ಕನ್ನಡಪ್ರಭ ವಾರ್ತೆ ಸೊರಬ
ತಾಲೂಕಿನ ಜಡೆ ಸಮೀಪದ ಬಂಕಸಾಣ ಗ್ರಾಮದ ವರದಾ ಉತ್ತರವಾಹಿನಿ ಕ್ಷೇತ್ರದ ಸಮಾಧಾನದಲ್ಲಿ ಆಯೋಜಿಸಿದ್ದ ಮಾಸಿಕ ಶಿವಾನುಭವ ಹಾಗೂ ಅರಿವಿನೆಡೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಎಲ್ಲರಿಗೂ ಎರಡೆರಡು ಕೈ, ಎರಡೆರಡು ಕಾಲ ಎರಡೆರಡು ಕಣ್ಣುಗಳೇ ಇರುತ್ತವೆ. ಕೆಲವೊಬ್ಬರಿಗೆ ಇದೆ ಕೈಗಳಿಂದ ಶಿಲ್ಪವನ್ನು ಕೆತ್ತಬೇಕು ಎನ್ನಿಸಿದರೆ ಮತ್ತೆ ಕೆಲವೊಬ್ಬರಿಗೆ ಅದೇ ಕಲ್ಲನ್ನು ಜಲ್ಲಿ ಮಾಡಬೇಕು ಎನ್ನಿಸುತ್ತದೆ. ಆದ್ದರಿಂದಲೇ ಒಂದು ಕಲ್ಲಿನ ಗುಡ್ಡ ಹಂಪಿಯಾಯಿತು. ಮತ್ತೊಂದು ಕ್ರಷರ್ ಆಯಿತು.ನಿಸರ್ಗ ಬಹು ಅಪರೂಪವಾದದು. ಬಚ್ಚಲ ರೊಚ್ಚಿಯ ನೀರು ಹೋಗುವಲ್ಲಿ ಒಂದು ತೆಂಗಿನ ಸಸಿ ನೆಟ್ಟರೆ ಅದು ರುಚಿ ರುಚಿಯಾದ ಎಳೆನೀರನ್ನು ಕೊಡುತ್ತದೆ. ಸ್ವಾದಿಷ್ಟಕರವಾದ ತರಕಾರಿಗಳನ್ನು ನೀಡುತ್ತದೆ. ಇದು ನಿಸರ್ಗದ ನಿಯಮ. ಆದರೆ ಮನುಷ್ಯ ಈ ನಿಸರ್ಗವನ್ನು ಬಳಸಿ ಅದನ್ನು ವಿರೂಪಗೊಳಿಸುತ್ತಾನೆ ಎಂದರು.
ಕಾರ್ಯಕ್ರಮದಲ್ಲಿ ಮಾತೋಶ್ರೀ ಸುಶೀಲಮ್ಮ ಚನ್ನಬಸವಯ್ಯನವರ ಶ್ರದ್ಧಾಂಜಲಿ ನಡೆಯಿತು. ನಿಶ್ಚಿಂತ ಪ್ರಾರ್ಥಿಸಿದರು. ಸನ್ಮತಿ ನಿರೂಪಿಸಿದರು. ಶಿವಕುಮಾರಸ್ವಾಮಿ, ರೇಣುಕಯ್ಯಸ್ವಾಮಿ, ಬಂಗಾರಸ್ವಾಮಿ, ತಾರಕೇಶ್ವರ, ಸಿದ್ಧಲಿಂಗಯ್ಯ, ಪಂಚಾಕ್ಷರಿ, ಗಂಗಣ್ಣ, ಹೊಳೆಬಸಯ್ಯನವರು, ಮಹೇಶಯ್ಯ, ಮಧುಮತಿ ವರ್ಷಭೇಂದ್ರ ಗೌಡ್ರು ಹೇಮಲತಾ, ಸುಮಂಗಳಾ, ಶಿವಲೀಲಾ, ಇರಾಜಮ್ಮ ಮುಂತಾದವರು ಹಾಜರಿದ್ದರು.