ಜಿಲ್ಲೆಯ ಪ್ರವಾಸಿ ತಾಣಗಳನ್ನು ಜನಾಕರ್ಷಣೀಯ ಗೊಳಿಸಿ: ಡಿಸಿ ಡಾ. ಕೆ.ವಿದ್ಯಾಕುಮಾರಿ

KannadaprabhaNewsNetwork |  
Published : Jul 17, 2024, 12:48 AM IST
ಪ್ರವಾಸ16 | Kannada Prabha

ಸಾರಾಂಶ

ಉಡುಪಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಉಡುಪಿ ಹಾಗೂ ಜಸ್ಟ್ ರೋಲ್ ಫಿಲ್ಮ್ಸ್‌ ಸಹಯೋಗದೊಂದಿಗೆ ಜಿಲ್ಲೆಯ ಪ್ರವಾಸಿ ತಾಣಗಳನ್ನೊಳಗೊಂಡ, ಸುಮಧುರ ಹಾಡಿನೊಂದಿಗೆ ರಚಿಸಿರುವ ‘ಉಡುಪಿ ಆಂಥೆಮ್’ ಎಂಬ ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸುವ ವೀಡಿಯೋ ಚಿತ್ರಣ ಬಿಡುಗಡೆಗೊಂಡಿತು.

ಕನ್ನಡಪ್ರಭ ವಾರ್ತೆ ಮಣಿಪಾಲ

ಉಡುಪಿ ಜಿಲ್ಲೆಯ ಸುಂದರ ನಿಸರ್ಗ ಸೌಂದರ್ಯ, ಕಡಲ ತೀರ, ಧಾರ್ಮಿಕ ಕೇಂದ್ರಗಳು, ಸ್ಥಳೀಯ ಸಂಸ್ಕೃತಿ, ಸಾಂಪ್ರದಾಯ, ಜಾನಪದ ಕಲೆ, ಧಾರ್ಮಿಕ ಉತ್ಸವಗಳೂ ಸೇರಿದಂತೆ ಮತ್ತಿತರ ಬಗ್ಗೆ ದೇಶವಿದೇಶದ ಜನರಿಗೆ ಪ್ರಚಾರ ಪಡಿಸುವುದರೊಂದಿಗೆ ಪ್ರವಾಸಿಗರನ್ನು ಆಕರ್ಷಿಸಿ, ಪ್ರವಾಸೋದ್ಯಮವನ್ನು ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.

ಅವರು ಸೋಮವಾರ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಉಡುಪಿ ಹಾಗೂ ಜಸ್ಟ್ ರೋಲ್ ಫಿಲ್ಮ್ಸ್‌ ಸಹಯೋಗದೊಂದಿಗೆ ಜಿಲ್ಲೆಯ ಪ್ರವಾಸಿ ತಾಣಗಳನ್ನೊಳಗೊಂಡ, ಸುಮಧುರ ಹಾಡಿನೊಂದಿಗೆ ರಚಿಸಿರುವ ‘ಉಡುಪಿ ಆಂಥೆಮ್’ ಎಂಬ ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸುವ ವೀಡಿಯೋ ಚಿತ್ರಣವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಸ್ವಾಭಾವಿಕ ಪ್ರಕೃತಿ ಸೌಂದರ್ಯ, ಭೋರ್ಗರೆಯುವ ಕಡಲಕಿನಾರೆಗಳು, ಹಳ್ಳಕೊಳ್ಳ, ತೊರೆನದಿಗಳು, ಪಶ್ಚಿಮ ಘಟ್ಟದ ಶ್ರೇಣಿಗಳು ಹಾಗೂ ಧಾರ್ಮಿಕ ಪ್ರವಾಸಿ ಕೇಂದ್ರಗಳು ಒಳಗೊಂಡಂತೆ 48 ಪ್ರವಾಸಿ ತಾಣಗಳ ಜೊತೆಗೆ 32 ಪ್ರವಾಸಿ ತಾಣಗಳನ್ನು ಹೊಸದಾಗಿ ಗುರುತಿಸುವುದರೊಂದಿಗೆ ಬರುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಜಿಲ್ಲಾಡಳಿತ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದೆ. ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಆಧುನಿಕ ತಂತ್ರಜ್ಞಾನಗಳ ಬಳಕೆಯೊಂದಿಗೆ ಹೆಚ್ಚು ಜನರನ್ನು ತಲುಪಿಸುವ ಕೆಲಸವಾಗಬೇಕಿದೆ ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು., ವಾರ್ತಾಧಿಕಾರಿ ಮಂಜುನಾಥ್, ಜಸ್ಟ್ ರೋಲ್ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್‌ನ ನಿರ್ದೇಶಕ, ನಿರ್ಮಾಪಕರು ಹಾಗೂ ಸಾಹಿತ್ಯ ಸಂಯೋಜಕರು ಉಪಸ್ಥಿತರಿದ್ದರು.

5 ನಿಮಿಷಗಳ ವಿಡಿಯೋ ಚಿತ್ರಣದಲ್ಲಿ ‘ಅಂದದ ಚೆಂದದ ನೂತನ ಚೇತನ ಸುಂದರ ಸೊಗಸಿನ ಊರು, ರಮ್ಯ ನಿಸರ್ಗದ ತೋರಣ ಹೊತ್ತ ನಯನ ಮನೋಹರ ಬೀಡು, ಅರಬ್ಬಿ ಸಮುದ್ರದ ಅಲೆಗಳು ಬಾಗುವ ಕಡಲ ಕಿನಾರೆಯ ನಾಡು, ಪ್ರೀತಿ-ಅಕ್ಕರೆ ತುಂಬಿದ ನಿತ್ಯ ರಮಣೀಯ ಗೂಡು, ಉಡುಪಿ.......’ ಹಾಡಿನಲ್ಲಿ ದೇವಾಲಯಗಳು, ಭಾಷೆ,ಕಲೆ, ಸಂಸ್ಕೃತಿ, ಸಂಪ್ರದಾಯಗಳು, ಹಬ್ಬ ಜಾತ್ರೆಗಳ ವೈಭವ, ಯಕ್ಷಗಾನ, ಭೂತ ನೇಮ, ಕೋಲ ಆಚರಣೆ, ಕಂಬಳದ ವೈಭವ ಅದ್ಭುತವಾಗಿ ಮೂಡಿಬಂದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿಸಾನ್‌ ಸನ್ಮಾನ್‌ ಇ - ಕೆವೈಸಿಗೆ ಸರ್ವರ್‌ ಅಡ್ಡಿ!
ವರ್ಷಕ್ಕೆ ಲಕ್ಷ ಮಂದಿಗೆ ರೋಗ- 40 ಸಾವಿರ ಸಾವು : ಆತಂಕಕಾರಿ ಮಾಹಿತಿ ನೀಡಿದ ಡಾ.ಸಿಎನ್ ಮಂಜುನಾಥ್