ಸ್ನೇಹಿತರಿಂದ ಚಾಕು ಇರಿದು ವ್ಯಕ್ತಿ ಕೊಲೆ, ಬೈಕ್ ನಲ್ಲಿ ಶವ ಸಾಗಿಸುವ ವೇಳೆ ಸಿಕ್ಕಿಬಿದ್ದ ಆರೋಪಿಗಳು

KannadaprabhaNewsNetwork |  
Published : Jun 18, 2026, 01:30 AM IST
17ಕೆಎಂಎನ್ ಡಿ11 | Kannada Prabha

ಸಾರಾಂಶ

ಸ್ನೇಹಿತನ ಪತ್ನಿಗೆ ಮೆಸೇಜ್ ಮಾಡುತ್ತಿದ್ದ ಆರೋಪದ ಮೇಲೆ ಮೂವರು ಸೇರಿ ಮಹೇಶ್ ದೇಹಕ್ಕೆ ಚಾಕು ಇರಿದು, ದೊಣ್ಣೆಯಿಂದ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ, ಡಿವೈಎಸ್‌ಪಿ ಯಶವಂತ ಕುಮಾರ್, ಸರ್ಕಲ್‌ ಇನ್ಸ್ ಪೆಕ್ಟರ್ ಬಿ.ಎಸ್ ಶ್ರೀಧರ್, ಸಬ್‌ ಇನ್ಸ್ ಪೆಕ್ಟರ್ ರವಿಕುಮಾರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಿರುಗಾವಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮಳವಳ್ಳಿ: ವ್ಯಕ್ತಿಯನ್ನು ಸ್ನೇಹಿತರೇ ಚಾಕುವಿನಿಂದ ಇರಿದು ಕೊಲೆ ಮಾಡಿದ ನಂತರ ಬೈಕ್‌ನಲ್ಲಿ ಶವ ಸಾಗಿಸುವ ವೇಳೆ ಪಟ್ಟಣದಲ್ಲಿ ಆರೋಪಿಗಳು ಸಾರ್ವಜನಿಕರಿಗೆ ಸಿಕ್ಕಿ ಬಿದ್ದ ಪರಿಣಾಮ ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ತಾಲೂಕಿನ ಭೀಮನಹಳ್ಳಿ ಗ್ರಾಮದ ಮಹೇಶ್(34) ಮೃತ ದುರ್ದೈವಿ. ರಾಮನಾಥಮೋಳೆ ಗ್ರಾಮದ ರಾಜೇಶ್ ಬಂಧಿತ ಆರೋಪಿ. ಮಂಗಳವಾರ ರಾತ್ರಿ ಭೀಮನಹಳ್ಳಿಯ ಅಕ್ಕನ ಮನೆಯಲ್ಲಿ ಊಟ ಮಾಡುತ್ತಿದ್ದ ಮಹೇಶ್‌ನನ್ನು ರಾಜೇಶ್ ಕರೆ ಮಾಡಿ ಕರೆದುಕೊಂಡು ಹೋಗಿ ಇತರೆ ಸ್ನೇಹಿತರ ಜೊತೆಗೂಡಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆಂದು ಮೃತ ಸಹೋದರಿ ರತ್ನಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಭೀಮನಹಳ್ಳಿಯಿಂದ ಸುಲ್ತಾನ್ ರಸ್ತೆ ಮಾರ್ಗವಾಗಿ ಕೊಳ್ಳೇಗಾಲದ ಕಡೆಗೆ ಹೋಗುತ್ತಿದ್ದಾಗ ಪಟ್ಟಣದ ಸೆಸ್ಕಾಂ ಕಚೇರಿ ಮುಂದೆ ಪೆಟ್ರೋಲ್ ತೀರಿಹೋದ ಹಿನ್ನೆಲೆ ಬೈಕ್ ನಿಂತಿದೆ. ರಕ್ತದ ಮಡುವಿನಲ್ಲಿದ್ದ ದೇಹವನ್ನು ನೋಡಿ ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆಗೆ ಆಸ್ಪತ್ರೆಗೆ ಹೋಗುತ್ತಿದ್ದೇವೆಂದು ಆರೋಪಿಗಳು ತಿಳಿಸಿದ್ದಾರೆ. ಅನುಮಾನಗೊಂಡ ಸಾರ್ವಜನಿಕರು ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ವ್ಯಕ್ತಿ ಸಾವನ್ನಪ್ಪಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ ಬೆನ್ನಲ್ಲೇ ಸ್ಥಳದಲ್ಲಿದ್ದ ಆರೋಪಿ ರಾಜೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ಸ್ನೇಹಿತನ ಪತ್ನಿಗೆ ಮೆಸೇಜ್ ಮಾಡುತ್ತಿದ್ದ ಆರೋಪದ ಮೇಲೆ ಮೂವರು ಸೇರಿ ಮಹೇಶ್ ದೇಹಕ್ಕೆ ಚಾಕು ಇರಿದು, ದೊಣ್ಣೆಯಿಂದ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ, ಡಿವೈಎಸ್‌ಪಿ ಯಶವಂತ ಕುಮಾರ್, ಸರ್ಕಲ್‌ ಇನ್ಸ್ ಪೆಕ್ಟರ್ ಬಿ.ಎಸ್ ಶ್ರೀಧರ್, ಸಬ್‌ ಇನ್ಸ್ ಪೆಕ್ಟರ್ ರವಿಕುಮಾರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಿರುಗಾವಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

-----------

17ಕೆಎಂಎನ್ ಡಿ11

ಮಹೇಶ್

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಭಾರ ಕುಲಪತಿ ಪ್ರೊ.ಶಿವಚಿತ್ತಪ್ಪರನ್ನು ವಜಾಗೊಳಿಸಿ: ಗೌರ್ನರ್ ಗೆ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ ಮನವಿ
ಟ್ಯಾಂಕರ್ ಡಿಕ್ಕಿ ಹೊಡೆದು ವೃದ್ಧೆ ಸ್ಥಳದಲ್ಲೇ ಸಾವು