ಈಗಾಗಲೇ ಕರಾವಳಿ ಜಂಕ್ಷನ್ನಿಂದ ಆದಿ ಉಡುಪಿ ವರೆಗೆ ಕಟ್ಟಡಗಳನ್ನು ತೆರವು ಮಾಡಿ ಕಾಮಗಾರಿ ನಡೆಸಲು ಅವಕಾಶ ಮಾಡಿದ್ದು, ತಕ್ಷಣ ಕಾಮಗಾರಿ ಆರಂಭಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ನೀಡಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಮಲ್ಪೆ ಆದಿಉಡುಪಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯ ಬಗ್ಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕಂದಾಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿದರು.ಈಗಾಗಲೇ ಕರಾವಳಿ ಜಂಕ್ಷನ್ನಿಂದ ಆದಿ ಉಡುಪಿ ವರೆಗೆ ಕಟ್ಟಡಗಳನ್ನು ತೆರವು ಮಾಡಿ ಕಾಮಗಾರಿ ನಡೆಸಲು ಅವಕಾಶ ಮಾಡಿದ್ದು, ತಕ್ಷಣ ಕಾಮಗಾರಿ ಆರಂಭಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಗೆ ಸ್ಥಳ ನೀಡಿದವರಿಗೆ ಇರುವ ಪರಿಹಾರ ಮೊತ್ತವನ್ನು ತಕ್ಷಣ ಒದಗಿಸಲು ಹಾಗೂ ಈಗಾಗಲೇ ಕಾಮಗಾರಿಗಾಗಿ ತೆರವುಗೊಳಿಸಿರುವ ಸರ್ಕಾರಿ ಶಾಲಾ ಆವರಣ ಗೋಡೆಯನ್ನು ಮರು ನಿರ್ಮಿಸಿ ಕೊಡುವಂತೆ ಅಧಿಕಾರಿಗಳಿಗೆ ತಿಳಿಸಿದರು.ಮಳೆಗಾಲ ಸಂದರ್ಭದಲ್ಲಿ ಮೀನುಗಾರಿಕಾ ಚಟುವಟಿಕೆ ಹಾಗೂ ಪ್ರವಾಸಿಗರ ದಟ್ಟಣೆ ಕಡಿಮೆ ಇರುವ ಹಿನ್ನೆಲೆಯಲ್ಲಿ ಕಾಮಗಾರಿಗೆ ವೇಗ ನೀಡಬೇಕು ಎಂದರು.ಸಭೆಯಲ್ಲಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ತಹಸೀಲ್ದಾರ್ ಗುರುರಾಜ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಅಭಿಯಂತರ ಮಂಜುನಾಥ ನಾಯಕ್, ನಗರಸಭಾ ಸದಸ್ಯರಾದ ಸುಮಿತ್ರಾ ನಾಯಕ್, ಸುಂದರ ಕಲ್ಮಾಡಿ, ಶ್ರೀಶ ಕೊಡವೂರು, ಸವಿತಾ ಹರೀಶ್ ರಾಮ್, ಎಡ್ಲಿನ್ ಕರ್ಕಡ, ಮಲ್ಪೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.