ಮಲ್ಪೆ ಬಂದರು ಗೇಟ್ ಮರು ವಿನ್ಯಾಸಕ್ಕೆ ಯಶ್‌ಪಾಲ್ ಸುವರ್ಣ ಸೂಚನೆ

KannadaprabhaNewsNetwork |  
Published : Jan 12, 2026, 03:00 AM IST
ಶಾಸಕ ಯಶ್‌ಪಾಲ್ ಸುವರ್ಣ ಮಲ್ಪೆ ಬಂದರು ಗೇಟ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿದರು | Kannada Prabha

ಸಾರಾಂಶ

ಮಲ್ಪೆ ಮೀನುಗಾರಿಕಾ ಬಂದರಿನ ಪ್ರಸ್ತಾವಿತ ನೂತನ ಗೇಟ್ ಕಾಮಗಾರಿಯನ್ನು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಪೂರಕವಾಗಿ ಮರು ವಿನ್ಯಾಸ ಮಾಡಿ ತಕ್ಷಣ ಕಾಮಗಾರಿ ನಡೆಸುವಂತೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ನೀಡಿದರು.

ಮಲ್ಪೆ: ಇಲ್ಲಿನ ಮೀನುಗಾರಿಕಾ ಬಂದರಿನ ಪ್ರಸ್ತಾವಿತ ನೂತನ ಗೇಟ್ ಕಾಮಗಾರಿಯನ್ನು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಪೂರಕವಾಗಿ ಮರು ವಿನ್ಯಾಸ ಮಾಡಿ ತಕ್ಷಣ ಕಾಮಗಾರಿ ನಡೆಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಲ್ಪೆ ಬಂದರು ಗೇಟ್ ಹಾಗೂ ಹೆದ್ದಾರಿ ಕಾಮಗಾರಿ ಪರಿಶೀಲನೆಗೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಈಗಾಗಲೇ ಬಂದರು ಇಲಾಖೆಯ ಮೂಲಕ ಮಂಜೂರಾತಿಗೊಂಡಿರುವ 14.4 ಮೀಟರ್ ಅಗಲದ ಗೇಟ್ ಅವೈಜ್ಞಾನಿಕವಾಗಿದ್ದು, ರಾಹೆ ಕಾಮಗಾರಿ ಪೂರ್ಣಗೊಂಡಾಗ ಬಂದರು ಪ್ರವೇಶಕ್ಕೆ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹೆದ್ದಾರಿ ಕಾಮಗಾರಿಗೆ ಪೂರಕವಾಗಿ ಗೇಟ್ ಅಗಲವನ್ನು 24 ಮೀಟರ್ ಮರುವಿನ್ಯಾಸ ಮಾಡುವಂತೆ ಸಲಹೆ ನೀಡಿ ಈ ಬಗ್ಗೆ ಹೆಚ್ಚುವರಿ ಅನುದಾನ ಮಂಜೂರು ಮಾಡುವಂತೆ ಇಲಾಖೆ ಸಚಿವರಿಗೆ ಹಾಗೂ ಉನ್ನತ ಅಧಿಕಾರಿಗಳಿಗೆ ತಿಳಿಸುವುದಾಗಿ ಹೇಳಿದರು.

ರಾಷ್ಟ್ರೀಯ ಹೆದ್ದಾರಿ ಮಲ್ಪೆ ಬಂದರು ಸಂಪರ್ಕಿಸುವ ಭಾಗದಲ್ಲಿ ಕಿರುಸೇತುವೆ ನಿರ್ಮಾಣವನ್ನು ವಿಸ್ತರಿಸಿ, ಗೇಟ್ ಹಾಗೂ ಕಿರು ಸೇತುವೆ ಕಾಮಗಾರಿಯನ್ನು ಏಕಕಾಲದಲ್ಲಿ ಆರಂಭಿಸಿ ಮೀನುಗಾರಿಕಾ ಚಟುವಟಿಕೆಗೆ ಸಮಸ್ಯೆಯಾಗದಂತೆ ಬಂದರು ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆ ಪೂರಕವಾಗಿ ಕೆಲಸ ಮಾಡುವಂತೆ ಮತ್ತು ಬಂದರು ಇಲಾಖೆಯ ಅಧೀನದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಅಗತ್ಯವಿರುವ ಜಾಗವನ್ನು ತಕ್ಷಣ ತೆರವು ಮಾಡಿ ಕಾಮಗಾರಿ ಪೂರ್ಣಗೊಳಿಸಲು ಕ್ರಮವಹಿಸುವಂತೆ ಅಧಿಕಾರಿಗೆ ಸೂಚನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ