ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಸಧ್ಭಳಕೆ ಮಾಡಿಕೊಳ್ಳಿ

KannadaprabhaNewsNetwork |  
Published : Sep 17, 2024, 12:54 AM IST
ಫೋಟೋ 16 ಟಿಟಿಎಚ್ 03 : ತೀರ್ಥಹಳ್ಳಿಯ ಕುರುವಳ್ಳಿ ಬಡಾವಣೆಯಲ್ಲಿ  ನಡೆದ ವಿಶ್ವಕರ್ಮ ಸಮಾಜೋದ್ದಾರಕ ಸಂಘದ ಕಾರ್ಯಕ್ರಮವನ್ನು ಶಾಸಕ ಆರಗ ಜ್ಞಾನೇಂದ್ರ ಉದ್ಘಾಟಿಸಿದರು. | Kannada Prabha

ಸಾರಾಂಶ

ತೀರ್ಥಹಳ್ಳಿಯ ಕುರುವಳ್ಳಿ ಬಡಾವಣೆಯಲ್ಲಿ ನಡೆದ ವಿಶ್ವಕರ್ಮ ಸಮಾಜೋದ್ದಾರಕ ಸಂಘದ ಕಾರ್ಯಕ್ರಮವನ್ನು ಶಾಸಕ ಆರಗ ಜ್ಞಾನೇಂದ್ರ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ತೀರ್ಥಹಳ್ಳಿ

ವಿಶ್ವಕರ್ಮ ಸಮಾಜದ ಕೌಶಲ್ಯವನ್ನು ಗುರುತಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಲಕ್ಷಾಂತರ ಜನರಿಗೆ ಉದ್ಯೋಗ ಸೃಷ್ಟಿಸುವ ಸಲುವಾಗಿ ಜಾರಿಗೆ ತಂದಿರುವ ಪ್ರದಾನಮಂತ್ರಿ ವಿಶ್ವಕರ್ಮ ಯೋಜನೆಯ ಸೌಲಭ್ಯವನ್ನು ಸಮಾಜ ಬಾಂದವರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ತಾಲೂಕು ವಿಶ್ವಕರ್ಮ ಸಮಾಜೋದ್ದಾರಕ ಸಂಘದ ವತಿಯಿಂದ ಸೋಮವಾರ ಪಟ್ಟಣದ ಕುರುವಳ್ಳಿ ಬಡಾವಣೆಯಲ್ಲಿರುವ ಸಂಘದ ಸಭಾ ಭವನದಲ್ಲಿ ನಡೆದ ವಿಶ್ವಕರ್ಮ ಪೂಜಾ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ಧಾರ್ಮಿಕ ಶಿಲ್ಪಕಲಾ ಪರಂಪರೆಯನ್ನು ಅನಾದಿ ಕಾಲದಿಂದಲೂ ಮೆರೆಯುತ್ತಿರುವ ವಿಶ್ವಕರ್ಮ ಸಮಾಜ ಬಂಧುಗಳು ಹುಟ್ಟಿನಿಂದಲೇ ಪ್ರತಿಭಾವಂತರಾಗಿದ್ದಾರೆ. ಸಮಾಜದ ಮಕ್ಕಳು ಕೂಡ ಗ್ರಹಿಕೆಯಲ್ಲಿ ಬುದ್ದಿವಂತರಾಗಿದ್ದು ವಿಶೇಷ ಪ್ರತಿಭೆ ಹೊಂದಿದ್ದಾರೆ. ಮಕ್ಕಳ ಭವಿಷ್ಯ ರೂಪುಗೊಳ್ಳಲು ಗುಣಮಟ್ಟದ ಶಿಕ್ಷಣ ನೀಡುವ ಅಗತ್ಯವಿದೆ ಎಂದು ಹೇಳಿದರು.

ತಮ್ಮ ಸ್ವಪ್ರತಿಭೆಯಿಂದ ಶಿಲ್ಪಕಲಾ ಪ್ರಕಾರದ ಘನತೆ ಹೆಚ್ಚಿಸಿರುವ ವಿಶ್ವಕರ್ಮ ಸಮಾಜ ಬಂಧುಗಳು ಹುಟ್ಟಿನಿಂದಲೇ ಎಂಜಿನಿಯರ್ ಆಗಿದ್ದಾರೆ. ಈ ಸಮುದಾಯದ ಪ್ರತಿಭೆ ಗುರುತಿಸಿರುವ ಕೇಂದ್ರ ಸರ್ಕಾರ ಲಕ್ಷಾಂತರ ಜನರಿಗೆ ಉದ್ಯೋಗ ಸೃಷ್ಟಿಸುವ ಸಲುವಾಗಿ ವಿಶ್ವಕರ್ಮ ಸಮಾಜದ ಹೆಸರಿನಲ್ಲಿ ತಂದಿರುವ ಪ್ರದಾನಮಂತ್ರಿ ವಿಶ್ವಕರ್ಮ ಯೋಜನೆಯ ಸೌಲಭ್ಯವನ್ನು ಸಧ್ಬಳಕೆ ಮಾಡಿಕೊಳ್ಳುವಂತೆಯೂ ಕರೆ ನೀಡಿದರು.

ಈ ಸಂದರ್ಭದಲ್ಲಿ ವಿವಿಧ ತರಗತಿಗಳಲ್ಲಿ ಉತ್ತಮ ಅಂಕ ಪಡೆದ ಪ್ರತಿಭಾವಂತ ವಿಧ್ಯಾರ್ಥಿಗಳನ್ನು ಹಾಗೂ ಸಾಧಕರನ್ನು ಗೌರವಿಸಲಾಯಿತು.

ಕಟ್ಟೆಹಕ್ಕಲು ರತ್ನಾಕರ್ ಆಚಾರ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದು, ಸಮಾಜದ ಪುರೋಹಿತರಾದ ಸುಧೀರ್ ಆಚಾರ್ಯ, ರಾಘವೇಂದ್ರ ಆಚಾರ್ಯ, ಶಂಕರ ಆಚಾರ್ಯ ಹಾಗೂ ನಾಗಪ್ಪ ಆಚಾರ್ಯ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!