ಮಾಲಾಧಾರಣೆ ಅಭಿಯಾನ ಯಶಸ್ವಿಗೊಳಿಸಿ

KannadaprabhaNewsNetwork |  
Published : Jan 12, 2026, 03:15 AM IST
 | Kannada Prabha

ಸಾರಾಂಶ

ಮಾಲಾಧಾರಣೆ ಅಭಿಯಾನವು ಸಮಾಜದ ಎಲ್ಲ ವರ್ಗಗಳನ್ನೂ ಒಂದೆಡೆ ಸೇರಿಸುವ ಪವಿತ್ರ ಪ್ರಯತ್ನವಾಗಿದ್ದು, ಪ್ರತಿಯೊಬ್ಬರೂ ಇದರಲ್ಲಿ ಸಕ್ರಿಯವಾಗಿ ಭಾಗವಹಿಸಿ ಎಂದು ಮಾಲಾಧಾರಿ ಅಭಿಯಾನದ ಮುಖಂಡ ಡಾ.ಬಾಬುರಾಜೇಂದ್ರ ನಾಯಿಕ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಸಂತ ಶ್ರೀ ಸೇವಾಲಾಲ ಮಹಾರಾಜರ ಜೀವನ, ತ್ಯಾಗ ಹಾಗೂ ಅವರ ಆದರ್ಶಗಳನ್ನು ಅನುಸರಿಸುವ ಮೂಲಕ ಸಮಾಜದಲ್ಲಿ ಶಾಂತಿ, ಶಿಸ್ತು ಹಾಗೂ ಏಕತೆ ಬೆಳೆಸಬೇಕೆಂದು ಮಾಲಾಧಾರಿ ಅಭಿಯಾನದ ಮುಖಂಡ ಹಾಗೂ ಖ್ಯಾತ ಮಧುಮೇಹ ವೈದ್ಯರಾದ ಡಾ.ಬಾಬುರಾಜೇಂದ್ರ ನಾಯಿಕ ಕರೆ ನೀಡಿದರು.

ನಗರದಲ್ಲಿ ಸಂತ ಶ್ರೀ ಸೇವಾಲಾಲ ಮಹಾರಾಜರ ಜಯಂತಿ ಪ್ರಯುಕ್ತ ನಡೆದ ಮಾಲಾಧಾರಣೆ ಅಭಿಯಾನದ ಪೂರ್ವಭಾವಿ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು. ಮಾಲಾಧಾರಣೆಯ ಮಹತ್ವ, ಅದರ ಉದ್ದೇಶ ಹಾಗೂ ಸಮಾಜದಲ್ಲಿ ಅದರ ಪಾತ್ರದ ಕುರಿತು ವಿವರವಾಗಿ ತಿಳಿಸಿದರು. ಸತತವಾಗಿ ಪ್ರತಿವರ್ಷದಂತೆ ಮಾಲಾಧಾರಣೆ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ. ಈ ಬಾರಿಯೂ ಹೆಚ್ಚಿನ ಪ್ರಮಾಣದಲ್ಲಿ ಯುವಕರು ಈ ಮಾಲಾಧಾರಣೆ ಅಭಿಯಾನದಲ್ಲಿ ಭಾಗಿಯಾಗಬೇಕು ಎಂದರು. ಶ್ರೀ ಸಂಜು ಮಹಾರಾಜ ಆಹೇರಿ ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಮುಖಂಡರಾದ ಸುರೇಶ ಬಿಜಾಪುರ, ಚಂದು ಜಾಧವ, ಈಶ್ವರ ಜಾಧವ, ರಾಜು ರಾಠೋಡ, ಅಪ್ಪು ರಾಠೋಡ, ರವಿ ರಾಠೋಡ, ರಾಕೇಶ ರಜಪೂತ, ಗಣಪತಿ ಪೂಜಾರಿ, ಸಮಾಜದ ಪ್ರಮುಖರು, ಮುಖಂಡರು, ಯುವಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ