ಯುವ ಜನಾಂಗಕ್ಕೆನಾಡು, ನುಡಿಯ ಬಗ್ಗೆ ಅರಿವು ಮೂಡಿಸಿ

KannadaprabhaNewsNetwork |  
Published : Nov 04, 2024, 12:21 AM IST
ಕಾರ್ಯಕ್ರಮದಲ್ಲಿ ಡಾ. ಎನ್.ಎನ್.ಗೊರವರ ಮಾತನಾಡಿದರು. | Kannada Prabha

ಸಾರಾಂಶ

ನಮ್ಮ ಕನ್ನಡ ಭಾಷೆ ಮತ್ತು ಸಾಹಿತ್ಯ ಭಾರತೀಯ ಲಿಖಿತ ಸಾಹಿತ್ಯ ಪರಂಪರೆಯಲ್ಲಿ ಅತ್ಯಂತ ಪ್ರಾಚೀನ

ಗದಗ: ಇತಿಹಾಸ ಅರಿಯದವರು ಇತಿಹಾಸ ಸೃಷ್ಟಿಸಲಾರರು, ಹಾಗೇನೆ ಕನ್ನಡ ನಾಡು, ನುಡಿ, ಸಾಹಿತ್ಯದ ಉಗಮ, ವಿಕಾಸ, ಮಹತ್ವ ಪ್ರಯೋಜನ ತಿಳಿಯದವರು ಕನ್ನಡ ನಾಡು, ನುಡಿಯ ಬಗ್ಗೆ ಹೆಮ್ಮೆ ಪಡಲಾರರು. ಇಂದಿನ ಯುವ ಜನಾಂಗಕ್ಕೆ ಕನ್ನಡ ನಾಡು, ನುಡಿಯ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಕೆಎಲ್ಇ ಸಂಸ್ಥೆಯ ಜೆ.ಟಿ. ಪಪೂ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ. ಎನ್.ಎನ್. ಗೊರವರ ಹೇಳಿದರು.

ಅವರು ನಗರದ ಜೆ.ಟಿ. ಮಹಾವಿದ್ಯಾಲಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮ ಕನ್ನಡ ಭಾಷೆ ಮತ್ತು ಸಾಹಿತ್ಯ ಭಾರತೀಯ ಲಿಖಿತ ಸಾಹಿತ್ಯ ಪರಂಪರೆಯಲ್ಲಿ ಅತ್ಯಂತ ಪ್ರಾಚೀನವಾದುದಾಗಿದೆ. ಅಷ್ಟೆ ಅಲ್ಲದೆ ಪ್ರಪಂಚದ 4500 ಭಾಷೆಗಳಲ್ಲಿ ಕೆಲವೇ ಕೆಲವು ಸಮರ್ಥ ಮತ್ತು ಶಕ್ತಿಶಾಲಿ ಭಾಷೆಗಳಲ್ಲಿ ಕನ್ನಡವು ಒಂದಾಗಿದೆ ಎಂದು ಅಮೆರಿಕಾದ ಡಾಲರ್ಸ್‌ನಲ್ಲಿ ಲಿಂಗ್ವೆಸ್ಟಿಕ್ ಸಂಸ್ಥೆ ಹೇಳಿದೆ. ಇದರಲ್ಲಿ ಇಂಗ್ಲಿಷ್ ಭಾಷೆ ಸ್ಥಾನ ಪಡೆದಿಲ್ಲ ಎನ್ನುವುದೇ ಸೋಜಿಗ ಎಂದರು.

ಪ್ರಾ.ಪಿ.ಜಿ.ಪಾಟೀಲ ಮಾತನಾಡಿ, ಕನ್ನಡಿಗರಾದ ನಾವು ನಮ್ಮ ಭಾಷೆಯ ಮೇಲೆ ಅಭಿಮಾನ ಮೈಗೂಡಿಸಿಕೊಳ್ಳುವ ಅನಿವಾರ್ಯತೆ ಇದೆ. ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಮೊದಲ ಸ್ಥಾನ ಸಿಗುವಂತಾಗಬೇಕು. ಇಂತಹ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಿ ಕನ್ನಡ ಅಭಿಮಾನ ಅರಳಿಸುವುದು ಅಗತ್ಯ ಎಂದು ತಿಳಿಸಿದರು.

ಈ ವೇಳೆ ಪಪೂ ಮಹಾವಿದ್ಯಾಲಯದ ಪ್ರಾ.ಪ್ರೊ. ಎಸ್.ಬಿ. ಹಾವೇರಿ ಮಾತನಾಡಿದರು. ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ವಿಶ್ವನಾಥ ಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೀಮಾ ಕೊಪ್ಪಳ, ಚಿತ್ರಲೇಖ ಹಿರೇಮಠ ಸೇರಿದಂತೆ ಬೋಧಕ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು. ಉಪನ್ಯಾಸಕರಾದ ಮಹಾಂತೇಶ ಮಡಿಕೇರಿ, ಶ್ರುತಿ ಮ್ಯಾಗೇರಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!