ಜಾತ್ರಾ ಮಹೋತ್ಸವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಸಚಿವ ಲಾಡ್‌

KannadaprabhaNewsNetwork |  
Published : Jan 08, 2026, 02:45 AM IST
ಗ್ರಾಮದೇವತೆ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಸಚಿವ ಸಂತೋಷ ಲಾಡ್‌ ಕಲಘಟಗಿ ತಹಸೀಲ್ದಾರ್‌ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಿದರು. | Kannada Prabha

ಸಾರಾಂಶ

ಉತ್ತರ ಕರ್ನಾಟಕ ಭಾಗದಲ್ಲಿಯೇ ಅದ್ಧೂರಿಯಾಗಿ ನಡೆಯವ ಜಾತ್ರೆಗಳಲ್ಲಿ ಒಂದಾಗಿದ್ದು, ಧಾರವಾಡ ಸೇರಿದಂತೆ ಅನ್ಯ ಜಿಲ್ಲೆಗಳಿಂದ ಸಾವಿರಾರು ಭಕ್ತರು ಈ ಜಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಲಘಟಗಿ:

ಕಲಘಟಗಿಯಲ್ಲಿ ಫೆ. 25ರಿಂದ ಮಾ. 5ರ ವರೆಗೆ ನಡೆಯುವ ಗ್ರಾಮದೇವತೆಯ ಜಾತ್ರೆಗೆ ಆಗಮಿಸುವ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಸೂಚಿಸಿದರು.

ಮಂಗಳವಾರ ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಉತ್ತರ ಕರ್ನಾಟಕ ಭಾಗದಲ್ಲಿಯೇ ಅದ್ಧೂರಿಯಾಗಿ ನಡೆಯವ ಜಾತ್ರೆಗಳಲ್ಲಿ ಒಂದಾಗಿದ್ದು, ಧಾರವಾಡ ಸೇರಿದಂತೆ ಅನ್ಯ ಜಿಲ್ಲೆಗಳಿಂದ ಸಾವಿರಾರು ಭಕ್ತರು ಈ ಜಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಭದ್ರತೆಗಾಗಿ ಹೆಚ್ಚು ಪೊಲೀಸ್ ಸಿಬ್ಬಂದಿ ನೇಮಿಸುವುದು, ಸ್ವಚ್ಛತೆಯನ್ನು ಕಾಪಾಡುವ ದೃಷ್ಟಿಯಿಂದ ಹೆಚ್ಚು ಸಂಖ್ಯೆಯಲ್ಲಿ ತಾತ್ಕಾಲಿಕ ಶೌಚಾಲಯಗಳ ನಿರ್ಮಾಣ, ಒಳ ಚರಂಡಿಗಳ ಸ್ವಚ್ಛತೆ, ಸಮರ್ಪಕ ನೀರಿನ ಸರಬರಾಜು, ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸುವ ಜನರಿಗೆ ಸಾರಿಗೆ ವ್ಯವಸ್ಥೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿರುವ ಬೀದಿದೀಪ ಸರಿಪಡಿಸುವುದು ಸೇರಿದಂತೆ ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದಕ್ಕೂ ಪೂರ್ವದಲ್ಲಿ ಸಚಿವರು ಪಟ್ಟಣದ ತಹಸೀಲ್ದಾರ್ ಕಚೇರಿಗೆ ಭೇಟಿ ನೀಡಿ ಸ್ಥಿತಿ-ಗತಿಗಳನ್ನು ಪರಿಶೀಲಿಸಿದರು. ಇದೇ ವೇಳೆಯಲ್ಲಿ ಸಾರ್ವಜನಿಕರ ಹಲವಾರು ಅಹವಾಲು ಆಲಿಸಿದರು. ಈ ವೇಳೆ ತಾಪಂ ಇಒ ಪಿ.ಐ. ಸಾವಂತ, ಪಪಂ ಮುಖ್ಯಾಧಿಕಾರಿ ಬಿ. ಚಂದಶೇಖರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಮುರಳ್ಳಿ, ಬಾಬು ಅಂಚಟಗೇರಿ, ಮಹಾಂತೇಶ ತಹಶೀಲ್ದಾರ, ಕುಮಾರ್ ಖಂಡೇಕರ್, ಸಾಯಿನಾಥ ಯಲ್ಲಾಪುರಕರ, ಗ್ರಾಮದೇವಿ ಜಾತ್ರಾ ಮಹೋತ್ಸವದ ಟ್ರಸ್ಟಿನ ಪದಾಧಿಕಾರಿಗಳು, ಪಪಂ ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ