ಜಾನುವಾರು ಲಸಿಕಾ ಅಭಿಯಾನ ಯಶಸ್ವಿಗೊಳಿಸಿ

KannadaprabhaNewsNetwork |  
Published : Oct 18, 2024, 12:08 AM IST
16ಕೆಪಿಆರ್ಸಿಆರ್ 02:  | Kannada Prabha

ಸಾರಾಂಶ

ಪೋಸ್ಟರ್ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ ಕೆ.ನಿತೀಶ್‌ ಸೂಚನೆ

ಕನ್ನಡಪ್ರಭ ವಾರ್ತೆ ರಾಯಚೂರು

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ವತಿಯಿಂದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲು ಬಾಯಿ ರೋಗದ ಉಚಿತ ಸಾಮೂಹಿಕ ಲಸಿಕಾ ಅಭಿಯಾನ ಇದೇ ಅ.21ರಿಂದ ನ.20 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಎಲ್ಲರೂ ಸಹಕರಿಸಿ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿಕೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ನಿತೀಶ್ ಅವರು ತಿಳಿಸಿದ್ದಾರೆ.

ಸ್ಥಳೀಯ ಡಿಸಿ ಕಚೇರಿಯಲ್ಲಿ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿ ಅವರು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಸಿಬ್ಬಂದಿ ತಮ್ಮ ಹಳ್ಳಿಗೆ ಲಸಿಕೆ ಹಾಕಲು ಬಂದಾಗ ಎಲ್ಲಾ ರೈತ ಬಾಂಧವರು ತಮ್ಮಲ್ಲಿರುವ ಎಲ್ಲಾ ಹಸು ಮತ್ತು ಎಮ್ಮೆ ಮತ್ತು 3ತಿಂಗಳ ಮೇಲ್ಪಟ್ಟ ಕರುಗಳಿಗೆ ಲಸಿಕೆ ಹಾಕಿಸಿವುದರ ಮೂಲಕ ಸಾಂಕ್ರಾಮಿಕ ರೋಗದಿಂದಾಗುವ ಆರ್ಥಿಕ ನಷ್ಟವನ್ನು ತಪ್ಪಿಸಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೆಶಕರಾದ ಅಶೋಕ ಕೋಲಕಾರ್ ಹಾಗೂ ಇಲಾಖೆಯ ವಿವಿಧ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ