ಕೊಪ್ಪಳ ನಗರದ ಬಸ್ ನಿಲ್ದಾಣದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ
ಸಸಿ, ಮರಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಹೇಳಿದರು.
ನಗರದ ಕಲ್ಯಾಣ ಕರ್ನಾಟಕ ಬಸ್ ಸಾರಿಗೆ ನಿಲ್ದಾಣದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಸಮೃದ್ಧ ಪರಿಸರ, ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿರುತ್ತದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗರಿವಿಲ್ಲದಂತೆ ಪರಿಸರ ಹಾಳು ಮಾಡುತ್ತಿದ್ದಾನೆ. ಪರಿಸರದ ಬಗ್ಗೆ ಪ್ರತಿ ಮನುಷ್ಯನಲ್ಲೂ ಜಾಗೃತಿ ಮೂಡಿಸುವುದು ಮತ್ತು ಪರಿಸರ ಹಾಳು ಮಾಡುವುದನ್ನು ತಡೆಯುವುದು ಇದರ ಉದ್ದೇಶವಾಗಿದೆ. ನಮ್ಮ ಪರಿಸರದ ಸಂರಕ್ಷಣೆಗಾಗಿ ನಾವೆಲ್ಲರೂ ಜಾಗೃತಿ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸುವುದು ಅವಶ್ಯವಿದೆ. ನಮ್ಮ ದೈನಂದಿನ ಜೀವನದಲ್ಲಿ ಕೆಲವೊಂದು ಪರಿಸರಕ್ಕೆ ಸಂಬಂಧಿಸಿದಂತೆ ಬದಲಾವಣೆ ಅನುಸರಿಸಿದಲ್ಲಿ ಭೂಮಿಯ ಉಳಿವಿಗೆ ಸಹಾಯಕವಾಗುತ್ತದೆ ಎಂದರು.ಸಪ್ತಪರಿಣಿ, ನೆರಳೆ, ಶೆಲ್ಟೋಪಾರ್ಮ, ಬೇವು ಸಸಿಗಳನ್ನು ನೆಟ್ಟರು ಸೇರಿದಂತೆ ಒಟ್ಟು 10 ಸಸಿಗಳನ್ನು ನೆಡಲಾಯಿತು.