ವಿಶ್ವ ಬಾಲ ಕಾರ್ಮಿಕರ ದಿನಾಚರಣೆ । ವಿಶೇಷ ಉಪನ್ಯಾಸ ಕಾರ್ಯಕ್ರಮ
ಬಾಲ ಕಾರ್ಮಿಕ ಮುಕ್ತ ದಾವಣಗೆರೆ ಜಿಲ್ಲೆಯನ್ನಾಗಿಸಲು ಸಮಾಜದ ಪ್ರತಿಯೊಬ್ಬರೂ ಕಾರ್ಯ ಪ್ರವೃತ್ತರಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಪಂ, ಕಾರ್ಮಿಕ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಬಾಲ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಲ್ಲಿ ಪ್ರಗತಿ ಸ್ಪಷ್ಟವಾಗಿದೆ. ಆದರೆ, ಇನ್ನೂ ಪರಿಣಾಮಕಾರಿಯಾಗಿ ಬಾಲ, ಕಿಶೋರ ಕಾರ್ಮಿಕ ಪದ್ದತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯವಾಗಿಲ್ಲ. ಇದನ್ನು ಸಂಪೂರ್ಣ ನಿರ್ಮೂಲನೆ ಮಾಡುವುದಕ್ಕಾಗಿ ಪ್ರಯತ್ನಗಳಿಗೆ ಮತ್ತಷ್ಟು ವೇಗ ನೀಡಬೇಕೆಂಬ ಘೋಷವಾಕ್ಯದೊಂದಿಗೆ ಈ ವರ್ಷದ ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಮಾತನಾಡಿ, ನಮ್ಮ ಕೆಲಸ, ಕಾರ್ಯ ಕೇವಲ ಪ್ರಶಂಸೆಗೆ ಸೀಮಿತವಾಗದೇ, ಬಾಲಕಾರ್ಮಿಕ ನಿರ್ಮೂಲನೆಗೆ ಪ್ರತಿಯೊಬ್ಬರೂ ತಂಡೋಪ ತಂಡವಾಗಿ ಕೆಲಸ ಮಾಡಬೇಕಿದೆ. ಜಿಲ್ಲೆಯಲ್ಲಿ ಇಂದಿಗೂ ಅಲ್ಲಲ್ಲಿ ಬಾಲಕಾರ್ಮಿಕ, ಬಾಲ್ಯ ವಿವಾಹದಂತಹ ಪ್ರಕರಣ ಕಂಡು ಬರುತ್ತಿವೆ ಎಂದರು.
ಜಿಪಂ ಸಿಇಒ ಸುರೇಶ್ ಬಿ ಇಟ್ನಾಳ್, ಎಎಸ್ಪಿ ಜಿ.ಮಂಜುನಾಥ, ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣಕುಮಾರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಗಾಯತ್ರಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಲ್ಯಾಣಾಧಿಕಾರಿ ನವೀನ ಮಠದ್, ಸಾಶಿಇ ಉಪ ನಿರ್ದೇಶಕ ಕೊಟ್ರೇಶ, ಕಾರ್ಮಿಕ ಇಲಾಖೆ ಸಹಾಯಕ ಆಯುಕ್ತ ಅವಿನಾಶ , ವಿವಿಧ ಸಂಘಟನೆ ಮುಖಂಡರು, ಕಾಲೇಜು ವಿದ್ಯಾರ್ಥಿಗಳಿದ್ದರು. ಡಾನ್ ಬಾಸ್ಕೋದ ಮಂಜುನಾಥ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಕುರಿತು ಉಪನ್ಯಾಸ ನೀಡಿದರು.
ಸುರೇಶ ಬಿ.ಇಟ್ನಾಲ್, ಸಿಇಒ, ಜಿಪಂ.