ಪಿಎಲ್‌ಡಿ ಬ್ಯಾಂಕ್‌ ನೂತನ ನಿರ್ದೇಶಕರಾಗಿ ಮಲಹಾಳ್ ಆಯ್ಕೆ

KannadaprabhaNewsNetwork |  
Published : Jun 14, 2024, 01:06 AM IST
ಇಲ್ಲಿನ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್ ಗೆ ನೂತನ ನಿರ್ದೇಶಕರಾಗಿ ಆಯ್ಕೆಯಾದ ಮಲಹಾಳ್ ಡಿ.ಸಿ.ಕುಮಾರ್ ಇವರನ್ನು ಅಭಿನಂಧಿಸಿದ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ | Kannada Prabha

ಸಾರಾಂಶ

ಚನ್ನಗಿರಿ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್‌ಗೆ ನೂತನ ನಿರ್ದೇಶಕರಾಗಿ ಆಯ್ಕೆಯಾದ ಮಲಹಾಳ್ ಡಿ.ಸಿ.ಕುಮಾರ್‌ರನ್ನು ಅಭಿನಂಧಿಸಿದ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ

ಕನ್ನಡಪ್ರಭ ವಾರ್ತೆ ಚನ್ನಗಿರಿ

ಇಲ್ಲಿನ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್‌ನ ಆಡಳಿತ ಮಂಡಳಿ ಸದಸ್ಯರಲ್ಲಿ ವಡ್ನಾಳ್ ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿದ್ದ ಅಂಜಿನಪ್ಪ ಇವರ ಸ್ಥಾನ ತೆರವು ಗೊಂಡಿದ್ದು, ಈ ಸದಸ್ಯ ಸ್ಥಾನಕ್ಕೆ ಗುರುವಾರ ಬ್ಯಾಂಕ್‌ ಆಡಳಿತ ಮಂಡಳಿ ಸರ್ವ ಸದಸ್ಯರ ಒಪ್ಪಿಗೆ ಮೇರೆಗೆ ಮಲಹಾಳ್ ಡಿ.ಸಿ.ಕುಮಾರ್ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ವಡ್ನಾಳ್ ಕ್ಷೇತ್ರವು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದು, ಈ ಹಿಂದೆ ಈ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅಂಜಿನಪ್ಪ ಇವರ ಸದಸ್ಯ ಸ್ಥಾನವು ಅನುರ್ಜಿತಗೊಂಡ ಕಾರಣ ಬುಧುವಾರ ಬ್ಯಾಂಕ್ ಸರ್ವ ಸದಸ್ಯರ ಸಭೆ ನಡೆದು ಡಿ.ಸಿ ಕುಮಾರ್‌ರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಯಿತು.

ಆಯ್ಕೆ ಪ್ರಕ್ರಿಯೆ ಮುಗಿದ ನಂತರ ನೂತನ ಬ್ಯಾಂಕ್ ನಿರ್ದೇಶಕ ಕುಮಾರ್ ಮಾಡಾಳು ವಿರೂಪಾಕ್ಷಪ್ಪ, ಮಾಡಾಳು ಮಲ್ಲಿಕಾರ್ಜುನ್‌ರನ್ನು ಅವರ ಗೃಹ ಕಚೇರಿಯಲ್ಲಿ ಅಭಿನಂದಿಸಿದರು. ಈ ವೇಳೆ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಮಾತನಾಡಿ, ಯಾವುದೇ ಆಧಿಕಾರವಾಗಲಿ ಅದು ಶಾಶ್ವತ ಅಲ್ಲ ಸಿಕ್ಕಂತಹ ಅವಕಾಶದಲ್ಲಿ ಜನತೆಗೆ, ರೈತರಿಗೆ ಅನುಕೂಲವಾಗುವಂತಹ ಕೆಲಸ ಮಾಡಿಕೊಟ್ಟಾಗ ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯಲು ಸಾಧ್ಯವಾಗಿದೆ ಎಂದು ಹೇಳುತ್ತಾ, ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು ಕಡಿಮೆ ಬಡ್ಡಿದರದಲ್ಲಿ ರೈತರಿಗೆ ಸಾಲಸೌಲಭ್ಯ ನೀಡಿ ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವದ್ದಾಗಿದೆ ಎಂದರು. ಬ್ಯಾಂಕ್ ನ ನೂತನ ನಿರ್ದೇಶಕರಾಗಿ ಆಯ್ಕೆಯಾದ ಡಿ.ಸಿ.ಕುಮಾರ್‌ರನ್ನು ಅಭಿನಂದಿಸಿದರು.

ಈ ವೇಳೆ ಬ್ಯಾಂಕ್‌ ನಿರ್ದೇಶಕ ಗಂಗಗೊಂಡನಹಳ್ಳಿ ಜಗದೀಶ್, ಕೋಗಲೂರು ಉಮೇಶ್, ಬಿಜೆಪಿ ಮುಖಂಡ ದಿಗ್ಗೇನಹಳ್ಳಿ ನಾಗರಾಜ್, ರಂಗಸ್ವಾಮಿ ಸೇರಿ ಮೊದಲಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ