ಕನ್ನಡಪ್ರಭ ವಾರ್ತೆ ಮಲ್ಪೆ
ಈ ಸಂದರ್ಭ ಮಾತನಾಡಿದ ಸಂಶೋಧನಾ ಕೇಂದ್ರದ ಮುಖ್ಯಸ್ಥೆ ಸುಜಿತಾ ಥಾಮಸ್, ವೇಲ್ ಶಾರ್ಕ್, ಗಿಟಾರ್ ಫಿಶ್, ಡಾಲ್ಫಿನ್ ಸೇರಿದಂತೆ ವಿನಾಶದಂಚಿನಲ್ಲಿರುವ 12 ಪ್ರಭೇದದ ಮೀನುಗಳನ್ನು ಹಿಡಿಯುವುದಕ್ಕೆ ನಿರ್ಬಂಧವಿದೆ. ಆದ್ದರಿಂದ ಇಂತಹ ಮೀನುಗಳು ಬಲೆಗೆ ಬಿದ್ದರೆ ಅವುಗಳನ್ನು ಮರಳಿ ಸಮುದ್ರಕ್ಕೆ ಬಿಡಬೇಕು. ಈ ಹಿನ್ನೆಲೆಯಲ್ಲಿ ಮಲ್ಪೆಯ ಮೀನುಗಾರರ ಕೆಲಸ ಶ್ಲಾಘನೀಯ ಮತ್ತು ಇತರಿಗೂ ಮಾದರಿಯಾಗಿದೆ ಎಂದರು.ಬಂದರು ಇಲಾಖೆಯ ಉಪ ನಿರ್ದೇಶಕಿ ಸವಿತಾ ಖಾದ್ರಿ, ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ವಿವೇಕ್ ಆರ್. ಆಳ್ವ, ಉಪ ನಿರ್ದೇಶಕಿ ಅಂಜನಾ ದೇವಿ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ, ಪರ್ಸಿನ್ ಮೀನುಗಾರರ ಸಂಘ ಅಧ್ಯಕ್ಷ ನಾಗರಾಜ ಸುವರ್ಣ, ಮಂಗಳೂರಿನ ಮೀನುಗಾರಿಕಾ ಕಾಲೇಜಿನ ಮೃದುಲಾ ರಾಜೇಶ್ ಉಪಸ್ಥಿತರಿದ್ದರು.
-------------ಪ್ಲಾಸ್ಟಿಕ್ನಿಂದ ಮೀನು, ಮೀನುಗಾರಿಕೆಗೆ ಅಪಾಯಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ತಾಂಡೇಲರ ಸಂಘ ಅಧ್ಯಕ್ಷ ರವಿರಾಜ್ ಸುವರ್ಣ ಮಾತನಾಡಿ, ಭಾರಿ ಪ್ರಮಾಣದಲ್ಲಿ ಪ್ಲ್ಯಾಸ್ಟಿಕ್ ತ್ಯಾಜ್ಯಗಳು ಸಮುದ್ರ ಸೇರುತ್ತಿದ್ದು, ಇದು ಮೀನು ಸಂತತಿಗೆ ಅಪಾಯಕಾರಿಯಾಗಿದೆ. ಇದರಿಂದಲೂ ಅನೇಕ ಮೀನುಗಳ ಸಂತತಿ ನಾಶವಾಗುತ್ತಿದೆ. ಇದು ನೇರವಾಗಿ ಮೀನುಗಾರಿಕೆ ವೃತ್ತಿಯ ಮೇಲೂ ಪರಿಣಾಮ ಬೀರುತ್ತಿದೆ. ಅಧಿಕಾರಿಗಳು ಪ್ಲಾಸ್ಟಿಕ್ ತ್ಯಾಜ್ಯ ಸಮುದ್ರ ಸೇರುವುದನ್ನು ತಡೆಯುವ ಬಗ್ಗೆಯೂ ಗಂಭೀರವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.