ಕನ್ನಡಪ್ರಭ ವಾರ್ತೆ ಗುರುಮಠಕಲ್
ಪಟ್ಟಣದಲ್ಲಿನ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಕುಳಿತಿರುವ ಖುರ್ಚಿಯಲ್ಲಿ ಖರ್ಗೆ ಕುಳಿತಿದ್ದಾರೆ. ಅವರು ಪ್ರಧಾನ ಮಂತ್ರಿ ಆಗುವುದರಿಂದ ಕಲ್ಯಾಣ ಕರ್ನಾಟಕ ಭಾಗ ಸಂಪೂರ್ಣ ಅಭಿವೃದ್ಧಿ ಆಗಲಿದೆ ಎಂದರು.
ಕೇಂದ್ರದ ಎನ್ಡಿಎ ಸರ್ಕಾರ ಎರಡು ವರ್ಷದ ಸರ್ಕಾರ. ಅಲ್ಪಬಲ ಮತ್ತು ಅಲ್ಪಾಯು ಹೊಂದಿದೆ. ಎನ್.ಡಿ.ಎ ಸರ್ಕಾರ ಕೇವಲ ಎರಡು ವರ್ಷ ಮಾತ್ರ ಇರುತ್ತದೆ ಎಂದು ಅವರು ಹೇಳಿದರು.ಅಭಿನಂದನಾ ಸಮಾರಂಭ: ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಜು.10ರಂದು ಬ್ಲಾಕ್ ಕಾಂಗ್ರೆಸ್ ವತಿಯಿಂದ ನೂತನ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಈ ಕುರಿತು ಮಂಗಳವಾರ ನಡೆದ ಪೂರ್ವಭಾವಿ ಸಭೆಯ ನಂತರ ಚಿಂಚನಸೂರು ತಿಳಿಸಿದರು.
ನೂತನ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯರಾಗಿದ್ದು, ಕ್ಷೇತ್ರ ಅಭಿವೃದ್ಧಿ ಪರ್ವ ಕಾಣಲಿದೆ. ಅವರನ್ನು ಗೆಲ್ಲಿಸಿದ ನೀವೆಲ್ಲರೂ ಧನ್ಯರು ಎಂದರು.
ಗುರುಮಠಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಚಪೆಟ್ಲಾ, ಸೈದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿರಂಜನರೆಡ್ಡಿ, ಕಬ್ಬಲಿಗ ಸಮಾಜದ ಪ್ರಭಾವಿ ಮುಖಂಡ ಹಾಗೂ ಕೋಲಿ, ಕಬ್ಬಲಿಗ ಸಮಾಜದ ಅಧ್ಯಕ್ಷ ದತ್ತು ಬಸವಕಲ್ಯಾಣ, ಮುಖಂಡರಾದ ಶ್ರೇಣಿಕುಮಾರ್ ಧೋಕಾ, ರವೀಂದ್ರ ರೆಡ್ಡಿ ಪಾಟೀಲ್, ರಘುನಾಥರೆಡ್ಡಿ ನಜರಾಪುರ, ಬಾಲಪ್ಪ ನೀರೆಟಿ, ಕಿಷ್ಟಪ್ಪ ಪುರುಷೋತ್ತಮ್, ಶ್ರೀನಿವಾಸ್ ಗುಮಡಾಲ್ ಇತರರಿದ್ದರು.