ಕನ್ನಡಪ್ರಭ ವಾರ್ತೆ ಮಳವಳ್ಳಿ
ಕಾರ್ಯಪಾಲಕ ಅಭಿಯಂತರ ಟಿ. ಪುಟ್ಟಸ್ವಾಮಿ ಮಾತನಾಡಿ, ಸೆಸ್ಕ್ಂನಲ್ಲಿ ಕೆಲಸ ನಿರ್ವಹಿಸುತ್ತಿರುವ ಸಾವಿರಾರು ನೌಕರರು ಉದ್ಯೋಗ ಭದ್ರತೆ, ವೇತನ, ನಿವೃತ್ತಿ ಸೌಲಭ್ಯಗಳು ಹಾಗೂ ಸೇವಾ ನಿಯಮಗಳ ಬಗ್ಗೆ ಆತಂಕ ಹೊಂದಿದ್ದಾರೆ. ಖಾಸಗಿ ಸಂಸ್ಥೆಗಳು ಹೊಸ ತಂತ್ರಜ್ಞಾನವನ್ನು ಬಳಸಿಕೊಂಡು ಹೆಚ್ಚಿನ ಸಂಖ್ಯೆ ಸಿಬ್ಬಂದಿಯನ್ನು ಕಡಿತಗೊಳಿಸಿದರೇ ಹಲವು ವರ್ಷಗಳಿಂದ ದುಡಿದಿರುವ ಅಧಿಕಾರಿಗಳು ಮತ್ತು ನೌಕರರು ಮುಂದಿನ ಜೀವನಕ್ಕಾಗಿ ಏನು ಮಾಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಒಂದಾಗಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಸರ್ಕಾರಿ ಸಂಸ್ಥೆಯಾಗಿದೆ. ಸೆಸ್ಕ್ ಸಾಮಾಜಿಕ ಜವಾಬ್ದಾರಿಯಲ್ಲಿ ಕೆಲಸ ನಿರ್ವಹಿಸಲಾಗುತ್ತಿದೆ. ಖಾಸಗೀಕರಣಕ್ಕೆ ನೀಡಿದರೇ ವಿದ್ಯುತ್ ದರ ಏರಿಕೆ ಮಾಡಲಾಗುತ್ತಿದೆ. ಕೂಡಲೇ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸದೆ ಟಾಟಾ ಪವರ್ ಅರ್ಜಿಯನ್ನು ತಿರಸ್ಕರಿಸಿ ಸಾರ್ವಜನಿಕ ವಿದ್ಯುತ್ ಸೇವೆಯನ್ನು ಉಳಿಸಿ ಜನರ ಹಕ್ಕುಗಳನ್ನು ರಕ್ಷಿಸಬೇಕೆಂದು ಆಗ್ರಹಿಸಿದರು.ಎಇಇ ಪ್ರೇಮ್ಕುಮಾರ್ ಮಾತನಾಡಿ, ಸೆಸ್ಕ್ ಕಂಪನಿಯೂ ಹಲವು ವರ್ಷಗಳಿಂದ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿಕೊಂಡು ಬರಲಾಗುತ್ತಿದೆ. ಪೂರೈಕೆ ಹಿಂದೆ ಸಿಬ್ಬಂದಿ ಪರಿಶ್ರಮ ಸಾಕಷ್ಟಿದೆ. ಸರ್ಕಾರಿ ಸಂಸ್ಥೆಗಳು ಖಾಸಗೀಕರಣಗೊಂಡಾಗ ಸೇವೆಗಳ ದರ ಹೆಚ್ಚಳ, ಉದ್ಯೋಗ ಕಡಿತ ಉಂಟಾಗುತ್ತಿರುವುದು ಕಾಣಬಹುದು. ಕೂಡಲೇ ನಿರ್ಧಾರವನ್ನು ವಾಸಪ್ ಪಡೆಯಬೇಕೆಂದು ಆಗ್ರಹಿಸಿದರು.