ಕಾಲುಬಾಯಿ ರೋಗದ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ

KannadaprabhaNewsNetwork |  
Published : Oct 28, 2025, 12:03 AM IST
ಚಿತ್ರ 27ಬಿಡಿಆರ್54 | Kannada Prabha

ಸಾರಾಂಶ

ರ್ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಬೀದರ್‌ ಜಿಲ್ಲೆಯಾದ್ಯಂತ ಇದೇ ನ.3 ರಿಂದ ಡಿ.3 ರವರೆಗೆ ಜಾನುವಾರುಗಳಿಗೆ ಎಂಟನೇ ಹಂತದ ಕಾಲುಬಾಯಿ ಜ್ವರ ರೋಗದ ಲಸಿಕೆ ನೀಡಲಾಗುತ್ತಿದ್ದು, ಈ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ತಿಳಿಸಿದರು.

ಬೀದರ್‌: ರ್ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಬೀದರ್‌ ಜಿಲ್ಲೆಯಾದ್ಯಂತ ಇದೇ ನ.3 ರಿಂದ ಡಿ.3 ರವರೆಗೆ ಜಾನುವಾರುಗಳಿಗೆ ಎಂಟನೇ ಹಂತದ ಕಾಲುಬಾಯಿ ಜ್ವರ ರೋಗದ ಲಸಿಕೆ ನೀಡಲಾಗುತ್ತಿದ್ದು, ಈ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ತಿಳಿಸಿದರು.

ಅವರು ಸೋಮವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮ ಸಂಬಂಧ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಎಲ್ಲ ಗ್ರಾಮಗಳಲ್ಲಿ ವ್ಯಾಪಕ ಪ್ರಚಾರ ಬೇಕು.

ಗ್ರಾಮ ಮಟ್ಟದಲ್ಲಿ ಪಿಡಿಓ, ಆಶಾ ಅಂಗನವಾಡಿ ಕಾರ್ಯಕರ್ತೆಯರು, ಕೃಷಿ ಸಖಿಯರು, ಕೆ.ಎಂ.ಎಫ್ ಹಾಗೂ ಶಿಕ್ಷಣ ಇಲಾಖೆ ಸೇರಿ ಈ ಲಸಿಕೆ ಕಾರ್ಯಕ್ರಮ ಕುರಿತು ಪ್ರಚಾರ ಮಾಡುವಂತೆ ತಿಳಿಸಿದರು.

ಎಲ್ಲ ಗ್ರಾಮಗಳಲ್ಲಿ ಗ್ರಾಪಂ ವತಿಯಿಂದ ಡಂಗೂರ ಸಾರುವಂತೆ ಸೂಚಿಸಿದರು. ಜಿಲ್ಲೆಯಲ್ಲಿ ಕಳೆದ 5 ವರ್ಷಗಳಲ್ಲಿ ಒಂದು ಲಕ್ಷ ಜಾನುವಾರು ಕಡಿಮೆಯಾಗಿರುವುದಕ್ಕೆ ಕಳವಳ ವ್ಯಕ್ತಪಡಿಸಿ, ಇಂಟಿಗ್ರೇಟೆಡ್ ಫಾರ್ಮಿಂಗ್‌ಗೆ ಹೆಚ್ಚು ಒತ್ತು ನೀಡುವ ಕುರಿತು ರೈತರಲ್ಲಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಲಸಿಕೆಗಳು, ಸಿರೀಂಜ್ ಹಾಗೂ ತುರ್ತು ಔಷಧಿಗಳು ಸರಿಯಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.

ಪಶು ವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಡಾ.ನರಸಪ್ಪ ಎ.ಡಿ. ಮಾತನಾಡಿ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿ ತಂಡಗಳನ್ನು ರಚಿಸಲಾಗಿದೆ. ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ ಎಂದರು.

ಜಿಪಂ ಕಾರ್ಯದರ್ಶಿ ಸೂರ್ಯಕಾಂತ ಬಿರಾದಾರ ಹಾಗೂ ತಾಲೂಕು ಮಟ್ಟದ ಪಶು ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!