ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ

KannadaprabhaNewsNetwork |  
Published : Aug 21, 2026, 03:45 AM IST
20ಭಾರತ್ | Kannada Prabha

ಸಾರಾಂಶ

ಯುವಜನರಲ್ಲಿ ಸಾಮಾಜಿಕ ಹೊಣೆಗಾರಿಕೆ ಹಾಗೂ ಕೌಶಲ್ಯಗಳು ಸೇರಿದಂತೆ ಮತ್ತಿತರ ಚಟುವಟಿಕೆಗಳನ್ನು ಬೆಳೆಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.

ಉಡುಪಿ: ಯುವಜನರಲ್ಲಿ ಸಾಮಾಜಿಕ ಹೊಣೆಗಾರಿಕೆ ಹಾಗೂ ಕೌಶಲ್ಯಗಳು ಸೇರಿದಂತೆ ಮತ್ತಿತರ ಚಟುವಟಿಕೆಗಳನ್ನು ಬೆಳೆಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು.ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮೈ ಭಾರತ್ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಮೈ ಭಾರತ್’ ಯೋಜನೆಯು ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಕಾರ್ಯಕ್ರಮವಾಗಿದ್ದು, ಯುವಕರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವುದು, ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸುವುದು ಹಾಗೂ ‘ವಿಕಸಿತ ಭಾರತ 2047’ ಗುರಿ ಸಾಧನೆಯಲ್ಲಿ ಯುವಜನರನ್ನು ಪಾಲುದಾರರನ್ನಾಗಿ ರೂಪಿಸುವ ಉದ್ದೇಶ ಹೊಂದಿದೆ ಎಂದರು. ಜಿಲ್ಲೆಯ ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಯುವಜನ ಅಭಿವೃದ್ಧಿ ಕಾರ್ಯಕ್ರಮವಾದ ‘ಮೈ ಭಾರತ್’ ಅನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಎಲ್ಲ ಸದಸ್ಯ ಇಲಾಖೆಗಳು ಪರಸ್ಪರ ಸಹಕಾರ ಮತ್ತು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದರು. ಜಿಲ್ಲಾ ಯೂತ್ ಆಫೀಸರ್ ಉಲ್ಲಾಸ್ ಮಾಹಿತಿ ನೀಡಿ ಮಾತನಾಡುತ್ತಾ, 15ರಿಂದ 29 ವರ್ಷದೊಳಗಿನ ಯುವಜನರಿಗಾಗಿ ಮೈ ಭಾರತ್ ಸಂಸ್ಥೆಯನ್ನು ರಚಿಸಲಾಗಿದೆ. ಇದು ಡಿಜಿಟಲ್ ವೇದಿಕೆಯಾಗಿದ್ದು, ಯುವಜನರಲ್ಲಿ ನಾಯಕತ್ವ, ಸಾಮರ್ಥ್ಯ, ಕೌಶಲ್ಯ ಅಭಿವೃದ್ಧಿಗೊಳಿಸಲಾಗುವುದು. ಈ ಪೋರ್ಟಲ್ ಮೂಲಕ ಯುವಕರಿಗೆ ಗಡಿ ಗ್ರಾಮ ಕಾರ್ಯಕ್ರಮ ಶಿಬಿರ, ವಿಕಸಿತ್ ಭಾರತ್ ಯುವ ಸಂಸತ್ತು ಮತ್ತು ರಾಷ್ಟ್ರೀಯ

ಯುವ ಜನೋತ್ಸವದಂತಹ ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉತ್ತಮ ಅವಕಾಶಗಳು ಸಿಗಲಿವೆ. ಇದರೊಂದಿಗೆ, ಸ್ವಯಂಸೇವಕರಿಗೆ ವಿವಿಧ ಕ್ಷೇತ್ರಗಳಲ್ಲಿ ಪ್ರಾಯೋಗಿಕ ಕಲಿಕಾ ಕಾರ್ಯಕ್ರಮಗಳ ಪ್ರಯೋಜನಗಳೂ ಲಭ್ಯವಿವೆ ಎಂದರು.

ಗ್ರಾಮೀಣ ಮತ್ತು ನಗರ ಪ್ರದೇಶದ ಯುವಜನರಿಗಾಗಿ ಉದ್ಯೋಗಾವಕಾಶ ಹೆಚ್ಚಿಸುವ ಕೌಶಲ್ಯ ತರಬೇತಿ, ನಾಯಕತ್ವ ಶಿಬಿರಗಳು ಹಾಗೂ ಉದ್ಯಮಶೀಲತಾ ಕಾರ್ಯಾಗಾರ ಸಂಘಟಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ವಾರ್ತಾಧಿಕಾರಿ ಮಂಜುನಾಥ್ ಬಿ., ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ನಿಕೇತನಾ, ಮೈ ಭಾರತ ಜಿಲ್ಲಾ ಸಲಹಾ ಸಮಿತಿ ಹಾಗೂ ಜಿಲ್ಲಾ ಸಮನ್ವಯ ಸಮಿತಿಯ ಸದಸ್ಯರು, ಪ್ರಾಂಶುಪಾಲರು ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೆದ್ದಾರಿ ಇಕ್ಕೆಲ 75 ಮೀ.ನಲ್ಲಿ ವಾಣಿಜ್ಯ ಕಟ್ಟಡ ನಿರ್ಮಿಸುವಂತಿಲ್ಲ: ಕೋಟ
ಯಕ್ಷಗಾನಕ್ಕೆ ಗಡಿನಾಡು ಕನ್ನಡಿಗರ ಕೊಡುಗೆ ಅಪಾರ: ಡಾ. ತಲ್ಲೂರು