ಕನ್ನಡಪ್ರಭ ವಾರ್ತೆ ಪಾಂಡವಪುರ
ಗ್ರಾಮದ ನಿವಾಸಿ ಶಿವಶಂಕರ್(45) ಇತ್ತೀಚೆಗೆ ಹೆದ್ದಾರಿಯ ಹಿರೇಮರಳಿ ಗೇಟ್ ಬಳಿ ಅಪಘಾತವಾಗಿ ಗಂಭೀರವಾಗಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶಿವಶಂಕರ್ ಮಂಗಳವಾರ ಮೃತಪಟ್ಟರು. ರಸ್ತೆಯಲ್ಲಿ ಸ್ಪೀಡ್ ಬ್ರೇಕರ್ ಹಾಕದ ಪರಿಣಾಮವಾಗಿ ಇಂತಹ ಅಪಘಾತಗಳು ಸಂಭವಿಸಿ ಸಾವು ನೋವು ಸಂಭವಿಸುತ್ತಿವೆ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಹಿರೇಮರಳಿ ಗ್ರಾಮಸ್ಥರು ಮೃತ ದೇಹವಿಟ್ಟು ಆ್ಯಂಬುಲೆನ್ಸ್ ಅನ್ನು ರಸ್ತೆ ಮಧ್ಯೆ ನಿಲ್ಲಿಸಿ ಪ್ರತಿಭಟನೆ ನಡೆಸಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಧಿಕ್ಕಾರ ಕೂಗಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಗ್ರಾಮಗಳ ಬಳಿ ಹೆದ್ದಾರಿಗೆ ಸ್ಪೀಡ್ ಬ್ರೇಕರ್ (ಹಂಪ್ಸ್)ಗಳನ್ನು ಹಾಕದ ಪರಿಣಾಮವಾಗಿ ಪದೇ ಪದೇ ಅಪಘಾತಗಳು ಸಂಭವಿಸಿ ಸಾವು ನೋವು ಆಗುತ್ತಿವೆ. ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವ ವರೆಗೂ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ಪಟ್ಟುಹಿಡಿದರು. ಪ್ರತಿಭಟನೆಯಿಂದ ರಸ್ತೆಯ ವಾಹನ ಸಂಚಾರದಲ್ಲಿ ಗಂಟೆಗೂ ಅಧಿಕ ಕಾಲ ವ್ಯತ್ಯಯ ಉಂಟಾಯಿತು.ವಿಷಯ ತಿಳಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೈಸೂರು ವಿಭಾಗದ ಎಇಇ ರೂಪ ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರು ಸಮಸ್ಯೆ ಆಲಿಸಿದರು. ಒಂದು ದಿನದಲ್ಲಿ ಸ್ಥಳ ಪರಿಶೀಲಿಸಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಭರವಸೆ ಕೊಟ್ಟ ನಂತರ ಪ್ರತಿಭಟನೆ ಹಿಂತೆಗೆದುಕೊಂಡು, ಶವವನ್ನು ಹಿರೇಮರಳಿ ಗ್ರಾಮಕ್ಕೆ ತೆಗೆದುಕೊಂಡು ಹೋಗಿ, ಗ್ರಾಮದ ಹೊರವಲಯದಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದರು.
ಸಾರಿಗೆ ಬಸ್ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ, ಮೂವರು ನ್ಯಾಯಾಂಗ ಬಂಧನಕ್ಕೆ
ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಯುವಕರ ಗುಂಪು ಸಾರಿಗೆ ಸಂಸ್ಥೆ ಬಸ್ ಚಾಲಕ ಮತ್ತು ನಿರ್ವಾಹಕನ ಮೇಲೆ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಕೊಪ್ಪ ಹೋಬಳಿ ತರಮನಕಟ್ಟೆ ಗ್ರಾಮದಲ್ಲಿ ಭಾನುವಾರ ಸಂಜೆ ಜರುಗಿದೆ.
ಘಟನೆ ಸಂಬಂಧ ಕೊಪ್ಪ ಠಾಣೆ ಪೊಲೀಸರು ತರಮನಕಟ್ಟೆ ಗ್ರಾಮದ ಮನೋಜ್, ಮೋಹನ್ ಹಾಗೂ ಸಂತೋಷ್ ಎಂಬುವವರನ್ನು ಬಂಧಿಸಿ ವಿಚಾರಣೆ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ವೇಳೆ ಸ್ಥಳದಲ್ಲಿದ್ದ ಯುವಕರ ಗುಂಪು ನಿರ್ವಾಹಕ ಮಹೇಶ್ಗೆ ಅವಾಜ್ ಹಾಕಿ ಮಾತಿನ ಚಕಮಕಿಗೆ ಇಳಿದಿದ್ದಾರೆ. ಈ ವೇಳೆ ಮಹೇಶ್ ರಕ್ಷಣೆಗೆ ಧಾವಿಸಿದ ಚಾಲಕ ವೈ.ಪಿ. ಸ್ವಾಮಿ ಹಾಗೂ ನಿರ್ವಾಹಕ ಮಹೇಶ್ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದೆ. 2 ಗುಂಪಿನ ಜಗಳ ಬಿಡಿಸಲು ಬಂದ ಕೆಲ ಪ್ರಯಾಣಿಕರ ಮೇಲೆ ಸಹ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.