ಗ್ಯಾರಂಟಿ ಉತ್ಸವ ಅರ್ಥಪೂರ್ಣವಾಗಿಸಿ: ಡಾ.ಪುಷ್ಪಾ ಅಮರನಾಥ್

KannadaprabhaNewsNetwork |  
Published : Feb 19, 2026, 01:15 AM IST
ಸಸ | Kannada Prabha

ಸಾರಾಂಶ

ಚಿಕ್ಕಮಗಳೂರುಜಿಲ್ಲೆಯಲ್ಲಿ ಫೆ.23ರಂದು ಆಯೋಜಿಸಲಾಗುತ್ತಿರುವ ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಉತ್ಸವವನ್ನು ಅತ್ಯಂತ ಅರ್ಥಪೂರ್ಣವಾಗಿ ಆಯೋಜಿಸುವಂತೆ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ (ಮೈಸೂರು ವಿಭಾಗ) ಡಾ.ಪುಷ್ಪಾ ಅಮರನಾಥ್ ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಉತ್ಸವ ಪೂರ್ವಭಾವಿ ಸಭೆ । ಗ್ಯಾರಂಟಿ ಉತ್ಸವ ಶಿಸ್ತು ಬದ್ಧವಾಗಿ ನಡೆಸಬೇಕು

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಜಿಲ್ಲೆಯಲ್ಲಿ ಫೆ.23ರಂದು ಆಯೋಜಿಸಲಾಗುತ್ತಿರುವ ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಉತ್ಸವವನ್ನು ಅತ್ಯಂತ ಅರ್ಥಪೂರ್ಣವಾಗಿ ಆಯೋಜಿಸುವಂತೆ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ (ಮೈಸೂರು ವಿಭಾಗ) ಡಾ.ಪುಷ್ಪಾ ಅಮರನಾಥ್ ತಿಳಿಸಿದರು.ಬುಧವಾರ ಜಿಪಂನಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಉತ್ಸವ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯದ ಅಭಿವೃದ್ಧಿಯಲ್ಲಿ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿ ಗ್ಯಾರಂಟಿ ಉತ್ಸವದ ಮೂಲಕ ಪ್ರತಿ ಮನೆಗಳಿಗೆ ಮತ್ತು ವ್ಯಕ್ತಿಗಳಿಗೆ ತಲುಪಬೇಕು. ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಉತ್ಸವ ಶಿಸ್ತು ಬದ್ಧವಾಗಿ ನಡೆಸಬೇಕು ಎಂದು ಸೂಚಿಸಿದರು.

ಗ್ಯಾರಂಟಿ ಉತ್ಸವದ ಯಶಸ್ಸಿಗೆ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಗಾಗಲೇ ಹಲವು ಸಮಿತಿಗಳನ್ನು ರಚಿಸಿ ಸುವ್ಯವಸ್ಥಿತ ಕಾರ್ಯಕ್ರಮ ಆಯೋಜನೆಗೆ ಆದೇಶಿಸಿದ್ದಾರೆ. ಇದು ಸರ್ಕಾರದ ಮಹತ್ವದ ಕಾರ್ಯಕ್ರಮ ಅಧಿಕಾರಿಗಳು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ತಮ್ಮ ಜವಾಬ್ದಾರಿಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು ಎಂದು ನಿರ್ದೇಶಿಸಿದರು.

ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು, ಅತಿಥಿಗಳಿಗೆ ಸರಿಯಾದ ಮಾಹಿತಿ ನೀಡಿ ಆಹ್ವಾನಿಸಿ ಯಾವುದೇ ಲೋಪಗಳು ಕಂಡು ಬಂದಲ್ಲಿ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆ. ಎಲ್ಲಾ ಇಲಾಖೆ ಅಧಿಕಾರಿಗಳು ಒಗ್ಗಟ್ಟಿನಿಂದ ಸಮನ್ವಯ ದೊಂದಿಗೆ ಪರಸ್ಪರ ಚರ್ಚಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಸಾರಿಗೆ, ಊಟದ ವ್ಯವಸ್ಥೆ ಸಮರ್ಪಕವಾಗಿ ಮಾಡ ಬೇಕು ಹಾಗೂ ಯಾವುದೇ ರೀತಿ ಲೋಪ ಕಂಡು ಬರಬಾರದು ಎಂದರು.

ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ಗ್ಯಾರಂಟಿ ಉತ್ಸವ ಯಶಸ್ಸಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷರು ಹಾಗೂ ಯೋಜನೆಗಳ ಮುಖ್ಯಸ್ಥರಿಗೆ ಜವಾಬ್ದಾರಿ ನೀಡಲಾಗಿದೆ. ಈಗಾಗಲೇ ಪೂರ್ವಭಾವಿ ಸಭೆಯಲ್ಲಿ ಸಿದ್ಧತೆ ಪರಿಶೀಲಿಸಲಾಗಿದೆ. ಯೋಜನೆಗಳ ಮಹತ್ವ ಹಾಗೂ ಲಾಭ ಸಾರ್ವಜನಿಕರಿಗೆ ಮನವರಿಕೆಯಾಗುವಂತೆ ಅರ್ಥಪೂರ್ಣವಾಗಿ ಜರುಗಿಸಲು ಕೈಜೋಡಿಸಬೇಕು ಎಂದು ತಿಳಿಸಿದರು.ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ ಮಾತನಾಡಿ, ಗ್ಯಾರಂಟಿ ಉತ್ಸವದ ಪ್ರತಿ ಹಂತವನ್ನು ಅನುಷ್ಠಾನಗೊಳಿಸಬೇಕು. ವಿವಿಧ ಇಲಾಖೆಗಳ ಸಮನ್ವಯ ಅತ್ಯಂತ ಅಗತ್ಯ. ಸರ್ಕಾರದ ಗ್ಯಾರಂಟಿ ಯೋಜನೆಗಳ ಸ್ಪಷ್ಟ ಮಾಹಿತಿ ಜನರಿಗೆ ತಲುಪುವಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮಕ್ಕೂ ಮುನ್ನ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿ ದಂತೆ ನಗರದ ಆಜಾದ್ ಪಾರ್ಕ್‌ನಿಂದ ಕುವೆಂಪು ಕಲಾಮಂದಿರದವರೆಗೂ ಜಾಥಾ ನಡೆಸಲಾಗುವುದು ಎಂದರು.ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಎನ್.ಮಂಜುನಾಥ್, ಕೃಷ್ಣೇಗೌಡ, ಜಿಪಂ ಮುಖ್ಯ ಯೋಜನಾಧಿಕಾರಿ ರಾಜ್‌ಗೋಪಾಲ್, ಉಪ ಕಾರ್ಯದರ್ಶಿ (ಆಡಳಿತ) ಎಚ್.ಎಸ್.ಸುಜಾತಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.ಫೋಟೋ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಫೆ.23 ರಂದು ಆಯೋಜಿಸಲಾಗುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳ ಉತ್ಸವದ ಕುರಿತು ಬುಧವಾರ ಪೂರ್ವಭಾವಿ ಸಭೆಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಜಿಪಂ ಸಿಇಒ ಕೀರ್ತನಾ ಮೊದಲಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿಂದೂ ಮನೆ ಮೇಲೆ ಕಲ್ಲು ತೂರಾಟ: ಆರು ಮಂದಿ ಬಂಧನ
ಸಿಕ್ಕಿಲ್‌ ವಸಂತಕುಮಾರಿ, ಸಂಜಿ ಪಿರಂತಂಪನ್‌ ಅವರಿಗೆ ಕಲೆಮನೆ ಪ್ರಶಸ್ತಿ