ಸೇವಾ ಪಾಕ್ಷಿಕ ಅಭಿಯಾನ ಯಶಸ್ವಿಗೊಳಿಸಿ

KannadaprabhaNewsNetwork |  
Published : Sep 17, 2025, 01:06 AM ISTUpdated : Sep 17, 2025, 01:07 AM IST
ಪೋಟೊ-೧೬ ಎಸ್.ಎಚ್.ಟಿ. ೧ಕೆ- ಶಾಸಕ ಡಾ. ಚಂದ್ರು ಕೆ. ಲಮಾಣಿ ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದರು. | Kannada Prabha

ಸಾರಾಂಶ

ಸೇವಾ ಪಾಕ್ಷಿಕ ಅಭಿಯಾನದ ಅಡಿಯಲ್ಲಿ ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಸ್ವಚ್ಛತಾ ಕಾರ್ಯಕ್ರಮ, ತಾಯಿ ಹೆಸರಿನಲ್ಲಿ ಒಂದು ಸಸಿ, ಚಿತ್ರಕಲಾ ಕಾರ್ಯಕ್ರಮ ದೇಶಾದ್ಯಂತ ಜರುಗಲಿವೆ

ಶಿರಹಟ್ಟಿ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಸೆ.೧೭ರಿಂದ ಅ.೨ರ ಗಾಂಧಿ ಜಯಂತಿ ವರೆಗೆ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಕರೆ ನೀಡಿದರು.

ಶಿರಹಟ್ಟಿ ಮಂಡಲದ ಆಶ್ರಯದಲ್ಲಿ ಪಕ್ಷದ ಕಾರ್ಯಾಲಯದಲ್ಲಿ ಜರುಗಿದ ಸೇವಾ ಪಾಕ್ಷಿಕ ಅಭಿಯಾನ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.

ಸೇವಾ ಪರಮೋಧರ್ಮ ಸೇವೆಯೇ ಪರಮಧರ್ಮ ಎಂಬ ಮನೋಭಾವನೆಯಲ್ಲಿ ಕಾರ್ಯಕ್ರಮ ಜರುಗಬೇಕು.

ಸೇವಾ ಪಾಕ್ಷಿಕ ಅಭಿಯಾನದ ಅಡಿಯಲ್ಲಿ ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಸ್ವಚ್ಛತಾ ಕಾರ್ಯಕ್ರಮ, ತಾಯಿ ಹೆಸರಿನಲ್ಲಿ ಒಂದು ಸಸಿ, ಚಿತ್ರಕಲಾ ಕಾರ್ಯಕ್ರಮ ದೇಶಾದ್ಯಂತ ಜರುಗಲಿವೆ. ಆದ್ದರಿಂದ ಕಾರ್ಯಕರ್ತರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.

ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ವೀಕ್ಷಣೆ ಮತ್ತು ಮಂಡಲವಾರು ಸಂಘಟನಾತ್ಮಕ ಕೆಲಸ ಕಾರ್ಯಗಳ ಪ್ರಗತಿ ಅಭಿನಂದನೀಯ. ಜಿಎಸ್‌ಸ್ಟಿ ಸಧಾರಣೆಯಿಂದ ದೇಶವಾಸಿಗಳಿಗೆ ಲಭಿಸುವ ಪ್ರಯೋಜನದ ಕುರಿತು ಪಕ್ಷದ ಕಾರ್ಯಕರ್ತರು ಜನ ಸಾಮಾನ್ಯರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಶಿರಹಟ್ಟಿ ಮಂಡಲದ ಅಧ್ಯಕ್ಷ ಸುನಿಲ್ ಮಹಾಂತಶೆಟ್ಟರ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಿಜೆಪಿ ಕೇವಲ ಚುನಾವಣೆ ಹಾಗೂ ರಾಜಕೀಯಕ್ಕೆ ಸೀಮಿತವಾಗಿಲ್ಲ. ಸಾಮಾಜಿಕ ಚಟುವಟಿಕೆಗಳಿಗೂ ಒತ್ತು ನೀಡುತ್ತಿದೆ. ಇವು ಸಾಕಾರಗೊಳ್ಳುವಂತೆ ಕಾರ್ಯಕರ್ತರು ಪ್ರಾಮಾಣಿಕವಾಗಿ ಮಾಡಬೇಕು ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅಷ್ಟೆ ಅಲ್ಲದೆ ದೀನ್ ದಯಾಳ ಉಪಾಧ್ಯಾಯ, ಲಾಲ್ ಬಹದ್ದೂರ ಶಾಸ್ತ್ರೀ ಮತ್ತು ಗಾಂಧಿ ಜಯಂತಿ ಇರುವುದರಿಂದ ಅಭಿಯಾನ ಹಮ್ಮಿಕೊಳ್ಳಲಾಗಿದೆ. ದೇಶಕ್ಕಾಗಿ ಶ್ರಮಿಸಿದ ಗಣ್ಯರ ಹೆಸರಿನಲ್ಲಿ ಅಭಿಯಾನ ನಡೆಯುತ್ತಿದ್ದು, ಇದರ ಯಶಸ್ಸಿಗೆ ಸಹಕರಿಸಬೇಕು. ಅಭಿಯಾನವು ರಾಜಕೀಯ ರಹಿತ ಕಾರ್ಯಕ್ರಮವಾಗಿದ್ದು, ಪಕ್ಷಾತೀತವಾಗಿ ಸಮುದಾಯಗಳನ್ನು ಭಾಗಿಯಾಗಿಸಿಕೊಂಡು ಕಾರ್ಯಕ್ರಮ ರೂಪಿಸಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ನಗರ ಘಟಕದ ಅಧ್ಯಕ್ಷ ನಾಗರಾಜ ಲಕ್ಕುಂಡಿ, ಜಿಪಂ ಮಾಜಿ ಸದಸ್ಯ ಶಿವಪ್ರಕಾಶ್ ಮಹಾಜನಶೆಟ್ಟರ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಕೀರೇಶ ರಟ್ಟಿಹಳ್ಳಿ, ಜಾನು ಲಮಾಣಿ, ಸಂದೀಪ್ ಕಪ್ಪತ್ತನವರ, ತಿಮ್ಮರಡ್ಡಿ ಮರಡ್ಡಿ, ನಂದಾ ಪಲ್ಲೆದ, ಮಹೇಶ್ ಬಡ್ನಿ, ಪ್ರವೀಣ್‌ಗೌಡ ಪಾಟೀಲ್, ಶಂಕರ ಮರಾಠೆ, ಅನಿಲ್ ಮುಳಗುಂದ ಬಸವರಾಜ್ ವಡವಿ, ಸಂತೋಷ್ ಓಬಾಜಿ, ಪರಶುರಾಮ್ ಡೊಂಕಬಳ್ಳಿ, ತಿಪ್ಪಣ್ಣ ಕೊಂಚಿಗೇರಿ, ಮೋಹನ್ ಗುತ್ತೆಮ್ಮನವರ, ಮಲ್ಲು ಕಬಾಡಿ ಸೇರದಂತೆ ಪಕ್ಷದ ಹಿರಿಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

PREV

Recommended Stories

ಗ್ರಾಮೀಣ ಭಜನಾ ಮಂಡಳಿಗಳಲ್ಲಿ ತತ್ವಪದಗಳು ಜೀವಂತ
ರಾಮದುರ್ಗ ಧನಲಕ್ಷ್ಮೀ ಶುಗರ್ ಚುನಾವಣೆ: ಸತತ 4ನೇ ಬಾರಿಗೆ ಯಾದವಾಡರ ನೇತೃತ್ವಕ್ಕೆ ಜಯ