ಕನ್ನಡಪ್ರಭ ವಾರ್ತೆ ಮಳವಳ್ಳಿ
14 ಸ್ಥಾನದಲ್ಲಿ ಹಲಗೂರು ಕ್ಷೇತ್ರದಿಂದ ಮಾಲಾಶ್ರೀ ಅವಿರೋಧ ಆಯ್ಕೆಯಾಗಿದ್ದರು. 13 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎ ತರಗತಿಯಲ್ಲಿ ಕಾಂಗ್ರೆಸ್ ಬೆಂಬಲಿತರು 6, ಬಿ. ತರಗತಿಗಳಿಗೆ ಎರಡು ಹಾಗೂ ಎನ್ಡಿಎ ಮೈತ್ರಿ ಬೆಂಬಲಿತರು ಬಿ. ತರಗತಿಯಲ್ಲಿ ಐದು ಸ್ಥಾನಗಳಲ್ಲಿ ಗೆಲುವು ಸಾಧಿಸಿದರು.
ಎ ತರಗತಿಯಲ್ಲಿ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರಾಗಿ ಕೆ.ಜೆ.ದೇವರಾಜು, ಕೆ.ಪಿ.ನರೇಂದ್ರ ಕೆ.ಎಂ.ಪುಟ್ಟು, ಎಂ.ಲಿಂಗರಾಜು, ಬಿ.ಪುಟ್ಟಬಸವಯ್ಯ, ವಿ.ಎನ್.ಮನು ಹಾಗೂ ಎನ್.ಸತೀಶ್ ಹಾಗೂ ಬಿ ತರಗತಿಯಲ್ಲಿ ಮಾಲಾಶ್ರೀ, ಎಂ ಮಾದಯ್ಯ(ಮಲ್ಲಣ್ಣ) ದಿಲೀಪ್ಕುಮಾರ್ (ವಿಶ್ವ) ಎನ್ಡಿಎ ಮೈತ್ರಿ ಬೆಂಬಲಿತ ಎಚ್.ವಿ.ಶಿವರುದ್ರಪ್ಪ, ಎನ್.ಶೋಭಾ, ರತ್ನಮ್ಮ, ರಾಮಣ್ಣ, ಶ್ರೀಧರ್ ಆಯ್ಕೆಯಾದರು.ಚುನಾವಣಾಧಿಕಾರಿ ತಹಸೀಲ್ದಾರ್ ಎಸ್.ವಿ.ಲೋಕೇಶ್ ಅವರು ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಸಿಪಿಐ ಎಂ.ರವಿಕುಮಾರ್ ನೇತೃತ್ವದಲ್ಲಿ ಸೂಕ್ತ ಭದ್ರತೆ ಕಲ್ಪಿಸಲಾಗಿತ್ತು. ಬಹುತೇಕ ಚುನಾವಣೆ ಶಾಂತಿಯುತವಾಗಿ ನಡೆಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು ಮಾತನಾಡಿ, ಕಾಂಗ್ರೆಸ್ ಬೆಂಬಲಿತ ಸ್ಪರ್ಧಿಗಳಿಗೆ ಮತ ಹಾಕಿದೆ ಎಲ್ಲಾ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇವೆ. ಚುನಾವಣೆಗಳು ಕಾನೂನಾತ್ಮಕವಾಗಿಯೇ ನಡೆಯುತ್ತಿವೆ. ಸಲ್ಲದ ಆರೋಪಗಳಿಗೆ ಮಾನ್ಯತೆ ಇಲ್ಲ ಎಂದರು.
ಜೆಡಿಎಸ್ ಯುವ ಘಟಕ ಅಧ್ಯಕ್ಷ ರವಿ ಕಂಸಾಗರ ಮಾತನಾಡಿ, ವಾಮಮಾರ್ಗದಲ್ಲಿ ಸಹಕಾರ ಸಂಘಗಳ ಅಧಿಕಾರವನ್ನು ಶಾಸಕರು ಹಿಡಿಯುತ್ತಿದ್ದಾರೆ. ಸಹಕಾರ ಸಂಘದಲ್ಲಿ ರಾಜಕೀಯ ಪ್ರವೇಶಿಸಿ ಪ್ರಾಮಾಣಿಕ ಸೇವೆ ಎನ್ನುವುದು ಇಲ್ಲದಾಗಿದೆ ಎಂದು ವಾಗ್ದಾಳಿ ನಡೆಸಿದರು. ನೂತನ ನಿರ್ದೇಶಕರನ್ನು ಬೆಂಬಲಿತ ಅಭಿನಂದಿಸಿ ಗೌರವಿಸಿದರು.