ಆಯತಪ್ಪಿ ಅರ್ಕಾವತಿ ನದಿಗೆ ಬಿದ್ದು ವ್ಯಕ್ತಿ ಸಾವು

KannadaprabhaNewsNetwork |  
Published : Oct 13, 2023, 12:15 AM IST
ಕನಕಪುರ ಸುದ್ದಿ 04 | Kannada Prabha

ಸಾರಾಂಶ

ಕನಕಪುರ: ವ್ಯಕ್ತಿಯೊಬ್ಬ ಆಯತಪ್ಪಿ ಅರ್ಕಾವತಿ ನದಿಗೆ ಬಿದ್ದು ಸಾವನ್ನಪ್ಪಿದ್ದಾರೆ. ತಾಲೂಕಿನ ಕಸಬಾ ಹೋಬಳಿಯ ತಿಗಳರ ಹೊಸಹಳ್ಳಿಯ ಮರಿಸ್ವಾಮಿ(30) ಮೃತಪಟ್ಟವರು.

ಕನಕಪುರ: ವ್ಯಕ್ತಿಯೊಬ್ಬ ಆಯತಪ್ಪಿ ಅರ್ಕಾವತಿ ನದಿಗೆ ಬಿದ್ದು ಸಾವನ್ನಪ್ಪಿದ್ದಾರೆ. ತಾಲೂಕಿನ ಕಸಬಾ ಹೋಬಳಿಯ ತಿಗಳರ ಹೊಸಹಳ್ಳಿಯ ಮರಿಸ್ವಾಮಿ(30) ಮೃತಪಟ್ಟವರು. ಮಂಗಳವಾರ ರಾತ್ರಿ ತಿಗಳರ ಹೊಸಹಳ್ಳಿ ಹಾಗೂ ಅಕ್ಕ-ಪಕ್ಕದ ಗ್ರಾಮಗಳಿಂದ ಕೆಲ ಯುವಕರ ಗುಂಪೊಂದು ಟಿ.ಹೊಸಹಳ್ಳಿ‌ಯಲ್ಲಿ ಜೂಜಾಟ ಆಡುತ್ತಿದ್ದ ವೇಳೆ ಗ್ರಾಮಾಂತರ ಪೊಲೀಸರು ದಾಳಿ ಮಾಡಿದಾಗ ಅಲ್ಲಿಂದ ತಪ್ಪಿಸಿಕೊಂಡು ಓಡುವ ವೇಳೆ ಮರಿಸ್ವಾಮಿ ಕಾಲು ಜಾರಿ ಅರ್ಕಾವತಿ ನದಿಯಲ್ಲಿ ಬಿದ್ದಿದ್ದಾರೆನ್ನಲಾಗಿದೆ. ಮರಿಸ್ವಾಮಿ ಕುಟುಂಬದವರು ಸ್ನೇಹಿತರನ್ನ ವಿಚಾರಿಸಿದಾಗ ಯಾವುದೇ ಮಾಹಿತಿ ದೊರೆತಿರಲಿಲ್ಲ, ಗುರುವಾರ ಬೆಳಗ್ಗೆ ಮರಿಸ್ವಾಮಿಯ ಮೃತ ದೇಹ ನದಿಯಲ್ಲಿ ತೇಲುತ್ತಿರುವುದನ್ನು ಕಂಡ ಗ್ರಾಮಸ್ಥರು ಗ್ರಾಮಾಂತರ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಶವ ಹೊರ ತೆಗೆದಿದ್ದಾರೆ. ಪೊಲೀಸರು ಬೆನ್ನತ್ತಿದ್ದರಿಂದ ನನ್ನ ಪತಿ ಆಯತಪ್ಪಿ ನದಿಯಲ್ಲಿ ಬಿದ್ದು ಸಾವನ್ನಪ್ಪಿದ್ದು ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ರಿಗೆ ಶಿಕ್ಷೆ ಆಗಬೇಕೆಂದು ಮೃತಳ ಪತ್ನಿ ಹಾಗೂ ಕುಟುಂಬಸ್ಥರು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ