ಆರೋಗ್ಯಕ್ಕೆ ಯೋಗ ಬದುಕಿನ ದೈನಂದಿನ ಭಾಗವಾಗಲಿ: ಡಾ.ಆನಂದ.ಕೆ

KannadaprabhaNewsNetwork |  
Published : Jun 22, 2026, 03:00 AM IST
ಜಿಲ್ಲಾಡಳಿತದಿಂದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ | Kannada Prabha

ಸಾರಾಂಶ

ಆರೋಗ್ಯಯುತ ಜೀವನ ರೂಪಿಸಿಕೊಳ್ಳಲು ಯೋಗವನ್ನು ಪ್ರತಿಯೊಬ್ಬರೂ ತಮ್ಮ ಬದುಕಿನ ದೈನಂದಿನ ಭಾಗವಾಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಆರೋಗ್ಯಯುತ ಜೀವನ ರೂಪಿಸಿಕೊಳ್ಳಲು ಯೋಗವನ್ನು ಪ್ರತಿಯೊಬ್ಬರೂ ತಮ್ಮ ಬದುಕಿನ ದೈನಂದಿನ ಭಾಗವಾಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಕರೆ ನೀಡಿದರು.

​ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ಘೋಷವಾಕ್ಯದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಂದಿನ ಆಧುನಿಕ ಜೀವನಶೈಲಿಯಲ್ಲಿ ಎದುರಾಗುತ್ತಿರುವ ಒತ್ತಡ, ಆತಂಕ ಹಾಗೂ ಮಾನಸಿಕ ಸಮಸ್ಯೆಗಳಿಗೆ ಯೋಗ ಸಂಜೀವಿನಿಯಾಗಿದೆ. ಪ್ರತಿನಿತ್ಯ ನಿಯಮಿತವಾಗಿ ಯೋಗಾಭ್ಯಾಸ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನಿರೋಗಿ ಹಾಗೂ ಸುಂದರ ಜೀವನ ನಡೆಸಲು ಸಾಧ್ಯ ಎಂದು ಹೇಳಿದರು.

ಮಹಾನಗರ ಪಾಲಿಕೆ ಮೇಯರ್‌ ಸಿದ್ರಾಮಪ್ಪ ಕರಡಿ, ಜಿಲ್ಲಾ ಪಂಚಾಯತಿ ಸಿಇಒ ರಿಷಿ ಆನಂದ, ಎಸ್‌ಪಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿ ಡಾ.ವಿದ್ಯಾವತಿ ಅಥಣಿ, ವಾರ್ತಾಧಿಕಾರಿ ಅಮರೇಶ ದೊಡಮನಿ, ರಾಜಶೇಖರ ದೈವಾಡಿ, ಆರ್‌.ಎಸ್. ಪಾಟೀಲ, ಡಾ.ಮಹೇಶ ನಾವದಗಿ, ಸಂಜು ಕುಲಕರ್ಣಿ ಸೇರಿ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಪತಂಜಲಿ ಯೋಗ ಸಂಸ್ಥೆ, ವಿವಿಧ ಆಯುರ್ವೇದ, ಯುನಾನಿ ಕಾಲೇಜುಗಳ ಸಿಬ್ಬಂದಿ, ಎನ್‌ಸಿಸಿ ಕೆಡೆಟ್‌ಗಳು ಹಾಗೂ ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.

ವಿವಿಧ ಯೋಗಾಸನ ಪ್ರದರ್ಶನ

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂರಾರು ಯೋಗಾಸಕ್ತರಿಗೆ ಸುನಿತಾ ಬಿರಾದಾರ, ಜ್ಯೋತಿ, ಸಂಜಯ ಹಾಗೂ ಚಂದ್ರಶೇಖರ ಅವರ ಮಾರ್ಗದರ್ಶನದಲ್ಲಿ ಸುಮಾರು 45 ನಿಮಿಷಗಳ ಕಾಲ ವಿವಿಧ ಯೋಗಾಸನ ಹೇಳಿಕೊಡಲಾಯಿತು. ಆರಂಭದಲ್ಲಿ ಗಾಯಕ ವೀರೇಶ ವಾಲಿ ಹಾಗೂ ಕಿರಣ ತಂಡದವರಿಂದ ನಾಡಗೀತೆ ಪ್ರಸ್ತುತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೋಶಿ ಸ್ಮಾರಕ ಭವನ ಸಮಾಜಕ್ಕೆ ಅರ್ಪಣೆ
ನಿತ್ಯ ಯೋಗದಿಂದ ರೋಗರುಜಿನ ದೂರು