ಮಲಪ್ರಭಾ ಬಲ, ಎಡದಂಡೆ ಅಭಿವೃದ್ಧಿಯಲ್ಲಿ ಅವ್ಯವಹಾರ

KannadaprabhaNewsNetwork |  
Published : Mar 16, 2026, 01:00 AM IST
ವಿರೇಶ ಸೊಬರದಮಠ | Kannada Prabha

ಸಾರಾಂಶ

ಕಾಮಗಾರಿಯ ಉದ್ದೇಶ ಕಟ್ಟಕಡೆಯ ರೈತರ ಜಮೀನಿಗೂ ನೀರು ಒದಗಿಸುವುದಾಗಿತ್ತು. ಆದರೆ, ರೈತರಿಗೆ ಸಮರ್ಪಕವಾಗಿ ನೀರು ಲಭಿಸುತ್ತಿಲ್ಲ. ಗುತ್ತಿಗೆದಾರರು ಸರಿಯಾಗಿ ಕಾಮಗಾರಿ ಮಾಡಿಲ್ಲ. ಅವೈಜ್ಞಾನಿಕ ಕಳಪೆ ಕಾಮಗಾರಿ, ಭ್ರಷ್ಟಾಚಾರ ಸ್ಪಷ್ಟವಾಗಿ ಗೋಚರಿಸುತ್ತಿದ್ದು, ರೈತರ ಜಮೀನುಗಳಿಗೆ ಹೋಗಲು ಸರಿಯಾದ ಸರ್ವೀಸ್ ರಸ್ತೆಗಳಿಲ್ಲ.

ಧಾರವಾಡ:

ಮಲಪ್ರಭಾ ಬಲದಂಡೆ ಹಾಗೂ ಎಡದಂಡೆ ಪುನರ್ ಅಭಿವೃದ್ಧಿ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಯುಗಾದಿ ಹಬ್ಬದ ಮರುದಿನ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಲಾಗುತ್ತಿದೆ ಎಂದು ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಮಗಾರಿಯ ಉದ್ದೇಶ ಕಟ್ಟಕಡೆಯ ರೈತರ ಜಮೀನಿಗೂ ನೀರು ಒದಗಿಸುವುದಾಗಿತ್ತು. ಆದರೆ, ರೈತರಿಗೆ ಸಮರ್ಪಕವಾಗಿ ನೀರು ಲಭಿಸುತ್ತಿಲ್ಲ. ಗುತ್ತಿಗೆದಾರರು ಸರಿಯಾಗಿ ಕಾಮಗಾರಿ ಮಾಡಿಲ್ಲ. ಅವೈಜ್ಞಾನಿಕ ಕಳಪೆ ಕಾಮಗಾರಿ, ಭ್ರಷ್ಟಾಚಾರ ಸ್ಪಷ್ಟವಾಗಿ ಗೋಚರಿಸುತ್ತಿದ್ದು, ರೈತರ ಜಮೀನುಗಳಿಗೆ ಹೋಗಲು ಸರಿಯಾದ ಸರ್ವೀಸ್ ರಸ್ತೆಗಳಿಲ್ಲ. ಈ ಕುರಿತು ಹಲವು ಬಾರಿ ಮನವಿ ನೀಡಿದರೂ ಅಧಿಕಾರಿಗಳಿಂದ ಸಕಾರಾತ್ಮಕ ಸ್ಪಂದನೆಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅವ್ಯವಹಾರ ಕುರಿತು ಲೋಕಾಯುಕ್ತರಿಗೆ ದಾಖಲೆ ನೀಡಿ ದೂರು ದಾಖಲಿಸಲಾಗಿತ್ತು. ಆದರೆ, ಸಮರ್ಪಕ ತನಿಖೆ ನಡೆದಿಲ್ಲ. ಜ. 29ರಂದು ಲೋಕಾಯುಕ್ತ ನ್ಯಾಯಮೂರ್ತಿಗಳನ್ನು ಭೇಟಿ ಮಾಡಿ ಅವರಿಗೆ ಅಗತ್ಯ ದಾಖಲೆ ನೀಡಲಾಗಿದೆ. ಅಲ್ಲದೇ ಬೆಣ್ಣೆಹಳ್ಳ ಕಾಮಗಾರಿ ಉದ್ಘಾಟನೆಗಾಗಿ ಶಿರಗುಪ್ಪಿಗೆ ಸಿಎಂ ಸಿದ್ದರಾಮಯ್ಯ ಬಂದಾಗ ಅವರಿಗೂ ದಾಖಲೆ ನೀಡಿ ತನಿಖೆಗೆ ಆಗ್ರಹಿಸಲಾಗಿದೆ ಎಂದು ತಿಳಿಸಿದರು.ಈ ಕುರಿತು ಹೋರಾಟ ನಡೆಸಿದ ಸಂದರ್ಭದಲ್ಲಿ ಅಧಿಕಾರಿಗಳು ನನ್ನ ಮೇಲೆ ಒತ್ತಡ ಹಾಕಿದ್ದಾರೆ. ಅಧಿಕಾರಿಗಳು ಹಾಗೂ ಸಿಬ್ಬಂದಿಯ ಫೋನ್ ಕರೆ, ಅಗತ್ಯ ಫೋಟೋಗಳನ್ನೊಳಗೊಂಡ ಸಿಡಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು. ಹೋರಾಟ ನಿಲ್ಲಿಸುವಂತೆ ಹಲವರು ಬೆದರಿಕೆ ಒಡ್ಡಿದ್ದಾರೆ. ಭ್ರಷ್ಟ ವ್ಯವಸ್ಥೆಯನ್ನು ಸಿಡಿ ರೂಪದಲ್ಲಿ ಜನರೆದುರು ಬಿಡುಗಡೆ ಮಾಡಲಾಗುವುದು ಎಂದು ಸೊಬರದಮಠ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿ.ಟಿ. ಬಡಿಗೇರ, ಮುತ್ತು ಪಾಟೀಲ, ಮಲ್ಲಣ್ಣ ಆಲೇಕಾರ, ಶಿವು ಬಡಿಗೇರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳಾ ಸಬಲೀಕರಣ ಅಗತ್ಯ
ರಂಜಾನ್‌ನಿಂದ ಶಾಂತಿ, ಸೋದರತ್ವದ ಸಂದೇಶ: ಜಿಲ್ಲಾಧಿಕಾರಿ ಶ್ರೀರೂಪಾ