ವಿಶೇಷಚೇತನರಿಗೆ ನಿಗದಿಯಾದ ಅನುದಾನ ಬಳಕೆಯಾಗಲಿ: ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ದಾಸ್ ಸೂರ್ಯವಂಶಿ

KannadaprabhaNewsNetwork |  
Published : Nov 18, 2024, 12:01 AM IST
ಅಂಗವಿಕಲರ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತರಾದ ದಾಸ್ ಸೂರ್ಯವಂಶಿ ಅವರು ಹೇಳಿದರು.  | Kannada Prabha

ಸಾರಾಂಶ

ನಗರ, ಗ್ರಾಮೀಣ ಮಟ್ಟದಲ್ಲಿ ವಿವಿಧೋದ್ದೇಶ ಕಾರ್ಯಕರ್ತರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆಂದು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಹೇಳಿದರು. ಚಾಮರಾಜನಗರದಲ್ಲಿ ವಿಕಲಚೇತನರ ಪ್ರಗತಿ ಪರಿಶೀಲಿಸಿ ಮಾತನಾಡಿದರು.

ಪ್ರಗತಿ ಪರಿಶೀಲನೆ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ವಿಶೇಷಚೇತನರಿಗೆ ಒದಗಿಸುವ ಸೇವೆ ಸೌಲಭ್ಯಗಳಿಗೆ ಸಂಪೂರ್ಣವಾಗಿ ನೆರವಾಗಲು ನಗರ, ಗ್ರಾಮೀಣ ಮಟ್ಟದಲ್ಲಿ ವಿವಿಧೋದ್ದೇಶ ಕಾರ್ಯಕರ್ತರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆಂದು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಹೇಳಿದರು.

ನಗರದಲ್ಲಿ ಅಂಗವಿಕಲರ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ಅನುಷ್ಠಾನ ಮತ್ತು ವಿಕಲಚೇತನರ ಪ್ರಗತಿ ಪರಿಶೀಲಿಸಿ ಮಾತನಾಡಿದರು.

ವಿಶೇಷಚೇತನರಿಗೆ ಸರ್ಕಾರದ ಸವಲತ್ತು ಯೋಜನೆ ಕಾರ್ಯಕ್ರಮಗಳ ಪ್ರಯೋಜನ ಪಡೆಯಲು ನಗರ, ಗ್ರಾಮೀಣ ಭಾಗದಲ್ಲಿ ವಿಆರ್‌ಡಬ್ಲ್ಯೂ, ಎಂಆರ್‌ಡಬ್ಲ್ಯೂ, ಯುಆರ್‌ಡಬ್ಲ್ಯೂ ಕಾರ್ಯಕರ್ತರು ವಿಶೇಷವಾಗಿ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯವಾಗಿದೆ. ರಾಜ್ಯದಲ್ಲಿ ೭ ಸಾವಿರಕ್ಕೂ ಹೆಚ್ಚು ವಿವಿಧೋದ್ದೇಶ ಕಾರ್ಯಕರ್ತರು ವಿಶೇಷಚೇತನರಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಜನಸಂಖ್ಯೆಯಲ್ಲಿ ಶೇ. ೧೬ರಷ್ಟು ವಿಕಲಚೇತನರು ಇದ್ದಾರೆ. ೨೧ ಬಗೆಯ ವೈಕಲ್ಯತೆಗಳನ್ನು ಗುರುತಿಸಲಾಗಿದ್ದು, ಈ ಎಲ್ಲರಿಗೆ ಹೆಚ್ಚಿನ ಸೌಲಭ್ಯಗಳನ್ನು ತಲುಪಿಸುವಲ್ಲಿ ಕಾರ್ಯನಿರತರಾಗಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಪ್ರತಿ ಇಲಾಖೆಗಳಲ್ಲಿ ವಿಶೇಷಚೇತನರಿಗಾಗಿ ನಿಗದಿಪಡಿಸಲಾಗಿರುವ ಅನುದಾನ ಪೂರ್ಣ ಪ್ರಮಾಣದಲ್ಲಿ ವೆಚ್ಚವಾಗಬೇಕು. ಈ ದಿಸೆಯಲ್ಲಿ ಚಾಮರಾಜನಗರ ಜಿಲ್ಲೆ ಹೆಚ್ಚಿನ ಪ್ರಗತಿಯಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಸುಧಾರಣೆ ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ವಿಶೇಷಚೇತನರನ್ನು ನೋಡಿಕೊಳ್ಳುವ ಆರೈಕೆದಾರರಿಗೂ ಪ್ರೋತ್ಸಾಹಧನ ನೀಡಲಾಗುತ್ತಿದೆ. ಸಭೆಗಳ ಮೂಲಕ ವಿಕಲಚೇತನರ ಕುಂದುಕೊರತೆಗಳನ್ನು ಆಲಿಸಲಾಗುತ್ತದೆ. ಶಿಕ್ಷಣ, ಉದ್ಯೋಗ, ಆರೋಗ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಸೂಕ್ತ ಅವಕಾಶಗಳನ್ನು ನಿಯಮಾನುಸಾರ ನೀಡಲೇಬೇಕು. ವಿಶೇಷಚೇತನರ ಸರ್ವಾಂಗೀಣ ಅಭಿವೃದ್ಧಿ, ಅಂಗವಿಕಲರ ಅಧಿನಿಯಮ ಪ್ರಕಾರ ಎಲ್ಲವನ್ನು ಪಾಲನೆ ಮಾಡಲಾಗುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸಿ ಅಗತ್ಯ ನಿರ್ದೇಶನಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಷ್ಮೀ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ಅಂಗವಿಕಲರ ಕಲ್ಯಾಣಾಧಿಕಾರಿ ಮೀನಾಕ್ಷಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!