ಅಭಿವೃದ್ಧಿ ಕೆಲಸ ಕುಂಠಿತವಾಗದಂತೆ ನೋಡಿಕೊಳ್ಳಿ

KannadaprabhaNewsNetwork |  
Published : Sep 12, 2024, 01:45 AM IST
ಚನ್ನಮ್ಮನ ಕಿತ್ತೂರು ತಾಪಂಯಲ್ಲಿ ಲೆಕ್ಕಪತ್ರ ಹಾಗೂ ಕಡತಗಳನ್ನು ಪರಿಶೀಲನೆ ನಡೆಸಿದ ಜಿಪಂ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡುಗುಂಟಿ. | Kannada Prabha

ಸಾರಾಂಶ

ಚನ್ನಮ್ಮನ ಕಿತ್ತೂರು ತಾಲೂಕಿನ ಯಾವುದೇ ಗ್ರಾಮಗಳಲ್ಲಿ ಯಾವುದೇ ಕಾಮಗಾರಿಗಳಾಗಲಿ ಹಾಗೂ ಸರ್ಕಾರಿ ಕೆಲಸಗಳಾಗಲಿ ಕುಂಠಿತಗೊಳ್ಳಬಾರದೆಂದು ಜಿಪಂ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡುಗುಂಟಿ ಹೇಳಿದರು.

ಕನ್ನಡಪ್ರಭ ವಾರ್ತೆ ಚನ್ನಮ್ಮನ ಕಿತ್ತೂರು

ತಾಲೂಕಿನ ಯಾವುದೇ ಗ್ರಾಮಗಳಲ್ಲಿ ಯಾವುದೇ ಕಾಮಗಾರಿಗಳಾಗಲಿ ಹಾಗೂ ಸರ್ಕಾರಿ ಕೆಲಸಗಳಾಗಲಿ ಕುಂಠಿತಗೊಳ್ಳಬಾರದೆಂದು ಜಿಪಂ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡುಗುಂಟಿ ಹೇಳಿದರು.

ಪಟ್ಟಣದಲ್ಲಿರುವ ತಾಲೂಕು ಪಂಚಾಯತಿಗೆ ಭೇಟಿ ನೀಡಿ ಲೆಕ್ಕಪತ್ರ ಹಾಗೂ ಕಡತಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಈ ವೇಳೆ ತಾಲೂಕಿನ ತುರಮರಿ, ಹಣಶೀಕಟ್ಟಿಯ ಗ್ರಾಪಂಗೆ ಭೇಟಿ ನೀಡಿ ಸ್ವಚ್ಛತೆ ಸೇರಿದಂತೆ ಮೂಲ ಸೌಕರ್ಯಗಳ ಪರಿಶೀಲನೆ ನಡೆಸಿದರು. ಇಲ್ಲಿಯ ಸರ್ಕಾರಿ ಹಿರಿಯ ಪ್ರೌಢಶಾಲೆಗೆ ಭೇಟಿ ನೀಡಿ ಸ್ವಚ್ಛತೆಯ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದ ಅವರು, ತುರಮರಿ ಪ್ರೌಢಶಾಲೆಯ ಆವರಣದಲ್ಲಿ ಸ್ವಚ್ಛತೆ ಇಲ್ಲದ ಕಾರಣ, ಶಿಕ್ಷಕರಿಗೆ ತರಾಟೆ ತೆಗೆದುಕೊಂಡು ಸ್ವಚ್ಛತೆಗೆ ಆದ್ಯತೆ ನೀಡುವಂತೆ ತಿಳಿಸಿದರು.ತಾಪಂ ಇಒ ಕಿರಣ ಘೋರ್ಪಡೆ, ಜಿಪಂ ಸಿಬ್ಬಂದಿ ಶಶಿಕಾಂತ ನೇಸರಗಿ, ಸುವರ್ಣ ಮಹೇಂದ್ರಕರ ಹಾಗೂ ಪಿಡಿಒಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ