ಮದುವೆಗೆ ವಧು ಸಿಗದಿದ್ದಕ್ಕೆ ಕಂಬಹತ್ತಿದ್ದವ ಕರೆಂಟ್‌ ಹೊಡೆದು ಸಾವು

KannadaprabhaNewsNetwork |  
Published : Mar 19, 2025, 12:35 AM IST
ಮದುವೆಗೆ ವಧು ಸಿಗಲಿಲ್ಲ ಎಂದು ಹೈ ಟೆನ್ಷನ್ ತಂತಿ ಮುಟ್ಟಿ ಯುವಕ ಆತ್ಮಹತ್ಯೆ | Kannada Prabha

ಸಾರಾಂಶ

ಮದುವೆಗೆ ವಧು ಸಿಗಲಿಲ್ಲ ಎಂದು ಮನನೊಂದು ಹೈಟೆನ್ಷನ್ ತಂತಿ ಮುಟ್ಟಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಟಿಸಿ ಹುಂಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ

ಮದುವೆಗೆ ವಧು ಸಿಗಲಿಲ್ಲ ಎಂದು ಮನನೊಂದು ಹೈಟೆನ್ಷನ್ ತಂತಿ ಮುಟ್ಟಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಟಿಸಿ ಹುಂಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಮಧುವನಹಳ್ಳಿ ಗ್ರಾಮದ ಮಸಣಶೆಟ್ಟಿ (27) ಆತ್ಮಹತ್ಯೆಗೆ ಶರಣಾದ ಯುವಕ. ಈತ ಮದುವೆಗೆ ಹುಡುಗಿ ಸಿಗುತ್ತಿಲ್ಲ ಎಂದು ಖಿನ್ನನಾಗಿದ್ದ. ಮದ್ಯದ ಗೀಳಿಗೆ ದಾಸನಾಗಿದ್ದ ಈತ ಕೆಲ ತಿಂಗಳ ಹಿಂದೆ ಮದ್ಯೆ ಸೇವನೆ ಬಿಟ್ಟಿದ್ದ. ಬಳಿಕ, ಈತನಿಗೆ ಹುಡುಗಿ ಹುಡುಕಲಾಗುತ್ತಿತ್ತು. ಈ ಮಧ್ಯೆ, ಮನೆ ಚಿಕ್ಕದು, ಜಮೀನಿಲ್ಲ ಎಂಬ ಕಾರಣಕ್ಕೆ 2 ಸಂಬಂಧ ಮುರಿದು ಬಿದ್ದವು. ಇದರಿಂದ ಆತ ಮತ್ತಷ್ಟು ವಿಚಲಿತನಾಗಿದ್ದ. ಮಂಗಳವಾರ ಬೆಳಗ್ಗೆ ಆತ ಹೈಟೆನ್ಷನ್ ಕಂಬ ಏರಿರುವ ವಿಚಾರವನ್ನು ಸ್ಥಳೀಯರು ಆತನ ತಾಯಿಗೆ ತಿಳಿಸಿದರು. ತಾಯಿ ಕಣ್ಣೀರು ಹಾಕುತ್ತಾ ಕೆಳಗಿಳಿ ಎಂದು ಪರಿಪರಿಯಾಗಿ ಕೂಗಿದರು. ಆದರೆ, ಮಾತು ಕೇಳದ ಆತ ಕೈ ಮೇಲೆತ್ತಿ ತಂತಿ ಮುಟ್ಟಿ, ಕೊನೆಯುಸಿರೆಳೆದ. ಮಗನ ಶವ ನೇತಾಡುತ್ತಿದ್ದುದ್ದನ್ನು ನೋಡಿ ತಾಯಿ ಅಲ್ಲಿಯೇ ನಿತ್ರಾಣರಾಗಿ ಕುಸಿದು ಬಿದ್ದರು. ಪೊಲೀಸರು ಆಗಮಿಸಿ, ಕಂಬದಿಂದ ನೇತಾಡುತ್ತಿದ್ದ ಯುವಕನ ಶವ ಇಳಿಸಿ, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!