ಕನ್ನಡಪ್ರಭ ವಾರ್ತೆ ಅರಕಲಗೂಡು
ಕಟ್ಟೇಪುರದಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಏತನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಂಡಿಲ್ಲ ಹಾಗೂ ಯೋಜನೆಗೆ ಜಮೀನು ವಶಪಡಿಸಿಕೊಂಡ ರೈತರಿಗೆ ಪರಿಹಾರದ ಮೊತ್ತ ನೀಡಿಲ್ಲ ಎಂಬ ದೂರುಗಳಿfದ್ದ ಹಿನ್ನೆಲೆಯಲ್ಲಿ ಕಂದಾಯ, ನೀರಾವರಿ, ಅರಣ್ಯ, ಸೆಸ್ಕ್ ಸೇರಿದಂತೆ ಸಂಬಂಧಿಸಿದ ಇಲಾಖೆ ಮತ್ತು ರೈತರ ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ರೈತರಿಗೆ ಅಗತ್ಯ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಭೂಮಿ ದಾಖಲೆಗಳು ಮತ್ತು ಒಡೆತನದ ಸಮಸ್ಯೆಇರುವ ಕಡೆ ಸಮಸ್ಯೆ ಬಗೆಹರಿಸಿ ಪರಿಹಾರ ನೀಡಲು ಸೂಚಿಸಲಾಗಿದೆ. ರೈತರು ಮುಂದೆ ಬರದಿದ್ದರೆ ಖಾತೆ ದಾರನ ಹೆಸರಿನಲ್ಲಿ ಹಣವನ್ನು ಠೇವಣಿಮಾಡಿ ಸಮಸ್ಯೆ ಬಗೆಹರಿದ ಬಳಿಕ ನಿಜವಾದ ಫಲಾನುಭವಿಗೆ ಹಣಸಂದಾಯ ಮಾಡುವಂತೆಯೂ ಸೂಚಿಸಲಾಗಿದೆ. ಸಣ್ಣಪುಟ್ಟ ಸಮಸ್ಯೆ ಇದ್ದರೆ ರೈತರು ಕಾಮಗಾರಿಗೆ ತೊಂದರೆ ನೀಡಬಾರದು. ಅಧಿಕಾರಿಗಳನ್ನಾಗಲಿ, ತಮ್ಮನ್ನಾಗಲಿ ಸಂಪರ್ಕಿಸಿದರೆ ಸಮಸ್ಯೆ ಬಗೆಹರಿಸಿಕೊಡುವುದಾಗಿ ಹೇಳಿದರು.
120 ಕೋಟಿ ರು. ವೆಚ್ಚದ ಮೊದಲ ಹಂತದ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಸೆಪ್ಟೆಂಬರ್ನಲ್ಲಿ ಪ್ರಾಯೋಗಿಕವಾಗಿ ನೀರು ಹರಿಸುವುದಾಗಿ ಗುತ್ತಿಗೆದಾರರು ಹೇಳಿದ್ದಾರೆ. ಈ ಯೋಜನೆಯಿಂದ ಸೋಮವಾರಪೇಟೆ ತಾಲೂಕಿನ ಕೆಲಭಾಗ, ಮಲ್ಲಿಪಟ್ಟಣ, ದೊಡ್ಡಮಗ್ಗೆ ಮತ್ತು ಕೊಣನೂರು ಹೋಬಳಿಗಳ ರೈತರಿಗೆ ಅನುಕೂಲವಾಗಲಿದೆ ಎಂದರು.77 ಕೋಟಿ ರು. ವೆಚ್ಚದ ಎರಡನೆ ಹಂತದ ಯೋಜನೆಯಲ್ಲಿ 85 ಕಿ. ಮೀ. ಕೊಳವೆಗಳ ಮೂಲಕ ಕೆರೆಗಳಿಗೆ ನೀರು ಹರಿಸಲು ಕ್ರಮ ಕೈಗೊಂಡಿದ್ದು, ಈ ಯೋಜನೆಯಲ್ಲಿ ಕೊಣನೂರು ಮತ್ತು ಮಲ್ಲಿಪಟ್ಟಣ ಹೋಬಳಿ ವ್ಯಾಪ್ತಿಯ ಎಲ್ಲ ಕೆರೆಗಳಿಗೆ ನೀರು ಹರಿಯಲಿದೆ. ಕಣಿಯಾರು ಭಾಗದ ಕೆರೆಗಳಿಗೆ ನೀರು ಹರಿಸಲು 11.80 ಕೋಟಿ ರು. ವೆಚ್ಚದ ಯೋಜನೆ ರೂಪಿಸಲಾಗಿದೆ. ಈ ಎಲ್ಲ ಯೋಜನೆಗಳಿಂದ ತಾಲೂಕಿನ ಎಲ್ಲ ಭಾಗದ ಕೆರೆಕಟ್ಟೆಗಳು ತುಂಬಿ ಅಂತರ್ಜಲ ಹೆಚ್ಚಿ ರೈತರ ಕೊಳವೆಬಾವಿಗಳು ಮರುಪೂರ್ಣ ಗೊಳ್ಳುವುದರಿಂದ ರೈತರ ಬದುಕು ಹಸನಾಗಲಿದೆ ಎಂದರು.
ತಾಲೂಕಿನ ಮುಸವತ್ತೂರು ಬಳಿ ಬೃಹತ್ ನೀರಿನ ತೊಟ್ಟಿ ಸ್ಥಾಪಿಸಿ ಅಲ್ಲಿಂದ ಕೆರೆಗಳಿಗೆ ತುಂಬಿಸುವ ಯೋಜನೆ ಇದಾಗಿದೆ. ಹೇಮಾವತಿ ಹಿನ್ನೀರು ಬಳಿ ಜಾಕ್ವೆಲ್ನಿಂದ ನೀರಿನ ತೊಟ್ಟಿತನಕ 10ಕಿ.ಮೀ.ವರೆಗೆ ಮಾತ್ರ ರೇಸಿಂಗ್ ಮೇನ್ ಪೈಪ್ ಅಳವಡಿಸುವ ಕೆಲಸ ನಡೆಸಿದ್ದು ಇನ್ನೂ ಇನ್ನು 2 ಅಥವಾ ಮೂರು ಕಿ.ಮೀ. ಕೆಲಸ ಬಾಕಿ ಇದೆ. ಇಂದು ರೈತರು, ಅಧಿಕಾರಿಗಳೊಂದಿಗೆ ಮುಕ್ತವಾಗಿ ಸಮಾಲೋಚನೆ ನಡೆಸಿದ್ದು, ರೇಸಿಂಗ್ ಮೇನ್ ಪೈಪ್ ಅಳವಡಿಸುವ ಕೆಲಸ ಸುಗಮವಾಗಿ ನಡೆಯಲಿದೆ. ಮುಸವತ್ತೂರು ಬಳಿ ನೀರಿನ ತೊಟ್ಟಿ ನಿರ್ಮಾಣದ ಕಾಮಗಾರಿ ಸದ್ಯದಲ್ಲಿಯೇ ಆರಂಭಗೊಳ್ಳಲಿದೆ ಎಂದು ಹೇಳಿದರು.
ಸಭೆಯಲ್ಲಿ ತಹಸೀಲ್ದಾರ್ಗಳಾದ ಸೌಮ್ಯ, ಕೃಷ್ಣಮೂರ್ತಿ, ಅಧೀಕ್ಷಕ ಎಂಜಿನಿಯರ್ ರಘುಪತಿ, ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್, ಆರ್ಎಫ್ಒ ಯಶ್ಮಮಾಚಮ್ಮ, ನೀರಾವರಿ ಇಲಾಖೆ ಎಂಜಿನಿಯರ್, ರೈತರು, ಗುತ್ತಿಗೆದಾರ ಹಾಗೂ ಸ್ಥಳೀಯರು ಹಾಜರಿದ್ದರು.