ಕನ್ನಡಪ್ರಭ ವಾರ್ತೆ ಸವದತ್ತಿ
ಆಗಿದ್ದೇನು?:
ಬುಧವಾರ ರಾತ್ರಿ 8.30ರ ಸುಮಾರಿಗೆ ಗುಡ್ಡದ ಪಕ್ಕದಲ್ಲಿ ಜೆಸಿಬಿ ಬಳಸಿ ಗರಸು ಅಗೆಯಲಾಗುತ್ತಿತ್ತು. ಈ ವೇಳೆ ಏಕಾಏಕಿ ಬೃಹತ್ ಬಂಡೆಗಳು ಗುಡ್ಡದ ಮೇಲಿಂದ ಉರುಳಿ ಬಿದ್ದಿವೆ. ವಿಷಯ ತಿಳಿದ ಕೂಡಲೇ ಸವದತ್ತಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿತ್ತು. ನಜ್ಜುಗುಜ್ಜಾದ ವಾಹನಗಳು ಸಿಕ್ಕವು. ಅರ್ಜುನ ಕೂಡ ಬಂಡೆಗಲ್ಲುಗಳ ಮಧ್ಯೆ ಸಿಲುಕಿದ್ದರು. ಕಾರ್ಯಾಚರಣೆಗೆ ಬೆಳಗ್ಗೆಯವರೆಗೂ ಕಾಯಬೇಕಾಯಿತು. ಬಳಿಕ ಅರ್ಜುನ ಮೃತದೇಹವನ್ನು ಹೊರಗೆ ತೆಗೆಯಲಾಗಿದೆ. ಘಟನೆ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸಂಭ್ರಮದಲ್ಲಿದ್ದ ಮನೆಯಲ್ಲಿ ಶೋಕಇದೇ ಶನಿವಾರ ಅರ್ಜುನ ಅವರ ಸಹೋದರನ ಇಬ್ಬರು ಮಕ್ಕಳ ಮದುವೆ ನಿಶ್ಚಯವಾಗಿತ್ತು. ಮದುವೆ ಹಿನ್ನೆಲೆ ಮನೆಯ ಮುಂದೆ ಪೆಂಡಾಲು ಕೂಡ ಹಾಕಲಾಗಿತ್ತು. ಮದುವೆ ಹಿನ್ನೆಲೆ ಪೆಂಡಾಲ್ ಕೆಳಗಿನ ನೆಲವನ್ನು ಸಮತಟ್ಟು ಮಾಡಲು ಅರ್ಜುನ ಅವರು ಗರಸು ತರಲು ಹೋಗಿದ್ದರು. ಮೊದಲು ಒಂದು ಟ್ರಿಪ್ ಟ್ರ್ಯಾಕ್ಟರಿನಲ್ಲಿ ತಂದು ಹಾಕಿದ್ದರು. ಮತ್ತೊಂದು ಟ್ರಿಪ್ ತರಲು ಹೋದಾಗ ಈ ಅವಘಡ ಸಂಭವಿಸಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ದುಃಖ ಮಡುಗಟ್ಟಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.