೊಳಲ್ಕೆರೆ ರಸ್ತೆಯಲ್ಲಿರುವ ಗೌರಸಮುದ್ರ ಮಾರಮ್ಮನ ದೇವಸ್ಥಾನದ ಸಮೀಪದಿಂದ ಮೆರವಣಿಗೆ ಹೊರಡೋಣ ಎಂದು ಸಲಹೆ ನೀಡಿದರು.

ಬಿಜೆಪಿ ಮುಖಂಡೆ ಭಾರ್ಗವಿ ದ್ರಾವಿಡ್ ಮಾತನಾಡಿ, ಒನಕೆ ಓಬವ್ವ ಜಯಂತಿಯನ್ನು ಹಬ್ಬದ ರೀತಿಯಲ್ಲಿ ಆಚರಿಸೋಣ. ಛಲವಾದಿ ಜನಾಂಗದವರು ಕುಟುಂಬ ಸಮೇತ ಜಯಂತಿಯಲ್ಲಿ ಪಾಲ್ಗೊಂಡು ಚಿತ್ರದುರ್ಗದಲ್ಲಿ ಓಬವ್ವಳನ್ನು ಸ್ಮರಿಸಿಕೊಳ್ಳುವಂತಾಗಬೇಕೆಂದು ಹೇಳಿದರು.

ಎಸ್.ಎನ್.ರವಿಕುಮಾರ್, ಶಿಕ್ಷಣ ಇಲಾಖೆಯ ನಾಗರಾಜ್, ಎಚ್. ಅಣ್ಣಪ್ಪಸ್ವಾಮಿ, ದಯಾನಂದ್, ಚನ್ನಬಸಪ್ಪ ಮುಸ್ಟೂರು, ಮಂಜಣ್ಣ, ಜಯರಾಂ ಕೆ. ಶಶಾಂಕ್, ರಂಗಸ್ವಾಮಿ ಚಿಕ್ಕಪುರ, ರಾಮಲಿಂಗಪ್ಪ, ಪರಮೇಶ್ ಪೂಜಾರ್, ಮಂಜುನಾಥ್, ಜಯಣ್ಣ, ನಾಗರಾಜ್ ಪೈಲೆಟ್, ಉಮಾಶಂಕರ್ ಸೇರಿದಂತೆ ಛಲವಾದಿ ವಂಶಸ್ಥರು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ